ಬ್ರೇಕಿಂಗ್ ನ್ಯೂಸ್
06-09-21 03:58 pm Source: News 18 Kannada ಡಾಕ್ಟರ್ಸ್ ನೋಟ್
ಅನೇಕ ಮನೆಗಳಲ್ಲಿ ಅರಿಶಿನವನ್ನು ಅಮೃತಕ್ಕೆ ಸಮಾನವಾಗಿ ಕಾಣುತ್ತಾರೆ. ಆದ್ರೆ ಅರಿಶಿನದ ಸರಿಯಾದ ಬಳಕೆ ಹೇಗೆ ಅನ್ನೋದು ಬಹಳ ಮಂದಿಗೆ ತಿಳಿದಿರುವುದಿಲ್ಲ. ಸರಿಯಾದ ಪ್ರಮಾಣದಲ್ಲಿ ಅಥವಾ ಸಂದರ್ಭದಲ್ಲಿ ಬಳಕೆ ಮಾಡದಿದ್ರೆ ಅರಿಶಿನ ಬಹಳ ದೊಡ್ಡ ಅಪಾಯ ತಂದೊಡ್ಡಬಹುದು. ಕೆಲವು ಖಾಯಿಲೆಗಳ ಪಾಲಿಗಂತೂ ಅರಿಶಿನ ಅಕ್ಷರಶಃ ಯಮಪಾಶ. ಅರಿಶಿನದ ಸರಿಯಾದ ಬಳಕೆ ಹೇಗೆ?

ಅರಿಶಿನ ಭಾರತೀಯ ಅಡುಗೆಮನೆಯ ಖಾಯಂ ವಸ್ತು. ಕೇವಲ ಅಡುಗೆ ಪದಾರ್ಥಗಳು ಮಾತ್ರವಲ್ಲದೆ ಉತ್ತಮ ಆಂಟಿಸೆಪ್ಟಿಕ್ ಆಗಿ ಕೂಡಾ ಅರಿಶಿನ ಬಳಕೆಯಾಗುತ್ತದೆ. ಸಣ್ಣ ಪುಟ್ಟ ಗಾಯಗಳಾದ ಅರಿಶಿನವನ್ನೇ ಮೊದಲು ಬಳಸೋದು, ಅಷ್ಟರಮಟ್ಟಿಗೆ ಇದೊಂದು ಅನಿವಾರ್ಯ ವಸ್ತು.

ಆದ್ರೆ ಅರಿಶಿನ ಎಲ್ಲರಿಗೂ ಹೊಂದುವುದಿಲ್ಲ. ಅನೇಮಿಯಾ ಇರುವವರಿಗೆ ಇದು ಖಂಡಿತಾ ಒಳ್ಲೆಯದಲ್ಲ. ರಕ್ತದಲ್ಲಿ ಕೆಂಪು ರಕ್ತ ಕಣಗಳ ಅಭಾವವಿದ್ದಾಗ ಆಕ್ಸಿಜನ್ ಬಳಕೆಯಲ್ಲೂ ಏರುಪೇರಾಗುತ್ತದೆ. ಜಾಂಡೀಸ್ ಇದ್ದವರ ದೇಹದಲ್ಲಿ ರಕ್ತದಿಂದ ಆಕ್ಸಿಜನ್ ನ್ನು ದೇಹ ಹೀರಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದು ಆರೋಗ್ಯವನ್ನು ಮತ್ತಷ್ಟು ಹದಗೆಡಿಸುತ್ತದೆ.

ಗರ್ಭಿಣಿಯರು ಮತ್ತು ಹಾಲೂಡಿಸುವ ತಾಯಂದಿರು ಅರಿಶಿನವನ್ನು ಅಡುಗೆಗೆ ಹೊರತುಪಡಿಸಿ ನೇರವಾಗಿ ಬಳಸಬಾರದು. ಅರಿಶಿನವನ್ನು ಅಡುಗೆಗೆ ಬಳಸಿದಾಗ ಅದರಲ್ಲಿನ ಕುರ್ಕುಮಿನ್ ಅಂಶ ಕ್ಷೀಣಿಸುತ್ತದೆ. ಆದರೆ ನೇರವಾಗಿ ಬಳಸಿದ್ರೆ ಆಗ ಅದು ಋತುಚಕ್ರವನ್ನು ಪ್ರೇರೇಪಿಸುತ್ತದೆ ಇದು ಗರ್ಭಿಣಿಯರಿಗೆ ಖಂಡಿತಾ ಒಳ್ಳೆಯದಲ್ಲ. ಹಾಗಾಗಿ ಅವರು ಅಡುಗೆ ಹೊರತುಪಡಿಸಿ ಅರಿಶಿನವನ್ನು ಬಳಸಬಾರದು.

ರಕ್ತಸ್ರಾವ, ರಕ್ತ ಹೆಪ್ಪುಗಟ್ಟುವಿಕೆ ಮುಂತಾದ ರಕ್ತಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಅನೇಮಿಯಾ ಇದ್ದರೆ ಖಂಡಿತವಾಗಿಯೂ ಅಂಥವರು ಅರಿಶಿನವನ್ನು ಬಳಸಲೇಬಾರದು.

ಸಕ್ಕರೆ ಖಾಯಿಲೆ ಅಥವಾ ಮಧುಮೇಹ ಇರುವವರು ಕೂಡಾ ಹೆಚ್ಚು ಅರಿಶಿನ ಬಳಸುವುದು ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಅದರಲ್ಲೂ ಲೋ ಬ್ಲಡ್ ಶುಗರ್ ಅಥವಾ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಕಡಿಮೆ ಇದ್ದರೆ ಅಂಥವರು ಅರಿಶಿನ ಬಳಸಿದ್ರೆ ಸಕ್ಕರೆ ಅಂಶ ಮತ್ತಷ್ಟು ಕಡಿಮೆ ಆಗುತ್ತದೆ ಎನ್ನಲಾಗುತ್ತದೆ. ಹಾಗಾಗಿ ಅಂಥವರು ಅರಿಶಿನದಿಂದ ದೂರ ಇರಬೇಕು.

ಕಿಡ್ನಿ ಸ್ಟೋನ್ ಇರುವವರು ಕೂಡಾ ಅರಿಶಿನವನ್ನು ಬಳಸಬಾರದು. ಅರಿಶಿನದಲ್ಲಿರುವ ಕ್ಯಾಲ್ಶಿಯಂ ಆಕ್ಸಲೇಟ್ ಮೂತ್ರಪಿಂಡದಲ್ಲಿ ಕಲ್ಲುಗಳ ಉತ್ಪಾದನೆಗೆ ಉತ್ತೇಜನ ಕೊಡುತ್ತದೆ. ಹಾಗಾಗಿ ಅರಿಶಿನದಿಂದ ದೂರ ಇರೋದು ಒಳ್ಳೆಯದು.
ಎಷ್ಟು ಅರಿಶಿನ ಬಳಸುವುದು ಸರಿ? ಆರೋಗ್ಯ ತಜ್ಞರ ಲೆಕ್ಕಾಚಾರದ ಪ್ರಕಾರ ಒಂದು ದಿನಕ್ಕೆ ಅಡುಗೆಯಲ್ಲಿ 500ರಿಂದ 2000 ಮಿಲಿಗ್ರಾಂಗಳಷ್ಟು ಅರಿಶಿನ ಬಳಸಿದರೆ ಸಾಲುತ್ತದೆ. ಅರಿಶಿನದಲ್ಲಿರುವ ಕುರ್ಕುಮಿನ್ನಿಂದ ಹಾನಿ ಆಗುವ ಸಂಭವ ಕಡಿಮೆ. ಆದ್ರೆ ಕುರ್ಕುಮಿನ್ ಸಪ್ಲಿಮೆಂಟ್ಗಳನ್ನು ತೆಗೆದುಕೊಳ್ಳುವ ಮುನ್ನ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm