ಬ್ರೇಕಿಂಗ್ ನ್ಯೂಸ್
02-07-21 02:23 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಬೇಸಿಗೆಯ ದಿನಗಳಲ್ಲಿ ಅತಿಯಾದ ಬಾಯಾರಿಕೆ ಆಗುವುದು ಸಾಮಾನ್ಯ. ಆದರೆ ಬೇರೆ ಋತುಮಾನದಲ್ಲೂ ಹೇಳಿಕೊಳ್ಳಲಾಗದಷ್ಟು ಬಾಯಾರಿಕೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ಇದು ನೀವು ಯಾವುದೋ ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದೀರಾ ಎಂದು ಸೂಚಿಸುವ ಲಕ್ಷಣವಾಗಿದೆ. ಇಂತಹ ಸಮಸ್ಯೆಗಳಿಗೆ ಚಿಕಿತ್ಸೆ ನೀಡದಿದ್ದರೆ ಮುಂದೆ ಅದು ಅಪಾಯದ ಮಟ್ಟಕ್ಕೆ ತಲುಪಬಹುದು. ಆದ್ದರಿಂದ ಇಲ್ಲಿ ನಾವು ಅತಿಯಾಗಿ ಬಾಯಾರಿಕೆ ಆಗುವುದು ಯಾವ ಆರೋಗ್ಯ ಸಮಸ್ಯೆಗಳೆಂಬುದನ್ನು ಹೇಳಿದ್ದೇವೆ.

ಮಧುಮೇಹ:
ನಿಮ್ಮ ದೇಹದ ಜೀವಕೋಶಗಳಲ್ಲಿ ಇನ್ಸುಲಿನ್ ಕಡಿಎಯಾದಾಗ, ರಕ್ತದಿಂದ ಹೆಚ್ಚುವರಿ ಸಕ್ಕರೆಯನ್ನು ತೆಗೆದುಹಾಕಲು ಮೂತ್ರಪಿಂಡವು ಹೆಚ್ಚು ಶ್ರಮಿಸಬೇಕು. ಇದರ ಪರಿಣಾಮವೇ ಪದೇ ಪದೇ ಮೂತ್ರ ವಿಸರ್ಜನೆ ಆಗುವುದು. ಇದು ಹೆಚ್ಚು ನೀರು ಕುಡಿಯಲು ಪ್ರೇರೆಪಿಸುತ್ತದೆ. ಆದ್ದರಿಂದ ಮೊದಲಿಗಿಂತ ಹೆಚ್ಚು ನೀರನ್ನು ಕುಡಿಯಲು ಬಯಸುತ್ತೀರಿ. ಆಗಾಗ್ಗೆ ಮೂತ್ರ ವಿಸರ್ಜನೆ ಮತ್ತು ಅತಿಯಾದ ಬಾಯಾರಿಕೆ ಮಧುಮೇಹದ ಎರಡು ಆರಂಭಿಕ ಚಿಹ್ನೆಗಳಾಗಿವೆ.
ರಕ್ತಹೀನತೆ:
ರಕ್ತಹೀನತೆ ಎಂದರೆ ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗುವುದು. ಅಸಮರ್ಪಕ ಆಹಾರ ಅಥವಾ ಹೆಚ್ಚು ರಕ್ತಸ್ರಾವದಂತಹ ಹಲವಾರು ಕಾರಣಗಳಿಂದ ಇದು ಉಂಟಾಗುತ್ತದೆ. ನಿರ್ಜಲೀಕರಣವು ರಕ್ತಹೀನತೆಯ ಸಾಮಾನ್ಯ ಸಂಕೇತವಾಗಿದ್ದು, ನೀವು ತೀವ್ರವಾದ ರಕ್ತಹೀನತೆಯನ್ನು ಹೊಂದಿದಾಗ ಅತಿಯಾಗಿ ಬಾಯಾರಿಕೆ ಆಗಲು ಆರಂಭವಾಗುತ್ತದೆ. ತಲೆತಿರುಗುವಿಕೆ, ಆಯಾಸ, ಬೆವರುವುದು ಈ ಸ್ಥಿತಿಯ ಇತರ ಲಕ್ಷಣಗಳಾಗಿವೆ.

ಹೈಪರ್ಕಾಲ್ಸೆಮಿಯಾ:
ಹೈಪರ್ಕಾಲ್ಸೆಮಿಯಾ ಎನ್ನುವುದು ದೇಹದಲ್ಲಿರುವ ಕ್ಯಾಲ್ಸಿಯಂ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ಹೆಚ್ಚಾಗುವ ಸ್ಥಿತಿಯಾಗಿದೆ. ಅತಿಯಾದ ಪ್ಯಾರಾಥೈರಾಯ್ಡ್ ಗ್ರಂಥಿಗಳು, ಕ್ಷಯ ಮತ್ತು ಕ್ಯಾನ್ಸರ್ ನಿಂದಲೂ ಇದು ಸಂಭವಿಸಬಹುದು. ಬಾಯಾರಿಕೆಯ ಭಾವನೆ ಹೈಪರ್ಕಾಲ್ಸೆಮಿಯಾದ ಮೊದಲ ಲಕ್ಷಣವಾಗಿದೆ. ರಕ್ತದಲ್ಲಿನ ಕ್ಯಾಲ್ಸಿಯಂ ಹೆಚ್ಚಾದಾಗ ಮೂಳೆಗಳು ದುರ್ಬಲಗೊಳ್ಳಬಹುದು ಜೊತೆಗೆ ಮೂತ್ರಪಿಂಡದಲ್ಲಿ ಕಲ್ಲುಗಳು ಉಂಟಾಗಬಹುದು.
ಬಾಯಿ ಒಣಗುವುದು:
ಲಾಲಾರಸ ಗ್ರಂಥಿಗಳು ಸಾಕಷ್ಟು ಲಾಲಾರಸವನ್ನು ಬಿಡುಗಡೆ ಮಾಡದಿದ್ದಾಗ, ಅದು ನಿಮಗೆ ಅತಿಯಾದ ಬಾಯಾರಿಕೆಯನ್ನು ಉಂಟುಮಾಡಬಹುದು. ಕೆಲವು ಔಷಧಿಗಳು, ಕ್ಯಾನ್ಸರ್ ಅಥವಾ ತಂಬಾಕು ಬಳಕೆಯಂತಹ ಅಭ್ಯಾಸಗಳಿಂದ ಇದು ಸಂಭವಿಸಬಹುದು. ಇದರ ಇತರ ಲಕ್ಷಣಗಳೆಂದರೆ ಬಾಯಿಯ ದುರ್ವಾಸನೆ, ರುಚಿಯಲ್ಲಿ ಬದಲಾವಣೆ, ಒಸಡಿನಲ್ಲಿ ಸಮಸ್ಯೆ ಮತ್ತು ಅಗಿಯುವುದರಲ್ಲಿ ತೊಂದರೆ ಉಂಟಾಗಬಹುದು.

ಗರ್ಭಧಾರಣೆ:
ಗರ್ಭಧಾರಣೆಯ ಹಲವಾರು ಲಕ್ಷಣಗಳಲ್ಲಿ ಅತಿಯಾದ ಬಾಯಾರಿಕೆ ಕೂಡ ಒಂದು. ಇದು ಸಮಸ್ಯೆಯಲ್ಲ, ಎಚ್ಚರಿಕೆಯ ಚಿಹ್ನೆ ಅಷ್ಟೇ. ಮೊದಲ ತ್ರೈಮಾಸಿಕದಲ್ಲಿ, ರಕ್ತದ ಪ್ರಮಾಣವು ಹೆಚ್ಚಾಗುತ್ತದೆ, ಇದರಿಂದ ಮೂತ್ರವೂ ಹೆಚ್ಚಾಗುವುದು. ಆಗ ನಿಮ್ಮ ದೇಹದಲ್ಲಾಗುವ ನೀರಿನ ನಷ್ಟದಿಂದ ಬಾಯಾರಿಕೆ ಉಂಟಾಗುತ್ತದೆ. ಇದು ನೀರಿನ ನಷ್ಟದ ಪ್ರಮಾಣವನ್ನು ನೀವು ಪುನಃ ತುಂಬಿಸಬೇಕೆನ್ನುವ ಸೂಚನೆಯಾಗಿದೆ.
(Kannada Copy of Boldsky Kannada)
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm