ಬ್ರೇಕಿಂಗ್ ನ್ಯೂಸ್
01-07-21 02:22 pm Sumalatha N, BoldSky Kannada ಡಾಕ್ಟರ್ಸ್ ನೋಟ್
ನವದೆಹಲಿ, ಜುಲೈ 01: ದೇಶದಲ್ಲಿ 2-17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ಕೊರೊನಾ ಲಸಿಕೆಯ 2/3ನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಅನುಮತಿ ನೀಡದಂತೆ ಸರ್ಕಾರದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ.
12-17 ವಯಸ್ಸಿನ ಹಾಗೂ 2-11 ವಯಸ್ಸಿನ 920 ಮಕ್ಕಳ ಮೇಲೆ ಕೋವೊವ್ಯಾಕ್ಸ್ ಲಸಿಕೆಯ ಪ್ರಯೋಗಕ್ಕೆ ಅನುಮತಿ ಕೋರಿ ಪುಣೆ ಮೂಲದ ಲಸಿಕಾ ಅಭಿವೃದ್ಧಿ ಸಂಸ್ಥೆ ಸೆರಂ ಇನ್ಸ್ಟಿಟ್ಯೂಟ್ ಸೋಮವಾರ ಕೇಂದ್ರ ಔಷಧ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಿತ್ತು.

ಆದರೆ ಸದ್ಯಕ್ಕೆ ಈ ಲಸಿಕೆಗೆ ಬೇರೆ ಯಾವುದೇ ದೇಶದಲ್ಲಿ ಅನುಮೋದನೆ ನೀಡಲಾಗಿಲ್ಲ. ಹೀಗಾಗಿ ಮಕ್ಕಳ ಮೇಲೆ ಪ್ರಯೋಗ ಸಲ್ಲದು ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಕೊರೊನಾ ವಿಷಯ ತಜ್ಞರು ಹೇಳಿದ್ದಾರೆ.
ಮಕ್ಕಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ಪರಿಗಣಿಸಲು ಕಂಪನಿಯು ವಯಸ್ಕರಲ್ಲಿ ನಡೆಯುತ್ತಿರುವ ಕ್ಲಿನಿಕಲ್ ಪ್ರಯೋಗದ ಕೋವೊವ್ಯಾಕ್ಸ್ ಸುರಕ್ಷತೆ ಹಾಗೂ ಲಸಿಕೆ ಪರಿಣಾಮದ ಸಂಪೂರ್ಣ ವರದಿಯನ್ನು ಸಲ್ಲಿಸಬೇಕು ಎಂದು ಸಂಸ್ಥೆಗೆ ಶಿಫಾರಸ್ಸು ಮಾಡಿದೆ. ತಜ್ಞರ ಸಮಿತಿಯ ಈ ಶಿಫಾರಸ್ಸುಗಳನ್ನು ಡಿಸಿಜಿಐ ಅನುಮೋದಿಸಿರುವುದಾಗಿ ತಿಳಿದುಬಂದಿದೆ.

ಅಮೆರಿಕ ಮೂಲದ ಲಸಿಕೆ ತಯಾರಕ ನೋವಾವ್ಯಾಕ್ಸ್ ಇಂಕ್, ಕಡಿಮೆ, ಮಧ್ಯಮ ಆದಾಯದ ದೇಶಗಳಲ್ಲಿ ಹಾಗೂ ಭಾರತದಲ್ಲಿ NVX-CoV2373 ಅಭಿವೃದ್ಧಿ ಹಾಗೂ ವಾಣಿಜ್ಯೀಕರಣಕ್ಕಾಗಿ ಸೆರಂ ಇನ್ಸ್ಟಿಟ್ಯೂಟ್ ಜೊತೆ ಪರವಾನಗಿ ಒಪ್ಪಂದ ಮಾಡಿಕೊಂಡಿತ್ತು.
ಕೋವೊವ್ಯಾಕ್ಸ್ ಕ್ಲಿನಿಕಲ್ ಪ್ರಯೋಗಗಳು ಭಾರತದಲ್ಲಿ ಮಾರ್ಚ್ನಲ್ಲಿ ಪ್ರಾರಂಭವಾಗಿದ್ದು, ಸೆಪ್ಟೆಂಬರ್ ವೇಳೆಗೆ ವಯಸ್ಕರಿಗೆ ಈ ಲಸಿಕೆಯನ್ನು ಬಿಡುಗಡೆ ಮಾಡಲು ಸೆರಂ ಸಂಸ್ಥೆ ಯೋಜನೆ ರೂಪಿಸಿದೆ.
(Kannada Copy of One India Kannada)
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm