ಬ್ರೇಕಿಂಗ್ ನ್ಯೂಸ್
18-06-21 02:28 pm Reena TK, BoldSky Kannada ಡಾಕ್ಟರ್ಸ್ ನೋಟ್
ಮಳೆಗಾಲ ತುಂಬಾ ಹಿತವಾದ ಕಾಲವಾಗಿದೆ, ಪ್ರಕೃತಿಯಲ್ಲಿ ಹಸಿರು ತುಂಬಿರುತ್ತದೆ. ಆರ್ದ್ರತೆ ವಾತಾವರಣ. ಸೌಂದರ್ಯದ ದೃಷ್ಟಿಯಿಂದ ನೋಡುವುದಾದರೆ ಈ ವಾತಾವರಣ ಮೊಡವೆ ಸಮಸ್ಯೆ ಇರುವವರಿಗೆ ಸ್ವಲ್ಪ ತೊಂದರೆಯನ್ನುಂಟು ಮಾಡಬಹುದು. ಹೌದು ಈ ಸಮಯದಲ್ಲಿ ತ್ವಚೆ ಆರೈಕೆ ಕಡೆ ಗಮನ ಹರಿಸದಿದ್ದರೆ ಮೊಡವೆ ಹೆಚ್ಚಾಗಬಹುದು.
ಮಳೆಗಾಲದಲ್ಲಿ ಮೊಡವೆ ಸಮಸ್ಯೆಗೆ ಕಾರಣ:
ಬೇಸಿಗೆಯ ಉಷ್ಣತೆಯ ಜೊತೆಗೆ ಮಳೆಗಾಲದ ಆರ್ದ್ರತೆ ಸೇರಿದಾಗ ತ್ವಚೆಯಲ್ಲಿ ಸೆಬಮ್ ಉತ್ಪತ್ತಿ ಹೆಚ್ಚಾಗಿ ಇದು ಮುಖದಲ್ಲಿ ಎಣ್ಣೆಯಂಶ ಹೆಚ್ಚಿಸುವುದು, ಎಣ್ಣೆ ತ್ವಚೆಯಲ್ಲಿ ಬ್ಯಾಕ್ಟಿರಿಯಾಗಳು ಕೂತಾಗ ಮೊಡವೆ ಬರುವುದು. ಕೆಲವರಿಗಂತೂ ಉಳಿದ ಎರಡು ಕಾಲದಲ್ಲಿ ಮೊಡವೆ ಸಮಸ್ಯೆ ಇರಲ್ಲ, ಮಳೆಗಾಲ ಬಂತೆಂದರೆ ಮೊಡವೆ ಬರುತ್ತದೆ, ಮೊಡವೆ ಮುಖದಲ್ಲಿ ಮಾತ್ರವಲ್ಲ ಕೈಗಳಲ್ಲಿ, ಬೆನ್ನಿನಲ್ಲಿ ಕುತ್ತಿಗೆ ಭಾಗದಲ್ಲಿ, ಬೆನ್ನಿನಲ್ಲಿ, ಹಿಂಬದಿಯಲ್ಲೂ ಕೂಡ ಕಂಡು ಬರುವುದು.
ಮೊಡವೆ ಹೋಗಲಾಡಿಸುವುದು ಹೇಗೆ?
ಮೊಡವೆ ಹೋಗಲಾಡಿಸಲು ಮೊದಲಿಗೆ ನಿಮ್ಮದು ಯಾವ ಬಗೆಯ ತ್ವಚೆಯೆಂದು ಅರಿಯಬೇಕು, ಇಲ್ಲದಿದ್ದರೆ ಅತೀ ಹೆಚ್ಚು ಕ್ಲೆನ್ಸ್ ಮಾಡುವುದರಿಂದ ಹೆಚ್ಚು ಸೆಬಮ್ ಉತ್ಪತ್ತಿ ಹೆಚ್ಚಿ ಮೊಡವೆ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇಲ್ಲಿ ಮೊಡವೆ ಸಮಸ್ಯೆ ನಿವಾರಣೆಗೆ ಕೆಲವೊಂದು ಸರಳವಾದ ಟಿಪ್ಸ್ ನೀಡಿದ್ದೇವೆ ನೋಡಿ:

ಕಹಿ ಬೇವಿನ ಎಲೆ, ಎಣ್ಣೆ ಹಾಗೂ ಅದರ ಕಾಯಿ
* ಕಹಿ ಬೇವಿನ ಎಲೆಯನ್ನು ಅರಿದು ಪೇಸ್ಟ್ ಮಾಡಿ, ಅದಕ್ಕೆ ಸ್ವಲ್ಪ ಅರಿಶಿಣ ಪುಡಿ ಹಾಗೂ ಹಾಲು ಸೇರಿಸಿ ಮಿಶ್ರ ಮಾಡಿ, ಅದನ್ನು ಮುಖಕ್ಕೆ ಹಚ್ಚಬೇಕು. 10 ನಿಮಿಷದ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ.
* ಮತ್ತೊಂದು ವಿಧಾನವೆಂದರೆ ಕಹಿ ಬೇವಿನ ಎಣ್ಣೆಯನ್ನು ತೆಂಗಿನೆಣ್ಣೆ ಅಥವಾ ಬಾದಾಮಿ ಎಣ್ಣೆ ಜೊತೆ ಮಿಶ್ರ ಮಾಡಿ ಹಚ್ಚಿ. ಈ ರೀತಿ ಮಾಡುವುದರಿಂದ ಮೊಡವೆ ಕಡಿಮೆಯಾಗುವುದು.
* ಕಹಿ ಬೇವಿನ ಮರದ ಹಣ್ಣನ್ನು ಕಿತ್ತು ಅದರ ಒಳಭಾಗವನ್ನು ಮೊಡವೆ ಮೇಲೆ ಹಚ್ಚಿ, ಒಣಗಿದ ಮೇಲೆ ಬಿಸಿ ನೀರಿನಿಂದ ಮುಖ ತೊಳೆಯಿರಿ. ಈ ರೀತಿ ಪ್ರತಿದಿನ ಮಾಡಿ.

ತ್ವಚೆ ಸ್ವಚ್ಛತೆಗೆ
1 ಚಮಚ ಜೇನಿಗೆ 3 ಚಮಚ ಬ್ರೌನ್ ಶುಗರ್ ಹಾಕಿ ಮಿಶ್ರ ಮಾಡಿ ಅದರಿಂದ ಮುಖವನ್ನು ಸ್ಕ್ರಬ್ ಮಾಡಿ 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ಇದರಿಂದ ಮುಖದಲ್ಲಿ ಯಾವುದೇ ಕೊಳೆಯಿಲ್ಲದೆ ಸ್ವಚ್ಛವಾಗಿರುತ್ತದೆ.
ಆಲೂಗಡ್ಡೆಯಿಂದ ತ್ವಚೆ ಆರೈಕೆ
ನೀವು ಮೊಡವೆ ಸಮಸ್ಯೆ ನಿವಾರಣೆಗೆ ಆಲೂಗಡ್ಡೆಯನ್ನು ಬಳಸಿ. ಆಲೂಗಡ್ಡೆಯನ್ನು ಕತ್ತರಿಸಿ, ಅದನ್ನು ಮೊಡವೆ ಮೇಲೆ ಮೆಲ್ಲನೆ ತಿಕ್ಕಿ, ನಂತರ ಆ ರಸ ಒಣಗಿದ ಮೇಲೆ ಮುಖ ತೊಳೆಯಿರಿ.

ಎಣ್ಣೆ ತ್ವಚೆಯೇ:
ನಿಮ್ಮದು ಸ್ವಾಭಾವಿಕವಾಗಿ ಎಣ್ಣೆ ತ್ವಚೆಯಾಗಿದ್ದರೆ ಮೇಲೆ ಹೇಳಿರುವ ವಿಧಾನದಲ್ಲಿ ಮುಖವನ್ನು ಕ್ಲೆನ್ಸ್ ಮಾಡಿದ ಬಳಿಕ ಆಸ್ಟ್ರಿನ್ಜೆಂಟ್ ಬಳಸಿ. ಇದು ತ್ವಚೆಯಲ್ಲಿನ ಎಣ್ಣೆಯಂಶ ತೆಗೆಯಲು ಸಹಕಾರಿ

ಸಾಕಷ್ಟು ನೀರು ಕುಡಿಯಿರಿ, ಮುಖವನ್ನು ತೊಳೆದು ಸ್ವಚ್ಛವಾಗಿಡಿ
ಮಳೆಗಾಲ ಬಂತೆಂದರೆ ದಾಹ ಆಗಲ್ಲ ಎಂದು ನೀರು ಕುಡಿಯುವುದನ್ನು ಕಡಿಮೆ ಮಾಡುತ್ತಾರೆ. ಇದು ಕೂಡ ತ್ವಚೆ ಕಾಂತಿ ಕುಗ್ಗಲು ಒಂದು ಕಾರಣವಾಗಿದೆ. ಮಳೆಗಾಲವಾದರೂ ಕೂಡ ನೀವು ದಿನಾ 8 ಲೋಟ ನೀರು ಕುಡಿಯಿರಿ. ತಣ್ಣೀರು ಕುಡಿದರೆ ಬೇಗನೆ ಸಾಕು ಅನಿಸುವುದು, ಅದಕ್ಕೆ ಈ ಸಮಯದಲ್ಲಿ ಬಿಸಿ ನೀರು ಕುಡಿಯಿರಿ.
ಅಲ್ಲದೆ ಮುಖವನ್ನು 3-4 ಬಾರಿ ತೊಳೆಯಿರಿ. ಹೀಗೆ ಮಾಡುವುದರಿಂದ ಮೊಡವೆ ಸಮಸ್ಯೆ ಕಡಿಮೆಯಾಗಿ ಆಕರ್ಷಕ ತ್ವಚೆ ಕಾಂತಿ ಪಡೆಯಬಹುದು.
(Kannada Copy of Boldsky Kannada)
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm