ಬ್ರೇಕಿಂಗ್ ನ್ಯೂಸ್
11-09-21 03:17 pm Shreeraksha, Boldsky ಡಾಕ್ಟರ್ಸ್ ನೋಟ್
ಮಾಂಸಹಾರಿಗಳ ಫೇವರೆಟ್ ಐಟಮ್ ಅಂದ್ರೆ ಚಿಕನ್. ವೀಕೆಂಡ್ ಬಂದ್ರೆ ಸಾಕು, ಅಮ್ಮನ ಕೈಯಿಂದ ವೆರೈಟಿ ವೆರೈಟಿ ಡಿಶ್ ಮಾಡಿಸಿಕೊಂಡು ತಿನ್ನುವ ಖುಷಿನೇ ಬೇರೆ. ಇಂತಹ ಚಿಕನ್ ನ ಮಾರ್ಕೆಟ್ ನಿಂದ ತಂದಮೇಲೆ ತೊಳೆಯುತ್ತೇವೆ. ಆದರೆ ಬೇಯಿಸುವ ಮುನ್ನ ಕೋಳಿಮಾಂಸ ತೊಳೆಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ, ಹೀಗಂತ ಹೇಳುತ್ತಿರುವ ಸಿಡಿಸಿ ಅಂದ್ರೆ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ. ಹಾಗಾದ್ರೆ ಏನಿದು ವಿಚಾರ, ಯಾಕೆ ತೊಳೆಯಬಾರದು, ತೊಳೆದರೆ ಏನಾಗುವುದು ಎಲ್ಲವನ್ನು ಇಲ್ಲಿ ನೋಡೋಣ.
ಬೇಯಿಸುವ ಮುನ್ನ ಕೋಳಿ ಮಾಂಸವನ್ನು ತೊಳೆಯಬಾರದು ಏಕೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ:

ಚಿಕನ್ ನಲ್ಲಿರುವ ಪೋಷಕಾಂಶಗಳು:
ಚಿಕನ್ ನಲ್ಲಿ ಪೋಷಕಾಂಶಕ್ಕೇನೂ ಕೊರತೆಯಿಲ್ಲ. ಇದರಲ್ಲಿ ಪ್ರೋಟೀನ್ ಅಗಾಧ ಪ್ರಮಾಣದಲ್ಲಿದ್ದು, ನಮ್ಮ ದೇಹದ ಸ್ನಾಯು-ಮೂಳೆಗಳು ಗಟ್ಟಿಗೊಳಿಸುತ್ತವೆ. ಕೊಬ್ಬಿನಾಂಶನೂ ಬಹಳ ಕಡಿಮೆ. ಸಾಮಾನ್ಯವಾಗಿ ಮಾಂಸಹಾರದಿಂದಲೇ ತೂಕ ಏರುತ್ತದೆ ಎಂದು ನಾವೆಲ್ಲ ಅಂದುಕೊಂಡಿದ್ದೇವೆ, ಆದರೆ ಕೋಳಿ ಮಾಂಸದಿಂದ ಸ್ನಾಯುಗಳು ಬೆಳೆಯುತ್ತವೆ, ಹೊರತು ಕೊಬ್ಬಿನ ಸಂಗ್ರಹವಾಗುವುದು ಕಡಿಮೆ. ಇನ್ನೂ ಮಕ್ಕಳ ಬೆಳವಣಿಗೆಗೂ ಚಿಕನ್ ಸೂಕ್ತ ಏಕೆಂದರೆ ಇದರಲ್ಲಿ ಅಮೈನೋ ಆಸಿಡ್ ಅಧಿಕವಾಗಿದ್ದು, ಹಸಿವನ್ನ ಹೆಚ್ಚಿಸುತ್ತದೆ. ಇದರ ಜೊತೆಗೆ ರೋಗ ನಿರೋಧಕ ಶಕ್ತಿಗೆ, ಕೂದಲಿಗೆ, ಹೆಣ್ಮಕ್ಕಳ ತಿಂಗಳ ಸಮಸ್ಯೆ ಸೇರಿದಂತೆ ಹತ್ತು-ಹಲವಾರು ಪ್ರಯೋಜನಗಳನ್ನ ಈ ಒಂದು ಆಹಾರ ಪದಾರ್ಥದಿಂದ ಪಡೆಯಬಹುದು. ಚಿಕನ್ ಬೇಯಿಸುವ ಮುನ್ನ ತೊಳೆಯುವುದು ಸಾಮಾನ್ಯ. ಆದರೆ ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಹಾನಿಕಾರಕ ಎಂದು ಅಮೆರಿಕಾದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಹೇಳುತ್ತಿದೆ. ಹಸಿಕೋಳಿ ಮಾಂಸ ತೊಳೆಯುವುದರಿಂದ ರೋಗಾಣುಗಳು ಹರಡಬಹುದು ಎಂಬುದು ಇದರ ಹೇಳಿಕೆಯಾಗಿದೆ.

ಬೇಯಿಸುವ ಮುನ್ನ ಕೋಳಿಮಾಂಸ ತೊಳೆಯಬಾರದು ಏಕೆ?:
ಸಿಡಿಸಿ ಪ್ರಕಾರ, ಹಸಿಕೋಳಿಯನ್ನ ತೊಳೆಯುವುದರಿಂದ ಕೋಳಿಯಲ್ಲಿರುವ ರೋಗಾಣುಗಳು ಇತರ ಆಹಾರ ಅಥವಾ ಅಡುಗೆಮನೆಯಲ್ಲಿರುವ ಪಾತ್ರೆಗಳಿಗೆ ವರ್ಗಾವಣೆಯಾಗುತ್ತವೆ. ಅಂದರೆ, ಮಾಂಸದಲ್ಲಿರೋ ಸೂಕ್ಷ್ಮಜೀವಿಗಳು ಅಡುಗೆ ಮನೆ ಸೇರುವ ಸಾಧ್ಯತೆ ಹೆಚ್ಚು. ಇದೇ ಕಾರಣಕ್ಕಾಗಿಯೇ ತೊಳೆಯಬಾರದು ಎಂದು ಎಚ್ಚರಿಕೆ ನೀಡಿದೆ.

ತೊಳೆದರೆ ಏನಾಗಬಹುದು?:
ಕೋಳಿ ಮಾಂಸವನ್ನ ಸಿಂಕ್ ನಲ್ಲಿ ತೊಳೆಯುವುದರಿಂದ ಫುಡ್ ಪಾಯಿಸನ್ ಆಗಬಹುದು. ಅದೇಗೆ ಅಂದ್ರೆ, ಚಿಕನ್ ನಲ್ಲಿ ಸಾಮಾನ್ಯವಾಗಿ ಸಾಲ್ಮೊನೆಲ್ಲಾ, ಕ್ಲೋಸ್ಟ್ರಿಡಿಯಮ್ ಪರ್ಫ್ರೀಂಜನ್ಸ್ ಮತ್ತು ಕ್ಯಾಂಪಿಲೋಬ್ಯಾಕ್ಟರ್ ಎಂಬ ಬ್ಯಾಕ್ಟೀರಿಯಾಗಳು ಹುಟ್ಟಿಕೊಳ್ಳುತ್ತವೆ. ನಾವು ಮಾರ್ಕೆಟ್ ನಿಂದ ತಂದ ಚಿಕನ್ ನಲ್ಲಿ ಈ ಬ್ಯಾಕ್ಟೀರಿಯಾಗಳಲ್ಲಿ ಒಂದು ಇದ್ರೂ, ಅದನ್ನ ತೊಳೆದಾಗ, ಈ ಬ್ಯಾಕ್ಟಿರಿಯಾ ಅಡುಗೆಮನೆಯಲ್ಲಿರುವ ಪಾತ್ರೆ ಅಥವಾ ಇತರ ಆಹಾರಕ್ಕೆ ಸೇರಿಬಿಡುತ್ತವೆ. ಇದನ್ನರಿಯದ ನಾವು, ಅದನ್ನೇ ತಿಂದು ಅಥವಾ ಅದೇ ಪಾತ್ರೆ ಬಳಸಿದರೆ, ಅದು ಆಹಾರದ ವಿಷಕ್ಕೆ ಕಾರಣವಾಗುವುದು.

ಕೋಳಿಮಾಂಸ ತೊಳೆಯುವ ಬದಲು ಏನು ಮಾಡಬೇಕು?:
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm