ಬ್ರೇಕಿಂಗ್ ನ್ಯೂಸ್
10-02-22 05:41 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ಹಳ್ಳಿಕಡೆ ಒಂದು ಮಾತಿದೆ, ಬಾಳೆಗೆ ಒಂದೇ ಗೊನೆ, ರಾಗಿಗೆ ಒಂದೇ ತೆನೆ! ಇದು ಅಕ್ಷರಶಃ ಸತ್ಯ. ಬಾಳೆಗಿಡ ಎಂದಾಗ ನಮಗೆ ತಟ್ಟನೆ ನೆನಪಿಗೆ ಬರುವುದು, ಬಾಳೆಹಣ್ಣು ಮಾತ್ರ! ಆದರೆ ನಿಮಗೆ ಗೊತ್ತಿರಲಿ, ಬಾಳೆಗಿಡದ ಕಾಂಡ, ಬಾಳೆ ಗಿಡದ ಬೇರು, ಬಾಳೆ ಎಲೆ ಇತ್ಯಾದಿಗಳು ನಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕ್ಕೆ ಬರುತ್ತದೆ.
ಮನೆಯಲ್ಲಿ ಅಥವಾ ದೇವಸ್ಥಾನಗಳಲ್ಲಿ ಏನೇ ಪೂಜೆ ಪುನಸ್ಕಾರಗಳಲ್ಲಿ, ಹೂವಿನ ಜೊತೆಗೆ ಬಾಳೆಹಣ್ಣುಗಳನ್ನು ಇರಿಸಿ ದೇವರಿಗೆ ಪೂಜೆ ಮಾಡುತ್ತೇವೆ. ಆದರೆ ಆರೋಗ್ಯದ ವಿಚಾರ ಬಂದಾಗ ಬಾಳೆಹಣ್ಣಿಗಿಂತ ಬಾಳೆ ಹೂವಿನ ಬಳಕೆ ಹೆಚ್ಚಾಗಿ ನಡೆಯುತ್ತದೆ ಎಂದರೆ ಆಶ್ಚರ್ಯವಾಗುತ್ತದೆ. ಇಂದಿನ ಈ ಲೇಖನದಲ್ಲಿ ಬಾಳೆ ಹೂವಿನಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳೋಣ..
ನಾರಿನಾಂಶ ಹೆಚ್ಚಾಗಿದೆ

ಮಧುಮೇಹ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ

ಅಧಿಕ ರಕ್ತಸ್ರಾವವನ್ನು ಇಲ್ಲವಾಗಿಸುತ್ತದೆ

ಸಾಮಾನ್ಯವಾಗಿ ಮಹಿಳೆಯರಿಗೆ, ಅಧಿಕ ರಕ್ತಸ್ರಾವ ಕಾಣಿಸಿಕೊಂಡಾಗ, ದೈಹಿಕ ಅಸ್ವಸ್ಥತೆಗೆ ಒಳಗಾಗುತ್ತಾರೆ, ಜೊತೆಗೆ ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಾರೆ. ಈ ಸಮಯದಲ್ಲಿ ಅವರಲ್ಲಿ ಕಾಡುವ ಅಧಿಕ ರಕ್ತಸ್ರಾವ ಸಮಸ್ಯೆಯನ್ನು ತಡೆದು, ಮುಂದೆ ರಕ್ತ ಹೀನತೆ ಸಮಸ್ಯೆ ಕಂಡು ಬರದಂತೆ ನೋಡಿಕೊಳ್ಳುತ್ತದೆ.
ಮಹಿಳೆಯರಿಗೆ ಸ್ತನಗಳಲ್ಲಿ ಹಾಲಿನ ಉತ್ಪತ್ತಿ ಹೆಚ್ಚಿಸುತ್ತದೆ

ಹೆರಿಯ ನಂತರ ಬಾಣಂತಿಯರು ನಿಯಮಿತವಾಗಿ, ಅಂದರೆ ತಿಂಗಳಿಗೆ ಎರಡು ಬಾರಿಯಾದರೂ, ಬಾಳೆ ಹೂವಿನ ಪಲ್ಯ ಮಾಡಿ ಸೇವಿಸಿದರೂ ಸಾಕು, ಸ್ತನಗಳಲ್ಲಿ ಹಾಲಿನ ಉತ್ಪತ್ತಿ ಹೆಚ್ಚಾಗುತ್ತದೆ ಎಂದು ತಿಳಿದುಬಂದಿದೆ.
ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ

ನಿಮಗೆ ಗೊತ್ತಿರಲಿ, ಮೊದಲೇ ಹೇಳಿದ ಹಾಗೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳನ್ನು ಹೊಂದಿರುವ ಈ ಬಾಳೆ ಹೂವಿನಲ್ಲಿ ದೇಹದ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಗುಣಲಕ್ಷಣಗಳು ಕಂಡುಬರುತ್ತದೆ. ಇನ್ನೂ ವಿಶೇಷವಾಗಿ ಹೃದಯದ ಕಾಯಿಲೆಗಳನ್ನು ಮತ್ತು ಕ್ಯಾನ್ಸರ್ ಸಮಸ್ಯೆಯನ್ನು ನಿಯಂತ್ರಿಸುವ ಗುಣಲಕ್ಷಣಗಳು ಇದರಲ್ಲಿ ಅಪಾರ ಪ್ರಮಾಣದಲ್ಲಿ ಕಂಡುಬರುತ್ತವೆ.
ಒತ್ತಡ ನಿವಾರಕ

ಮಾನಸಿಕ ಒತ್ತಡ ಮತ್ತು ಮಾನಸಿಕ ಖಿನ್ನತೆಯಿಂದ ಬಳಲಿ ಬೆಂಡಾಗಿರುವ ಮಂದಿ ತಮ್ಮ ಆಹಾರ ಪದ್ಧತಿಯಲ್ಲಿ ಬಾಳೆ ಹೂವಿನಿಂದ ತಯಾರು ಮಾಡಿದ ಪಲ್ಯ, ಸಾರು ಇತ್ಯಾದಿಗಳನ್ನು ಬಳಕೆ ಮಾಡುವುದರಿಂದ ಕೇವಲ ಮಾನಸಿಕ ಒತ್ತಡ ಮಾತ್ರ ದೂರವಾಗದೆ, ವಿಪರೀತ ಭಯ ಮತ್ತು ಮಾನಸಿಕವಾಗಿ ಹೊರಬರಲಾರದೆ ಅನುಭವಿಸುತ್ತಿರುವ ಸಾಕಷ್ಟು ಸಮಸ್ಯೆಗಳು ದೂರವಾಗುತ್ತದೆ. ಮಾನಸಿಕ ಸ್ಥಿತಿಯನ್ನು ಸರಿಪಡಿಸುವ ಒಂದು ನೈಸರ್ಗಿಕ ಔಷಧಿ ಎಂದು ಇದನ್ನು ಕರೆಯಬಹುದು.
Add Banana Flower Recipes In Your Diet To Control Sugar, Irregular Periods And Other Disease.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm