ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm