ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm