ಬ್ರೇಕಿಂಗ್ ನ್ಯೂಸ್
01-07-21 02:22 pm Sumalatha N, BoldSky Kannada ಡಾಕ್ಟರ್ಸ್ ನೋಟ್
ನವದೆಹಲಿ, ಜುಲೈ 01: ದೇಶದಲ್ಲಿ 2-17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ಕೊರೊನಾ ಲಸಿಕೆಯ 2/3ನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಅನುಮತಿ ನೀಡದಂತೆ ಸರ್ಕಾರದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ.
12-17 ವಯಸ್ಸಿನ ಹಾಗೂ 2-11 ವಯಸ್ಸಿನ 920 ಮಕ್ಕಳ ಮೇಲೆ ಕೋವೊವ್ಯಾಕ್ಸ್ ಲಸಿಕೆಯ ಪ್ರಯೋಗಕ್ಕೆ ಅನುಮತಿ ಕೋರಿ ಪುಣೆ ಮೂಲದ ಲಸಿಕಾ ಅಭಿವೃದ್ಧಿ ಸಂಸ್ಥೆ ಸೆರಂ ಇನ್ಸ್ಟಿಟ್ಯೂಟ್ ಸೋಮವಾರ ಕೇಂದ್ರ ಔಷಧ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಿತ್ತು.

ಆದರೆ ಸದ್ಯಕ್ಕೆ ಈ ಲಸಿಕೆಗೆ ಬೇರೆ ಯಾವುದೇ ದೇಶದಲ್ಲಿ ಅನುಮೋದನೆ ನೀಡಲಾಗಿಲ್ಲ. ಹೀಗಾಗಿ ಮಕ್ಕಳ ಮೇಲೆ ಪ್ರಯೋಗ ಸಲ್ಲದು ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಕೊರೊನಾ ವಿಷಯ ತಜ್ಞರು ಹೇಳಿದ್ದಾರೆ.
ಮಕ್ಕಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ಪರಿಗಣಿಸಲು ಕಂಪನಿಯು ವಯಸ್ಕರಲ್ಲಿ ನಡೆಯುತ್ತಿರುವ ಕ್ಲಿನಿಕಲ್ ಪ್ರಯೋಗದ ಕೋವೊವ್ಯಾಕ್ಸ್ ಸುರಕ್ಷತೆ ಹಾಗೂ ಲಸಿಕೆ ಪರಿಣಾಮದ ಸಂಪೂರ್ಣ ವರದಿಯನ್ನು ಸಲ್ಲಿಸಬೇಕು ಎಂದು ಸಂಸ್ಥೆಗೆ ಶಿಫಾರಸ್ಸು ಮಾಡಿದೆ. ತಜ್ಞರ ಸಮಿತಿಯ ಈ ಶಿಫಾರಸ್ಸುಗಳನ್ನು ಡಿಸಿಜಿಐ ಅನುಮೋದಿಸಿರುವುದಾಗಿ ತಿಳಿದುಬಂದಿದೆ.

ಅಮೆರಿಕ ಮೂಲದ ಲಸಿಕೆ ತಯಾರಕ ನೋವಾವ್ಯಾಕ್ಸ್ ಇಂಕ್, ಕಡಿಮೆ, ಮಧ್ಯಮ ಆದಾಯದ ದೇಶಗಳಲ್ಲಿ ಹಾಗೂ ಭಾರತದಲ್ಲಿ NVX-CoV2373 ಅಭಿವೃದ್ಧಿ ಹಾಗೂ ವಾಣಿಜ್ಯೀಕರಣಕ್ಕಾಗಿ ಸೆರಂ ಇನ್ಸ್ಟಿಟ್ಯೂಟ್ ಜೊತೆ ಪರವಾನಗಿ ಒಪ್ಪಂದ ಮಾಡಿಕೊಂಡಿತ್ತು.
ಕೋವೊವ್ಯಾಕ್ಸ್ ಕ್ಲಿನಿಕಲ್ ಪ್ರಯೋಗಗಳು ಭಾರತದಲ್ಲಿ ಮಾರ್ಚ್ನಲ್ಲಿ ಪ್ರಾರಂಭವಾಗಿದ್ದು, ಸೆಪ್ಟೆಂಬರ್ ವೇಳೆಗೆ ವಯಸ್ಕರಿಗೆ ಈ ಲಸಿಕೆಯನ್ನು ಬಿಡುಗಡೆ ಮಾಡಲು ಸೆರಂ ಸಂಸ್ಥೆ ಯೋಜನೆ ರೂಪಿಸಿದೆ.
(Kannada Copy of One India Kannada)
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm