ಬ್ರೇಕಿಂಗ್ ನ್ಯೂಸ್
27-07-21 12:47 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಕೂದಲಿನ ತುದಿಗಳು ಸೀಳಾಗುವುದು ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆಯಾಗಿದೆ. ಈ ಸೀಳು ಕೂದಲುಗಳು ಕೂದಲನ್ನು ಒಣಗಿದಂತೆ ಕಾಣುವಂತೆ ಮಾಡುತ್ತದೆ ಜೊತೆಗೆ ಕೂದಲಿನ ಬೆಳವಣಿಗೆಯನ್ನು ಸಹ ನಿಲ್ಲಿಸುತ್ತವೆ. ಸ್ಟ್ರೈಟ್ನಿಂಗ್ ಉಪಕರಣಗಳು ಅಥವಾ ರಾಸಾಯನಿಕಗಳಿಂದ ಈ ಹಾನಿ ಸಂಭವಿಸುತ್ತದೆ. ಇದನ್ನು ಹೋಗಲಾಡಿಸಲು ಮನೆಯಲ್ಲಿ ತಯಾರಿಸಿದ ಹೇರ್ ಮಾಸ್ಕ್ ಬಳಸುವುದು ಉತ್ತಮ. ಏಕೆಂದರೆ ಇವುಗಳಿಂದ ಯಾವುದೇ ಅಡ್ಡಪರಿಣಾಮಗಳು ಉಂಟಾಗುವುದಿಲ್ಲ.
ಮೊಸರು ಮತ್ತು ಆಲಿವ್ ಎಣ್ಣೆ ಮಾಸ್ಕ್:
ಆಲಿವ್ ಎಣ್ಣೆಯಲ್ಲಿ ಕೊಬ್ಬಿನಾಮ್ಲಗಳು ಇದ್ದು, ಕೂದಲಿಗೆ ಅಗತ್ಯವಿರುವ ತೇವಾಂಶ ನೀಡುತ್ತವೆ. ಜೊತೆಗೆ ಕೂದಲನ್ನು ಹಾನಿಯಾಗದಂತೆ ರಕ್ಷಿಸುತ್ತವೆ. ಮೊಸರು ಲ್ಯಾಕ್ಟಿಕ್ ಆಮ್ಲವನ್ನು ಹೊಂದಿದ್ದು, ನೆತ್ತಿಯಿಂದ ಡೆಡ್ ಸೆಲ್ ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಆರೋಗ್ಯಕರ ನೆತ್ತಿ ಆರೋಗ್ಯಕರ ಕೂದಲನ್ನು ಉತ್ಪಾದಿಸುತ್ತದೆ. ಇದಕ್ಕಾಗಿ ಅರ್ಧ ಚಪ್ ಮೊಸರನ್ನು 2 ಚಮಚ ಆಲಿವ್ ಎಣ್ಣೆಯೊಂದಿಗೆ ಬೆರೆಸಿ ಇದನ್ನು ನಿಮ್ಮ ಕೂದಲಿಗೆ ಮಾಸ್ಕ ನಂತೆ ಹಚ್ಚಿ, 20 ರಿಂದ 30 ನಿಮಿಷಗಳ ಕಾಲ ಬಿಡಿ ನಂತರ ತೊಳೆಯಿರಿ.
ಮೊಟ್ಟೆಯ ಹಳದಿ ಮತ್ತು ಜೇನುತುಪ್ಪ ಮಾಸ್ಕ್:
ಜೇನುತುಪ್ಪವು ನೈಸರ್ಗಿಕ ಹ್ಯೂಮೆಕ್ಟಂಟ್ ಆಗಿದ್ದು ಅದು ಶುಷ್ಕತೆಯನ್ನು ತಡೆದು, ತೇವಾಂಶವನ್ನು ಕೂದಲಿಗೆ ನೀಡುವುದು. ಮೊಟ್ಟೆಗಳಲ್ಲಿ ಅಮೈನೊ ಆಮ್ಲಗಳು ಸಮೃದ್ಧವಾಗಿದ್ದು, ಕೂದಲು ಸೀಳಾಗುವುದನ್ನು ತಡೆಯುತ್ತದೆ. ಈ ಎರಡು ಪದಾರ್ಥಗಳು ಕೂದಲಿನ ಹೊಳಪು, ಸದೃಢತೆ ಮತ್ತು ಪ್ರಮಾಣ ಪುನಃಸ್ಥಾಪಿಸಬಹುದು. ಇದಕ್ಕಾಗಿ ನೀವು ಮಾಡಬೇಕಾಗಿರುವುದು ಒಂದು ಮೊಟ್ಟೆಯ ಹಳದಿಯನ್ನು 1 ಟೀ ಚಮಚ ಜೇನುತುಪ್ಪದೊಂದಿಗೆ ಸೇರಿಸಿ, ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಹಚ್ಚಿ, ಒಂದು ಗಂಟೆ ಬಿಟ್ಟು ಸೌಮ್ಯವಾದ ಶಾಂಪೂ ಬಳಸಿ ತೊಳೆಯಿರಿ.
ತೆಂಗಿನ ಎಣ್ಣೆ ಚಿಕಿತ್ಸೆ:
ತೆಂಗಿನ ಎಣ್ಣೆ ನಿಮ್ಮ ಕೂದಲಿಗೆ ಉತ್ತಮವಾದ ಎಣ್ಣೆಯಾಗಿದೆ. ಅರ್ಧ ಕಪ್ ತೆಂಗಿನ ಎಣ್ಣೆಯನ್ನು 15 ಸೆಕೆಂಡುಗಳ ಕಾಲ ಬೆಚ್ಚಗಾಗಿಸಿ ಮತ್ತು ನಿಮ್ಮ ಒಣ ಕೂದಲಿಗೆ ಹಚ್ಚಿ. ಸೀಳು ತುದಿಗಳನ್ನು ಗುಣಪಡಿಸಲು ನೆತ್ತಿಯ ಮೇಲೆ ಮತ್ತು ತುದಿಗಳಿಗೆ ಎಣ್ಣೆಯನ್ನು ಹಚ್ಚಬೇಕು, ನಂತರ ನಿಮ್ಮ ತಲೆಯನ್ನು ಟವೆಲ್ನಲ್ಲಿ ಕಟ್ಟಿಕೊಳ್ಳಿ ಅಥವಾ ಶವರ್ ಕ್ಯಾಪ್ ಹಾಕಿ ಕನಿಷ್ಠ 30 ನಿಮಿಷಗಳ ಕಾಲ ಬಿಡಿ. ಸೌಮ್ಯವಾದ ಶಾಂಪೂ ಬಳಸಿ ಅದನ್ನು ತೊಳೆಯಿರಿ.
ಆಪಲ್ ಸೈಡರ್ ವಿನೆಗರ್ ನಿಂದ ತೊಳೆಯುವಿಕೆ:
ವಿನೆಗರ್ ನಲ್ಲಿ ಕೂದಲನ್ನು ತೊಳೆಯುವುದರಿದ ನಿಮ್ಮ ಕೂದಲು ತುಂಬಾ ಮೃದುವಾಗುವುದು. ಆಪಲ್ ಸೈಡರ್ ವಿನೆಗರ್ ನಲ್ಲಿರುವ ಅಸಿಟಿಕ್ ಆಮ್ಲವು ಕೂದಲಿನ ಕೊಳೆಯನ್ನು ತೆಗೆಯುತ್ತದೆ ಮತ್ತು ಕೂದಲನ್ನು ಬಲಪಡಿಸಿ, ಹೊಳಪನ್ನು ನೀಡುತ್ತದೆ. 1 ಕಪ್ ನೀರನ್ನು ಕುದಿಸಿ ತಣ್ಣಗಾಗಲು ಬಿಡಿ, ಅದಕ್ಕೆ 2 ಚಮಚ ಆಪಲ್ ಸೈಡರ್ ವಿನೆಗರ್ ಸೇರಿಸಿ ಮತ್ತು ಶಾಂಪೂ ಮಾಡಿದ ನಂತರ ಅದರಲ್ಲಿ ನಿಮ್ಮ ಕೂದಲನ್ನು ತೊಳೆಯಿರಿ. ತೊಳೆಯುವ ಮೊದಲು ಒಂದು ನಿಮಿಷ ಕೂದಲನ್ನು ಬಿಡಿ.
(Kannada Copy of Boldsky Kannada)
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm