ಬ್ರೇಕಿಂಗ್ ನ್ಯೂಸ್
09-06-21 11:33 am Shreeraksha, BoldSky Kannada ಡಾಕ್ಟರ್ಸ್ ನೋಟ್
ವ್ಯಕ್ತಿಯ ದೇಹದಲ್ಲಿ ಕೆಂಪು ಮತ್ತು ಬಿಳಿ ಎಂಬ ಎರಡು ರೀತಿಯ ರಕ್ತ ಕಣಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ದೇಹದಲ್ಲಿ ಕೆಂಪು ರಕ್ತ ಕಣಗಳು ಕಡಿಮೆ ಆದಾಗ, ದೇಹದಲ್ಲಿ ರಕ್ತದ ಕೊರತೆ ಉಂಟಾಗುವುದು. ಇದನ್ನು ರಕ್ತಹೀನತೆ ಎಂದು ಕರೆಯುತ್ತಾರೆ. ದೇಹದಲ್ಲಿ ಕಬ್ಬಿಣದ ಅಂಶವನ್ನು ಹೆಚ್ಚಿಸುವ ಮೂಲಕ, ವ್ಯಕ್ತಿಯ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚು ಮಾಡಬಹುದು.
ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆಯಿಂದಾಗಿ, ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ಅನೇಕ ಗಂಭೀರ ಕಾಯಿಲೆಗಳು ವ್ಯಕ್ತಿಯನ್ನು ಸುತ್ತುವರಿಯಲು ಪ್ರಾರಂಭಿಸುತ್ತವೆ. ಇಂತಹ ಪರಿಸ್ಥಿತಿಯಲ್ಲಿ, ದೇಹದಲ್ಲಿ ಕಬ್ಬಿಣದ ಕೊರತೆಯನ್ನು ನಿವಾರಿಸಲು ಸಹಾಯ ಮಾಡುವ ಕೆಲವು ನೈಸರ್ಗಿಕ ಮನೆಮದ್ದುಗಳನ್ನ ತಿಳಿದುಕೊಳ್ಳುವುದು ಮುಖ್ಯ.

ಹಿಮೋಗ್ಲೋಬಿನ್ ಕೊರತೆಗೆ ಕಾರಣಗಳೇನು
1. ಹೊಟ್ಟೆಗೆ ಸಂಬಂಧಿಸಿದ ಸೋಂಕುಗಳಿಂದ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು.
2. ಆಹಾರದಲ್ಲಿ ಪೌಷ್ಠಿಕಾಂಶದ ಕೊರತೆಯಿಂದ ಅಗತ್ಯ ಪ್ರಮಾಣದ ಕಬ್ಬಿಣ ಸಿಗದೇ ಇದ್ದಾಗ
3. ದೇಹದಿಂದ ಅಧಿಕ ಪ್ರಮಾಣದ ರಕ್ತಸ್ರಾವ ಆದಾಗ
4. ಗಂಭೀರ ಕಾಯಿಲೆಯಿಂದಾಗಿ ದೇಹದಲ್ಲಿ ರಕ್ತದ ಕೊರತೆ

ರಕ್ತದ ಕೊರತೆಯಾದಾಗ ಉಂಟಾಗುವ ಸಮಸ್ಯೆಗಳೇನು?:
1. ದೇಹ, ತಲೆ ಮತ್ತು ಎದೆಯಲ್ಲಿ ನೋವು
2. ರಕ್ತಹೀನತೆಯಿಂದ ಹೃದಯ,ಕಿಡ್ನಿ ಮತ್ತು ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಕಾಯಿಲೆಗಳ ಉದ್ಭವ
3. ಸ್ನಾಯುವಿನ ದೌರ್ಬಲ್ಯ
4. ಚರ್ಮದ ಬಣ್ಣ ಬದಲಾವಣೆ
5. ಗಾಯಗಳು ಬೇಗನೆ ಗುಣವಾಗುವುದಿಲ್ಲ
6.ಮುಟ್ಟಿನ ಅವಧಿಗಳಲ್ಲಿ ಹೆಚ್ಚು ನೋವು
7. ಕೈಕಾಲುಗಳು ತಣ್ಣಗಾಗುವುದು
ಹಿಮೋಗ್ಲೋಬಿನ್ ಕೊರತೆ ಲಕ್ಷಣಗಳು ಹೀಗಿವೆ :
1. ಬೇಗ ಆಯಾಸ ಆಗುವುದು
2. ಚರ್ಮ ಹಳದಿ ಬಣ್ಣಕ್ಕೆ ತಿರುಗುವುದು
3. ಪಾದದಡಿ ನೋವು
4. ಸ್ನಾಯು ನೋವು

ಈ ಮನೆಮದ್ದುಗಳು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತವೆ:
1. ಒಂದು ಲೋಟ ನೀರಿಗೆ ನಿಂಬೆ ಹಿಂಡಿ ಅದಕ್ಕೆ ಒಂದು ಚಮಚ ಜೇನುತುಪ್ಪವನ್ನು ಸೇರಿಸಿ, ಇದನ್ನು ಪ್ರತಿದಿನ ಕುಡಿಯುವುದರಿಂದ ದೇಹದಲ್ಲಿ ರಕ್ತ ವೇಗವಾಗಿ ಉತ್ಪಾದನೆ ಆಗುತ್ತದೆ.
2. ರಕ್ತಹೀನತೆಯ ಸಂದರ್ಭದಲ್ಲಿ, ಪಾಲಕ್ ಸೇವನೆಯು ಯಾವುದೇ ಔಷಧಿಗಿಂತ ಕಡಿಮೆಯಿಲ್ಲ. ಇದರಲ್ಲಿ ವಿಟಮಿನ್ ಎ, ಸಿ, ಬಿ 9, ಕಬ್ಬಿಣ, ಫೈಬರ್ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಪಾಲಕ್ ಒಂದರ ಸೇವನೆಯು ದೇಹದಲ್ಲಿ ಕಬ್ಬಿಣವನ್ನು ಶೇಕಡಾ 20 ರಷ್ಟು ಹೆಚ್ಚಿಸುತ್ತದೆ.
3. ಟೊಮೆಟೊ ಸೇವಿಸುವುದರಿಂದ ದೇಹದಲ್ಲಿನ ರಕ್ತದ ಪ್ರಮಾಣವೂ ವೇಗವಾಗಿ ಹೆಚ್ಚಾಗುತ್ತದೆ. ಇದಕ್ಕಾಗಿ ಪ್ರತಿದಿನ ಒಂದು ಲೋಟ ಟೊಮೆಟೊ ರಸ ಅಥವಾ ಜ್ಯುಸ್ ಸೇವಿಸಿ.
4. ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮೆಕ್ಕೆಜೋಳವನ್ನು ಸಹ ಸೇವಿಸಬಹುದು.
5. ಬೆಲ್ಲದೊಂದಿಗೆ ಕಡಲೆಕಾಯಿಯನ್ನು ಸೇರಿಸಿ ತಿನ್ನುವುದರಿಂದ ದೇಹದಲ್ಲಿನ ಕಬ್ಬಿಣದ ಕೊರತೆಯೂ ಕಡಿಮೆಯಾಗುವುದು.
(Kannada Copy of Boldsky Kannada)
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm