ಬ್ರೇಕಿಂಗ್ ನ್ಯೂಸ್
14-08-21 02:54 pm Shreeraksha, Boldsky ಡಾಕ್ಟರ್ಸ್ ನೋಟ್
ಕಡಿಮೆ ಕ್ಯಾಲೋರಿ ಮತ್ತು ಫೈಬರ್ ತುಂಬಿರುವ ಆರೋಗ್ಯಕರವಾದ ಹಣ್ಣಿನಲ್ಲಿ ಪೇರಳೆ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಪೇರಳೆ ಹಣ್ಣು ಮಾತ್ರವಲ್ಲ, ಅದರ ಎಲೆಯೂ ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆಹಾರದಲ್ಲಿ ಪೇರಳೆ ಎಲೆಯ ರಸವನ್ನು ಸೇರಿಸುವುದರಿಂದ ನಿಮ್ಮ ಹೃದಯದ ಆರೋಗ್ಯ, ಜೀರ್ಣಕ್ರಿಯೆ ಮತ್ತು ಪ್ರತಿರಕ್ಷಣಾ ವ್ಯವಸ್ಥೆ ಸುಧಾರಣೆಯಾಗುವುದು. ಆದರೆ ಈ ಹಣ್ಣಿನಲ್ಲಿರುವ ಇರುವ ಕೆಲವು ಸಂಯುಕ್ತಗಳಿದ, ಪೇರಳೆಯು ಎಲ್ಲರಿಗೂ ಉತ್ತಮವಲ್ಲ. ಹಾಗಾದರೆ, ಪೇರಳೆ ಹಣ್ಣನ್ನು ಯಾರು ತಿನ್ನಬಾರದು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ಪೇರಳೆಯಲ್ಲಿರುವ ಪೋಷಕಾಂಶಗಳು:
ಪೇರಳೆಯಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. 1 ಹಣ್ಣಿನಲ್ಲಿ ಕೇವಲ 112 ಕ್ಯಾಲೋರಿಗಳು ಮತ್ತು 23 ಗ್ರಾಂ ನಷ್ಟು ಕಾರ್ಬೋಹೈಡ್ರೇಟ್ ಇರುತ್ತದೆ. ನಾರಿನ ಅಂಶವು ಸುಮಾರು 9 ಗ್ರಾಂಗಳಾಗಿದ್ದು, ಪೇರಳೆಯಲ್ಲಿ ಯಾವುದೇ ಪಿಷ್ಟವಿಲ್ಲ. ಅಧ್ಯಯನಗಲ ಪ್ರಕಾರ, ಈ ಹಣ್ಣು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವುದರಿಂದ ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಪ್ರಯೋಜನಕಾರಿ.. ಇದರ ಜೊತೆಯಲ್ಲಿ, ಫೋಲೇಟ್ ಮತ್ತು ಬೀಟಾ ಕ್ಯಾರೋಟಿನ್ ಈ ಹಣ್ಣಿನಲ್ಲಿ ಹೇರಳವಾಗಿ ಕಂಡುಬರುವ ಇತರ ಕೆಲವು ಪೋಷಕಾಂಶಗಳಾಗಿವೆ.

ಉಬ್ಬುವಿಕೆಯಿಂದ ಬಳಲುತ್ತಿರುವವರು:
ಪೇರಳೆಯಲ್ಲಿ ವಿಟಮಿನ್ ಸಿ ಮತ್ತು ಫ್ರಕ್ಟೋಸ್ ಸಮೃದ್ಧವಾಗಿದ್ದು, ಇವುಗಳಲ್ಲಿ ಯಾವುದೇ ಒಂದರ ಹೆಚ್ಚಿನ ಪ್ರಮಾಣವು ನಿಮಗೆ ಉಬ್ಬಿದ ಅನುಭವವನ್ನು ಉಂಟುಮಾಡಬಹುದು. ಇದು ನೀರಿನಲ್ಲಿ ಕರಗುವ ವಿಟಮಿನ್ ಆಗಿರುವುದರಿಂದ ನಮ್ಮ ದೇಹವು ಹೆಚ್ಚು ವಿಟಮಿನ್ ಸಿ ಯನ್ನು ಹೀರಿಕೊಳ್ಳಲು ಕಷ್ಟವಾಗುತ್ತದೆ, ಆದ್ದರಿಂದ ಉಬ್ಬುವಿಕೆ ಉಂಟಾಗುತ್ತದೆ. ಅಷ್ಟೇ ಅಲ್ಲ, ಸುಮಾರು 40 ಪ್ರತಿಶತ ಜನರು ಫ್ರಕ್ಟೋಸ್ ಮಾಲಾಬ್ಸರ್ಪ್ಶನ್ ಎಂಬ ಸ್ಥಿತಿಯಿಂದ ಬಳಲುತ್ತಿದ್ದಾರೆ. ಇದರಲ್ಲಿ, ನೈಸರ್ಗಿಕ ಸಕ್ಕರೆಯು ದೇಹದಿಂದ ಹೀರಲ್ಪಡುವುದಿಲ್ಲ, ಬದಲಾಗಿ ಅದು ನಮ್ಮ ಹೊಟ್ಟೆಯಲ್ಲಿ ಕುಳಿತು ಉಬ್ಬುವುದಕ್ಕೆ ಕಾರಣವಾಗುತ್ತದೆ. ಪೇರಳೆ ತಿಂದು ತಕ್ಷಣ ನಿದ್ರಿಸುವುದು ಕೂಡ ಹೊಟ್ಟೆ ಉಬ್ಬುವಿಕೆಗೆ ಕಾರಣವಾಗಬಹುದು.

ಕರುಳಿನ ಸಿಂಡ್ರೋಮ್ನಿಂದ ಬಳಲುತ್ತಿರುವವರು:
ಪೇರಳೆಯಲ್ಲಿ ಫೈಬರ್ ಸಮೃದ್ಧವಾಗಿದ್ದು, ಇದು ಮಲಬದ್ಧತೆಯನ್ನು ನಿವಾರಿಸಲು ಮತ್ತು ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಆದರೆ ಅತಿಯಾದ ಸೇವನೆಯು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಗೊಂದಲಕ್ಕೀಡು ಮಾಡುತ್ತದೆ, ವಿಶೇಷವಾಗಿ ನೀವು ಕಿರಿಕಿರಿಯುಂಟುಮಾಡುವ ಕರುಳಿನ ಸಿಂಡ್ರೋಮ್ನಿಂದ ಬಳಲುತ್ತಿದ್ದರೆ. ಆದ್ದರಿಂದ, ಸೀಮಿತ ರೀತಿಯಲ್ಲಿ ತಿನ್ನಲು ಮುಖ್ಯವಾಗಿದೆ.

ಮಧುಮೇಹದಿಂದ ಬಳಲುತ್ತಿರುವವರು:
ಕಡಿಮೆ ಗ್ಲೈಸೆಮಿಕ್ ಸೂಚ್ಯಂಕದಿಂದಾಗಿ ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಪೇರಳೆ ಪ್ರಮುಖ ಹಣ್ಣುಗಳಲ್ಲಿ ಒಂದಾಗಿದೆ. ಆದರೆ, ನೀವು ಈ ಹಣ್ಣು ಸೇವಿಸಿದ ನಂತರ ನಿಮ್ಮ ರಕ್ತದಲ್ಲಿನ ಸಕ್ಕರೆಯ ಪ್ರಮಾಣವಾಗಿ ನಿಯಮಿತವಾಗಿ ಪತ್ತೆ ಹಚ್ಚಿ. 100 ಗ್ರಾಂ ಕತ್ತರಿಸಿದ ಪೇರಳೆಯು 9 ಗ್ರಾಂ ನೈಸರ್ಗಿಕ ಸಕ್ಕರೆಯನ್ನು ಹೊಂದಿರುತ್ತದೆ. ಆದ್ದರಿಂದ, ಅತಿಯಾಗಿ ತಿನ್ನುವುದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸಬಹುದು. ಮಿತವಾಗಿ ತಿನ್ನುವುದು ಅತ್ಯುತ್ತಮ ಆಯ್ಕೆಯಾಗಿದೆ.

ಪೇರಳೆ ತಿನ್ನಲು ಸುರಕ್ಷಿತ ಮಿತಿ ಮತ್ತು ಸರಿಯಾದ ಸಮಯ:
ದಿನಕ್ಕೆ ಒಂದು ಬಾರಿ ಪೇರಳೆ ಸೇವನೆ ಸುರಕ್ಷಿತವಾಗಿದೆ. ಅದಕ್ಕಿಂತ ಹೆಚ್ಚು ಸೇವಿಸುವುದು ಒಳ್ಳೆಯದಲ್ಲ. ನೀವು ವ್ಯಾಯಾಮ ಆದ ನಂತರ ಅಥವಾ ಊಟವಾದ ಒಮದೆರಡು ಗಂಟೆಗಳ ಬಳಿಕ ಸೇವಿಸುವುದು ಉತ್ತಮ ದಾರಿ. ರಾತ್ರಿ ಈ ಹಣ್ಣುಗಳನ್ನು ಸೇವಿಸಬೇಡಿ ಏಕೆಂದರೆ ಅದು ಶೀತ ಮತ್ತು ಕೆಮ್ಮಿಗೆ ಕಾರಣವಾಗಬಹುದು. ಪೇರಳೆ ಎಲೆಗಳ ಸಾರಗಳ ಬಳಕೆ ಮತ್ತು ಪ್ರಯೋಜನಗಳ ಮೇಲೆ ಸೀಮಿತ ಪುರಾವೆಗಳು ಲಭ್ಯವಿದೆ. ಆದರೆ ಯಾವುದೇ ತೀರ್ಮಾನಕ್ಕೆ ಬರಲು ಹೆಚ್ಚಿನ ಸಂಶೋಧನೆ ಅಗತ್ಯವಿದೆ. ಇದನ್ನು ನಿಮ್ಮ ಆಹಾರದಲ್ಲಿ ಸೇರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ.
(Kannada Copy of Boldsky Kannada)
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm