ಬ್ರೇಕಿಂಗ್ ನ್ಯೂಸ್
01-07-21 02:22 pm Sumalatha N, BoldSky Kannada ಡಾಕ್ಟರ್ಸ್ ನೋಟ್
ನವದೆಹಲಿ, ಜುಲೈ 01: ದೇಶದಲ್ಲಿ 2-17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ಕೊರೊನಾ ಲಸಿಕೆಯ 2/3ನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಅನುಮತಿ ನೀಡದಂತೆ ಸರ್ಕಾರದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ.
12-17 ವಯಸ್ಸಿನ ಹಾಗೂ 2-11 ವಯಸ್ಸಿನ 920 ಮಕ್ಕಳ ಮೇಲೆ ಕೋವೊವ್ಯಾಕ್ಸ್ ಲಸಿಕೆಯ ಪ್ರಯೋಗಕ್ಕೆ ಅನುಮತಿ ಕೋರಿ ಪುಣೆ ಮೂಲದ ಲಸಿಕಾ ಅಭಿವೃದ್ಧಿ ಸಂಸ್ಥೆ ಸೆರಂ ಇನ್ಸ್ಟಿಟ್ಯೂಟ್ ಸೋಮವಾರ ಕೇಂದ್ರ ಔಷಧ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಿತ್ತು.

ಆದರೆ ಸದ್ಯಕ್ಕೆ ಈ ಲಸಿಕೆಗೆ ಬೇರೆ ಯಾವುದೇ ದೇಶದಲ್ಲಿ ಅನುಮೋದನೆ ನೀಡಲಾಗಿಲ್ಲ. ಹೀಗಾಗಿ ಮಕ್ಕಳ ಮೇಲೆ ಪ್ರಯೋಗ ಸಲ್ಲದು ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಕೊರೊನಾ ವಿಷಯ ತಜ್ಞರು ಹೇಳಿದ್ದಾರೆ.
ಮಕ್ಕಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ಪರಿಗಣಿಸಲು ಕಂಪನಿಯು ವಯಸ್ಕರಲ್ಲಿ ನಡೆಯುತ್ತಿರುವ ಕ್ಲಿನಿಕಲ್ ಪ್ರಯೋಗದ ಕೋವೊವ್ಯಾಕ್ಸ್ ಸುರಕ್ಷತೆ ಹಾಗೂ ಲಸಿಕೆ ಪರಿಣಾಮದ ಸಂಪೂರ್ಣ ವರದಿಯನ್ನು ಸಲ್ಲಿಸಬೇಕು ಎಂದು ಸಂಸ್ಥೆಗೆ ಶಿಫಾರಸ್ಸು ಮಾಡಿದೆ. ತಜ್ಞರ ಸಮಿತಿಯ ಈ ಶಿಫಾರಸ್ಸುಗಳನ್ನು ಡಿಸಿಜಿಐ ಅನುಮೋದಿಸಿರುವುದಾಗಿ ತಿಳಿದುಬಂದಿದೆ.

ಅಮೆರಿಕ ಮೂಲದ ಲಸಿಕೆ ತಯಾರಕ ನೋವಾವ್ಯಾಕ್ಸ್ ಇಂಕ್, ಕಡಿಮೆ, ಮಧ್ಯಮ ಆದಾಯದ ದೇಶಗಳಲ್ಲಿ ಹಾಗೂ ಭಾರತದಲ್ಲಿ NVX-CoV2373 ಅಭಿವೃದ್ಧಿ ಹಾಗೂ ವಾಣಿಜ್ಯೀಕರಣಕ್ಕಾಗಿ ಸೆರಂ ಇನ್ಸ್ಟಿಟ್ಯೂಟ್ ಜೊತೆ ಪರವಾನಗಿ ಒಪ್ಪಂದ ಮಾಡಿಕೊಂಡಿತ್ತು.
ಕೋವೊವ್ಯಾಕ್ಸ್ ಕ್ಲಿನಿಕಲ್ ಪ್ರಯೋಗಗಳು ಭಾರತದಲ್ಲಿ ಮಾರ್ಚ್ನಲ್ಲಿ ಪ್ರಾರಂಭವಾಗಿದ್ದು, ಸೆಪ್ಟೆಂಬರ್ ವೇಳೆಗೆ ವಯಸ್ಕರಿಗೆ ಈ ಲಸಿಕೆಯನ್ನು ಬಿಡುಗಡೆ ಮಾಡಲು ಸೆರಂ ಸಂಸ್ಥೆ ಯೋಜನೆ ರೂಪಿಸಿದೆ.
(Kannada Copy of One India Kannada)
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm