ಬ್ರೇಕಿಂಗ್ ನ್ಯೂಸ್
07-07-21 03:16 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಲೇಡಿ ಫಿಂಗರ್ ಎಂದೇ ಕರೆಯಲ್ಪಡುವ ಬೆಂಡೆಕಾಯಿ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಇದೇ ಬೆಂಡೆಕಾಯಿ ಲೇಡಿಸ್ ಸೌಂದರ್ಯವನ್ನು ಹೆಚ್ಚಿಸಲು ಸಹಾಯ ಮಾಡುವುದು ಎಂದು ನಿಮಗೆ ತಿಳಿದಿದೆಯೇ? ಹೌದು, ಆರೋಗ್ಯಕಾರಿ ಬೆಂಡೆಕಾಯಿ, ಮಹಿಳೆಯರ ತ್ವಚೆಯ ಸಮಸ್ಯೆಗಳಾದ ಮೊಡವೆ, ಸುಕ್ಕು ಮೊದಲಾದವುಗಳನ್ನು ಕಡಿಮೆ ಮಾಡುವುದು. ಅದನ್ನು ಹೇಗೆ ಬಳಸಬೇಕು ಎಂಬುದನ್ನು ಈ ಕೆಳಗೆ ನೀಡಲಾಗಿದೆ:
ವಿಟಮಿನ್ ಭರಿತವಾಗಿದೆ ಈ ತರಕಾರಿ:
ಬೆಂಡೆಕಾಯಿ ಅಥವಾ ಲೇಡಿ ಫಿಂಗರ್ ವಿಟಮಿನ್ ಸಿ ಮತ್ತು ಮೆಗ್ನೀಸಿಯಮ್ ನ ಉತ್ತಮ ಮೂಲವಾಗಿದೆ. ಇದರ ಒಂದು ಗ್ಲಾಸ್ ಜ್ಯೂಸ್ 6 ಗ್ರಾಂ ಕಾರ್ಬೋಹೈಡ್ರೇಟ್, 80 ಮೈಕ್ರೋಗ್ರಾಂ ಫೋಲೇಟ್, 3 ಗ್ರಾಂ ಫೈಬರ್ ಮತ್ತು 2 ಗ್ರಾಂ ಪ್ರೋಟೀನ್ ನ್ನು ಹೊಂದಿರುವುದು. ಆದ್ದರಿಂದ ಇದು ಕೂಡ ಆರೋಗ್ಯಕ್ಕೆ ಒಳ್ಳೆಯದೇ. ಇಂತಹ ಪೋಷಕಾಂಶಯುಕ್ತ ಬೆಂಡೆಕಾಯಿಯನ್ನು ತ್ವಚೆಗೆ ಹೇಗೆ ಸಹಕಾರಿ ಎಂಬುದನ್ನು ನೋಡೋಣ.

ಸುಕ್ಕುಗಳನ್ನು ಕಡಿಮೆ ಮಾಡಲು ಹೀಗೆ ಬಳಸಿ:
ವಯಸ್ಸಾದಂತೆ ಚರ್ಮ ಸುಕ್ಕುಗಟ್ಟುವುದು ಸಾಮಾನ್ಯ. ಆದರೆ ಹಲವಾರು ಕಾರಣಗಳಿಂದ ಕೆಲವೊಮ್ಮೆ ಬೇಗನೇ ಮುಖ ಸುಕ್ಕುಗಟ್ಟುವುದು. ಹೀಗೆ ವಯಸ್ಸಿಗೆ ಮುನ್ನವೇ ಸುಕ್ಕಾಗುವುದನ್ನು ತಡೆಗಟ್ಟಲು ಬೆಂಡೆಕಾಯಿ ಬಳಸಬಹುದು. ಇದು ನಿಮ್ಮ ತ್ವಚೆ ಸುಕ್ಕಾಗುವದನ್ನು ವಿಳಂಬಗೊಳಿಸುವುದು. ಅದಕ್ಕಾಗಿ ಈ ಕೆಳಗಿನ ವಿಧಾನಗಳನ್ನು ಅನುಸರಿಸಿ. ಎರಡು ಮಧ್ಯಮ ಗಾತ್ರದ ಬೆಂಡೆಕಾಯಿಗಳನ್ನು ತೆಗೆದುಕೊಂಡು ಅವುಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಪೇಸ್ಟ್ ತಯಾರಿಸಿ. ನಂತರ ನೀರು ಸೇರಿಸದೆ ಮುಖಕ್ಕೆ ಹಚ್ಚಿ. ನಿಮ್ಮ ಮುಖ ಮತ್ತು ಕುತ್ತಿಗೆಯ ಮೇಲೂ ಇದನ್ನು ಹಚ್ಚಬಹುದು. ಸ್ವಲ್ಪ ಸಮಯದ ನಂತರ ಸಾಮಾನ್ಯ ನೀರಿನಿಂದ ತೊಳೆಯಿರಿ.

ಮೊಡವೆಗಳನ್ನು ನಿವಾರಿಸಲು:
ಮೊಡವೆಗಳು ಎಲ್ಲರನ್ನು ಕಾಡುವ ಸಾಮಾನ್ಯ ಸಮಸ್ಯೆ. ಇದು ಗಂಡು-ಹೆಣ್ಣು ಎಂಬ ಭೇದವಿಲ್ಲ. ಎಲ್ಲರನ್ನು ಕಾಡುವ ಈ ಚರ್ಮ ಸಮಸ್ಯೆಗೆ ಬೆಂಡೆಕಾಯಿ ಬಳಸಬಹುದು. ಅದಕ್ಕಾಗಿ ಈ ಕೆಳಗಿನ ವಿಧಾನ ಬಳಸಿ. 2 ರಿಂದ 3 ತಾಜಾ ಬೆಂಡೆಕಾಯಿ ತೆಗೆದುಕೊಂಡು, ಸ್ವಚ್ಛಗೊಳಿಸಿ. ನಂತರ ಅದನ್ನು ಕುದಿಸಿ, ತಣ್ಣಗಾಗಲು ಬಿಡಿ. ನಂತೆ ಪೇಸ್ಟ್ ತಯಾರಿಸಿ. ಈಗ ಪೇಸ್ಟ್ ಗೆ 2 ರಿಂದ 3 ಹನಿ ನಿಂಬೆ ರಸ ಸೇರಿಸಿ ಮಿಶ್ರಣ ಮಾಡಿ. ನಿಮ್ಮ ಸ್ವಚ್ಛ ಮುಖದ ಮೇಲೆ ಹಚ್ಚಿ. ಅದು ಒಣಗುವವರೆಗೆ ಮುಖದ ಮೇಲೆ ಇರಿಸಿ. ನಂತರ ಅದನ್ನು ತಣ್ಣೀರಿನಿಂದ ತೊಳೆಯಿರಿ.

ಸೋರಿಯಾಸಿಸ್ ಸಮಸ್ಯೆಗೆ:
ಸೋರಿಯಾಸಿಸ್ ಎನ್ನುವುದು ಹೆಚ್ಚಿನ ಜನರನ್ನು ಕಾಡುವ ಚರ್ಮ ಸಮಸ್ಯೆಗಳಲ್ಲಿ ಒಂದಾಗಿದೆ. ಇಂತಹ ಸಮಸ್ಯೆ ನಿವಾರಿಸುವಲ್ಲೂ ಬೆಂಡೆಕಾಯಿ ಸಹಾಯ ಮಾಡುವುದು. ಅದಕ್ಕಾಗಿ ತಾಜಾ ಬೆಂಡೆಕಾಯಿಯನ್ನು ಬಳಸಿ ಪೇಸ್ಟ್ ತಯಾರಿಸಿ. ಅವುಗಳನ್ನು ಸೋರಿಯಾಸಿಸ್ ಆದ ಜಾಗದಲ್ಲಿ ಹಚ್ಚಿ. ಇದನ್ನು ಇತರ ಚರ್ಮ ಸಮಸ್ಯೆಯಿಂದ ಬಳಲುತ್ತಿರುವವರು ಸಹ ಪ್ರಯತ್ನಿಸಬಹುದು. ನೀವು ಚರ್ಮದ ಮೇಲೆ ಈ ಪೇಸ್ಟ ಹಚ್ಚಿಕೊಂಡಾಗ ನಿಮ್ಮ ಚರ್ಮವು ಬೆಂಡಕಾಯಿಯಲ್ಲಿರುವ ಓಕ್ರಾ ಜೆಲ್ ಅನ್ನು ಹೀರಿಕೊಳ್ಳುತ್ತದೆ ಮತ್ತು ಆ ಪ್ರದೇಶದ ಮೇಲೆ ತೆಳುವಾದ ಪದರವನ್ನು ಬಿಡುತ್ತದೆ. ಈ ಪ್ಯಾಕ್ ಒಣಗಿಸಿ, ನಂತರ ತೊಳೆಯಿರಿ.
(Kannada Copy of Boldsky Kannada)
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm