ಬ್ರೇಕಿಂಗ್ ನ್ಯೂಸ್
11-09-21 03:17 pm Shreeraksha, Boldsky ಡಾಕ್ಟರ್ಸ್ ನೋಟ್
ಮಾಂಸಹಾರಿಗಳ ಫೇವರೆಟ್ ಐಟಮ್ ಅಂದ್ರೆ ಚಿಕನ್. ವೀಕೆಂಡ್ ಬಂದ್ರೆ ಸಾಕು, ಅಮ್ಮನ ಕೈಯಿಂದ ವೆರೈಟಿ ವೆರೈಟಿ ಡಿಶ್ ಮಾಡಿಸಿಕೊಂಡು ತಿನ್ನುವ ಖುಷಿನೇ ಬೇರೆ. ಇಂತಹ ಚಿಕನ್ ನ ಮಾರ್ಕೆಟ್ ನಿಂದ ತಂದಮೇಲೆ ತೊಳೆಯುತ್ತೇವೆ. ಆದರೆ ಬೇಯಿಸುವ ಮುನ್ನ ಕೋಳಿಮಾಂಸ ತೊಳೆಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ, ಹೀಗಂತ ಹೇಳುತ್ತಿರುವ ಸಿಡಿಸಿ ಅಂದ್ರೆ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ. ಹಾಗಾದ್ರೆ ಏನಿದು ವಿಚಾರ, ಯಾಕೆ ತೊಳೆಯಬಾರದು, ತೊಳೆದರೆ ಏನಾಗುವುದು ಎಲ್ಲವನ್ನು ಇಲ್ಲಿ ನೋಡೋಣ.
ಬೇಯಿಸುವ ಮುನ್ನ ಕೋಳಿ ಮಾಂಸವನ್ನು ತೊಳೆಯಬಾರದು ಏಕೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ:

ಚಿಕನ್ ನಲ್ಲಿರುವ ಪೋಷಕಾಂಶಗಳು:
ಚಿಕನ್ ನಲ್ಲಿ ಪೋಷಕಾಂಶಕ್ಕೇನೂ ಕೊರತೆಯಿಲ್ಲ. ಇದರಲ್ಲಿ ಪ್ರೋಟೀನ್ ಅಗಾಧ ಪ್ರಮಾಣದಲ್ಲಿದ್ದು, ನಮ್ಮ ದೇಹದ ಸ್ನಾಯು-ಮೂಳೆಗಳು ಗಟ್ಟಿಗೊಳಿಸುತ್ತವೆ. ಕೊಬ್ಬಿನಾಂಶನೂ ಬಹಳ ಕಡಿಮೆ. ಸಾಮಾನ್ಯವಾಗಿ ಮಾಂಸಹಾರದಿಂದಲೇ ತೂಕ ಏರುತ್ತದೆ ಎಂದು ನಾವೆಲ್ಲ ಅಂದುಕೊಂಡಿದ್ದೇವೆ, ಆದರೆ ಕೋಳಿ ಮಾಂಸದಿಂದ ಸ್ನಾಯುಗಳು ಬೆಳೆಯುತ್ತವೆ, ಹೊರತು ಕೊಬ್ಬಿನ ಸಂಗ್ರಹವಾಗುವುದು ಕಡಿಮೆ. ಇನ್ನೂ ಮಕ್ಕಳ ಬೆಳವಣಿಗೆಗೂ ಚಿಕನ್ ಸೂಕ್ತ ಏಕೆಂದರೆ ಇದರಲ್ಲಿ ಅಮೈನೋ ಆಸಿಡ್ ಅಧಿಕವಾಗಿದ್ದು, ಹಸಿವನ್ನ ಹೆಚ್ಚಿಸುತ್ತದೆ. ಇದರ ಜೊತೆಗೆ ರೋಗ ನಿರೋಧಕ ಶಕ್ತಿಗೆ, ಕೂದಲಿಗೆ, ಹೆಣ್ಮಕ್ಕಳ ತಿಂಗಳ ಸಮಸ್ಯೆ ಸೇರಿದಂತೆ ಹತ್ತು-ಹಲವಾರು ಪ್ರಯೋಜನಗಳನ್ನ ಈ ಒಂದು ಆಹಾರ ಪದಾರ್ಥದಿಂದ ಪಡೆಯಬಹುದು. ಚಿಕನ್ ಬೇಯಿಸುವ ಮುನ್ನ ತೊಳೆಯುವುದು ಸಾಮಾನ್ಯ. ಆದರೆ ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಹಾನಿಕಾರಕ ಎಂದು ಅಮೆರಿಕಾದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಹೇಳುತ್ತಿದೆ. ಹಸಿಕೋಳಿ ಮಾಂಸ ತೊಳೆಯುವುದರಿಂದ ರೋಗಾಣುಗಳು ಹರಡಬಹುದು ಎಂಬುದು ಇದರ ಹೇಳಿಕೆಯಾಗಿದೆ.

ಬೇಯಿಸುವ ಮುನ್ನ ಕೋಳಿಮಾಂಸ ತೊಳೆಯಬಾರದು ಏಕೆ?:
ಸಿಡಿಸಿ ಪ್ರಕಾರ, ಹಸಿಕೋಳಿಯನ್ನ ತೊಳೆಯುವುದರಿಂದ ಕೋಳಿಯಲ್ಲಿರುವ ರೋಗಾಣುಗಳು ಇತರ ಆಹಾರ ಅಥವಾ ಅಡುಗೆಮನೆಯಲ್ಲಿರುವ ಪಾತ್ರೆಗಳಿಗೆ ವರ್ಗಾವಣೆಯಾಗುತ್ತವೆ. ಅಂದರೆ, ಮಾಂಸದಲ್ಲಿರೋ ಸೂಕ್ಷ್ಮಜೀವಿಗಳು ಅಡುಗೆ ಮನೆ ಸೇರುವ ಸಾಧ್ಯತೆ ಹೆಚ್ಚು. ಇದೇ ಕಾರಣಕ್ಕಾಗಿಯೇ ತೊಳೆಯಬಾರದು ಎಂದು ಎಚ್ಚರಿಕೆ ನೀಡಿದೆ.

ತೊಳೆದರೆ ಏನಾಗಬಹುದು?:
ಕೋಳಿ ಮಾಂಸವನ್ನ ಸಿಂಕ್ ನಲ್ಲಿ ತೊಳೆಯುವುದರಿಂದ ಫುಡ್ ಪಾಯಿಸನ್ ಆಗಬಹುದು. ಅದೇಗೆ ಅಂದ್ರೆ, ಚಿಕನ್ ನಲ್ಲಿ ಸಾಮಾನ್ಯವಾಗಿ ಸಾಲ್ಮೊನೆಲ್ಲಾ, ಕ್ಲೋಸ್ಟ್ರಿಡಿಯಮ್ ಪರ್ಫ್ರೀಂಜನ್ಸ್ ಮತ್ತು ಕ್ಯಾಂಪಿಲೋಬ್ಯಾಕ್ಟರ್ ಎಂಬ ಬ್ಯಾಕ್ಟೀರಿಯಾಗಳು ಹುಟ್ಟಿಕೊಳ್ಳುತ್ತವೆ. ನಾವು ಮಾರ್ಕೆಟ್ ನಿಂದ ತಂದ ಚಿಕನ್ ನಲ್ಲಿ ಈ ಬ್ಯಾಕ್ಟೀರಿಯಾಗಳಲ್ಲಿ ಒಂದು ಇದ್ರೂ, ಅದನ್ನ ತೊಳೆದಾಗ, ಈ ಬ್ಯಾಕ್ಟಿರಿಯಾ ಅಡುಗೆಮನೆಯಲ್ಲಿರುವ ಪಾತ್ರೆ ಅಥವಾ ಇತರ ಆಹಾರಕ್ಕೆ ಸೇರಿಬಿಡುತ್ತವೆ. ಇದನ್ನರಿಯದ ನಾವು, ಅದನ್ನೇ ತಿಂದು ಅಥವಾ ಅದೇ ಪಾತ್ರೆ ಬಳಸಿದರೆ, ಅದು ಆಹಾರದ ವಿಷಕ್ಕೆ ಕಾರಣವಾಗುವುದು.

ಕೋಳಿಮಾಂಸ ತೊಳೆಯುವ ಬದಲು ಏನು ಮಾಡಬೇಕು?:
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm