ಬ್ರೇಕಿಂಗ್ ನ್ಯೂಸ್
14-08-21 11:22 am Reena TK, Boldsky ಡಾಕ್ಟರ್ಸ್ ನೋಟ್
ಕೊರೊನಾ ವೈರಸ್ 3ನೇ ಆತಂಕ ಎದುರಾಗಿದೆ, ಇದೀಗ ಕರ್ನಾಟಕದಲ್ಲಿ ಕೊರೊನಾವೈರಸ್ನ ಮತ್ತೊಂದು ರೂಪಾಂತರ ಈಟ ವೈರಸ್ ಪತ್ತೆಯಾಗಿದೆ. ನಾಲ್ಕು ತಿಂಗಳ ಹಿಂದೆ ದುಬೈನಿಂದ ಮಂಗಳೂರಿಗೆ ಬಂದಿರುವ ವ್ಯಕ್ತಿಯಲ್ಲಿ ಪತ್ತೆಯಾಗಿದೆ. ಅವರಿಗೆ ಈಟ ವೈರಸ್ ತಗುಲಿರುವುದು ಆಗಸ್ಟ್ 5ಕ್ಕೆ ಖಚಿತವಾಗಿದೆ.
ಈಟ ವೈರಸ್ ಇತರ ರೂಪಾಂತರಗಳಿಗಿಂತಲೂ ಪರಿಣಾಮಕಾರಿಯೇ, ಲಸಿಕೆ ಇದರ ವಿರುದ್ಧ ಪರಿಣಾಮ ಬೀರುವುದೇ? ಈ ರೂಪಾಂತರ ಬೇಗನೆ ಹರಡುವುದೇ ಎಂಬೆಲ್ಲಾ ಮಾಹಿತಿ ತಿಳಿಯೋಣ:

ಭಾರತದಲ್ಲಿ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ
ಗಮನಿಸಬೇಕಾದ ಒಂದು ವಿಷಯ ಏನೆಂದರೆ ಕೊರೊನಾ ರೂಪಾಂತರ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ, 2020 ಏಪ್ರಿಲ್ನಲ್ಲೂ ಈ ವೈರಸ್ ಕಂಡು ಬಂದಿತ್ತು. ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯ ವೈರಾಲಾಜಿ ಲ್ಯಾಬ್ ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ನೀಡಿತ್ತು. ಜುಲೈ, 2021ರಲ್ಲಿ ಭಾರತದಲ್ಲಿ ಮತ್ತೊಂದು ಈಟ ವೈರಸ್ ಕೇಸ್ ಪತ್ತೆಯಾಯ್ತು. ಮಿಜೋರಾಂನ 75 ಜನರ ಸ್ಯಾಂಪಲ್ ತೆಗೆದು ಪರೀಕ್ಷಿಸಿದಾಗ ಅಲ್ಲಿಯೂ ಈ ವೈರಸ್ ಪತ್ತೆಯಾಗಿತ್ತು.

ಮೊದಲಿಗೆ ಈ ವೈರಸ್ ಎಲ್ಲಿ ಪತ್ತೆಯಾಯ್ತು?
ಈಟ ರೂಪಾಂತರ ಅಥವಾ B.1.525 ರೂಪಾಂತರ ವೈರಸ್ ಡಿಸೆಂಬರ್ 2020ರಲ್ಲಿ ಯುಕೆ ಮತ್ತು ನೈಜೀರಿಯಾದಲ್ಲಿ ಕಂಡು ಬಂತು

ಈಟ ರೂಪಾಂತರ ಅಪಾಯಕಾರಿಯೇ?
ಈಟ ರೂಪಾಂತರ ಇತರ ರೂಪಾಂತರಗಳಂತೆಯೇ ಪರಿಣಾಮ ಬೀರುವುದು. ಈಟ ರೂಪಾತರ ಇತರ ರೂಪಾಂತರಗಳಾದ ಆಲ್ಫಾ, ಬೇಟಾ, ಗಾಮಾದಂತೆ N501Y ರೂಪಾಂತರ ಹರಡುವುದಿಲ್ಲ. ಅಲ್ಲದೆ ಇತರ ವೈರಸ್ಗಳಿಗಿಂತ ಬೇಗನೆ ಹರಡುವುದೋ ಇಲ್ಲ. ಈ ರೂಪಾಂತರ ವೈರಸ್ನ ಲಕ್ಷಣಗಳು ಇತರ ಕೊರೊನಾ ವೈರಸ್ನಂತೆಯೇ ಇರುವುದು. ಈಟ ವೈರಸ್ ಇತರ ವೈರಸ್ಗಳಂತೆಯೇ ಸ್ವಭಾವ ಲಕ್ಷಣಗಳನ್ನು ಹೊಂದಿದೆ, ಇತರ ರೂಪಾಂತರ ವೈರಸ್ ತಗುಲಿದಾಗ ಉಂಟಾಗುವ ಆರೋಗ್ಯ ಸಮಸ್ಯೆಗಳು ಈಟ ವೈರಸ್ ತಗುಲಿದಾಗಲೂ ಉಂಟಾಗುವುದು.

ರೂಪಾಂತರಗಳ ವಿರುದ್ಧ ಲಸಿಕೆ ಪರಿಣಾಮಕಾರಿಯೇ?
ಲಸಿಕೆ ಆಲ್ಫಾ, ಬೇಟಾ, ಗಾಮ, ಡೆಲ್ಟಾ, ಈಟ ರೂಪಾಂತರ ವಿರುದ್ಧ ಪರಿಣಾಮಕಾರಿಯಾಗಿದೆ. ಎರಡು ಡೋಸ್ ಲಸಿಕೆ ಪಡೆದವರು ಈ ರೂಪಾಂತರ ವೈರಸ್ ವಿರುದ್ಧ ಹೆಚ್ಚಿನ ರೋಗ ನಿರೋಧಕ ಶಕ್ತಿ ಹೊಂದಿರುತ್ತಾರೆ.
(Kannada Copy of Boldsky Kannada)
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm