ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm