ಬ್ರೇಕಿಂಗ್ ನ್ಯೂಸ್
28-08-21 05:36 pm Reena TK, Boldsky ಡಾಕ್ಟರ್ಸ್ ನೋಟ್
ಕೋವಿಡ್ 19ನಿಂದ ಚೇತರಿಸಿದವರಲ್ಲಿ ಬಹುತೇಕ ಜನರು ಇತರ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ಕೆಲವರಿಗೆ ಕೊರೊನಾ ಬಂದು ಹೋಗಿ ಹಲವು ತಿಂಗಳಾದರೂ ಎರಡು ಹೆಜ್ಜೆ ಇಡುವಷ್ಟರಲ್ಲಿ ತುಂಬಾ ಸುಸ್ತು ಆಗುತ್ತಿದೆ ಎಂದು ಹೇಳುತ್ತಿದ್ದಾರೆ.
ಕೋವಿಡ್ 19ನ ಗಂಭೀರ ರೋಗ ಲಕ್ಷಣಗಳು ಕಾಣಿಸಿಕೊಂಡು ಚೇತರಿಸಿಕೊಂಡವರಲ್ಲಿ ಈ ಲಕ್ಷಣಗಳು ಹೆಚ್ಚು ಕಂಡು ಬರುತ್ತಿವೆ, ಹೆಚ್ಚಿನ ಹಲ್ಲಿಗೆ ಸಂಬಂಧಿಸಿದ ಸಮಸ್ಯೆಗಳಿವೆ ಎಂದು ಹೇಳುತ್ತಿದ್ದಾರೆ. ತಜ್ಞರು ಕೋವಿಡ್ 19ನಿಂದ ಚೇತರಿಸಿದವರು ಹಲ್ಲುಗಳ ಶುಚಿತ್ವ ಹಾಗೂ ಆರೈಕೆ ಕಡೆ ಹೆಚ್ಚಿನ ಗಮನ ನೀಡಬೇಕೆಂದು ಹೇಳುತ್ತಿದ್ದಾರೆ.

ಬ್ಲ್ಯಾಕ್ ಫಂಗಸ್ ಅಪಾಯ
ಕೋವಿಡ್ 19ನಿಂದ ಚೇತರಿಸಿಕೊಂಡವರಿಗೆ ಬ್ಲ್ಯಾಕ್ ಫಂಗಸ್ ಅಪಾಯ ಹೆಚ್ಚು. ಆದ್ದರಿಂದ ಬಾಯಲ್ಲಿ ಹುಣ್ಣು, ದವಡೆಯಲ್ಲಿ ಊತ, ಹುಣ್ಣು ಮುಂತಾದ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬಾರದು. ಇವುಗಳನ್ನು ತಿಂಗಳವರೆಗೆ ನಿರ್ಲಕ್ಷ್ಯ ಮಾಡಿದರೆ ಅದು ಕ್ಯಾನ್ಸರ್ ಆಗಿ ಬದಲಾಗಬಹುದು. ಅಲ್ಲದೆ ಬ್ಲ್ಯಾಕ್ ಸಮಸ್ಯೆಯೂ ಆಗಿರಬಹುದು, ಏನೇ ಸಮಸ್ಯೆ ಆಗಿರಲಿ ಆರಂಭಿಕ ಹಂತದಲ್ಲಿ ಆದರೆ ಗುಣ ಪಡಿಸಲು ಸುಲಭ. ಆದ್ದರಿಂದ ಕೋವಿಡ್ 19 ಬಳಿಕ ಬಾಯಲ್ಲಿ ಹುಣ್ಣು, ಹಲ್ಲುಗಳಲ್ಲಿ ನೋವು ಮುಂತಾದ ಸಮಸ್ಯೆ ಇದ್ದರೆ ಕೂಡಲೇ ವೈದ್ಯರಿಗೆ ತೋರಿಸಿ.

ಹಲ್ಲುಗಳು ಹೋಗಬಹುದು
ಕೆಲವರಿಗೆ ಕೋವಿಡ್ 19 ಬಳಿಕ ದವಡೆಯಲ್ಲಿ ರಕ್ತಸ್ರಾವ, ಹಲ್ಲುಗಳಲ್ಲಿ ನೋವು ಕಂಡು ಬಂದಿರುವುದರಿಂದ ಹಲ್ಲುಗಳನ್ನು ತೆಗೆಯಬೇಕಾಗಿದೆ. ಆದ್ದರಿಂದ ಕೋವಿಡ್ನಿಂದ ಚೇರಿಸಿದವರು ಹಲ್ಲುಗಳ ಆರೈಕೆ ಕಡೆ ತುಂಬಾನೇ ಗಮನ ನೀಡಬೇಕು.

ಹಲ್ಲುಗಳ ಆರೈಕೆ ಹೀಗಿರಲಿ
ಮಲಗುವ ಮುನ್ನ ಹಲ್ಲುಜ್ಜಬೇಕು, ನಂತರ ಬಾಯಿಯನ್ನು ಚೆನ್ನಾಗಿ ಮುಕ್ಕಳಿಸಬೇಉ. ಸೇ. 1ರಷ್ಟು ಪೋವಿಡೋನ್ ಅಯೋಡಿಯನ್ ಮೌತ್ವಾಶ್ ಅನ್ನು ದಿನದಲ್ಲಿ ಬಾರಿ ಬಾಯಿಗೆ ಹಾಕಿ ಬಾಯಿ ಮುಕ್ಕಳಿಸುವುದು ಅವಶ್ಯಕವಾಗಿದೆ.

ಮಧುಮೇಹಿಗಳು ಹಲ್ಲುಗಳ ಆರೈಕೆಗೆ ತುಂಬಾನೇ ಗಮನ ನೀಡಬೇಕು
ಮಧುಮೇಹಿಗಳಿಗೆ ಬೇಗನೆ ಹಲ್ಲುಗಳ ಸಮಸ್ಯೆ ಕಾಡುವುದು. ಆದ್ದರಿಂದ ಹಲ್ಲುಗಳ ಆರೈಕೆ ಕಡೆ ತುಂಬಾನೇ ಗಮನ ನೀಡಿ, ಜೊತೆಗೆ ನಿಯಮಿತವಾಗಿ ದಂತ ವೈದ್ಯರನ್ನು ಕಾಣಿ. ಹಲ್ಲುಗಳ ಬಣ್ಣ ಬದಲಾವಣೆ, ದವಡೆಯಲ್ಲಿ ನೋವು, ಹಲ್ಲು ನೋವು ಇದ್ದರೆ ತುಂಬಾ ದಿನ ಕಾಯಬೇಡಿ, ಕೂಡಲೇ ವೈದ್ಯರಿಗೆ ತೋರಿಸಿ, ಚಿಕಿತ್ಸೆ ಪಡೆಯಿರಿ. ಇದರಿಂದಾಗಿ ಬ್ಲ್ಯಾಕ್ ಫಂಗಸ್ ತಡೆಗಟ್ಟಬಹುದು, ಜೊತೆಗೆ ಹಲ್ಲುಗಳ ಆರೈಕೆ ಮಾಡಬಹುದು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm