ಬ್ರೇಕಿಂಗ್ ನ್ಯೂಸ್
25-02-22 11:18 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣಿನ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ ಅಲ್ವಾ? ಈ ಹಣ್ಣುಗಳು ಸ್ವಲ್ಪ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಆರೋಗ್ಯದ ವಿಷ್ಯಕ್ಕೆ ಬಂದಾಗ, ದೇಹಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಪೌಷ್ಟಿಕಾಂಶಗಳು, ವಿಟಮಿನ್ಗಳು ಸಾಕಷ್ಟು ಪ್ರಮಾಣದಲ್ಲಿ ಈ ಹಣ್ಣಿನಲ್ಲಿ ಸಿಗುತ್ತಿರುವುದರಿಂದ, ಹಲವಾರು ರೀತಿಯ ರೋಗಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ವಿಶೇಷವಾಗಿ ಬೇರೆಲ್ಲಾ ಹಣ್ಣುಗಳಂತೆ ದಾಳಿಂಬೆ ಹಣ್ಣು ಕೂಡ ಹೆಚ್ಚಾಗಿ ವರ್ಷಪೂರ್ತಿ ಸಿಗುವ ಕಾರಣ, ನಾವೆಲ್ಲರು ಹೆಚ್ಚಾಗಿ ಈ ಹಣ್ಣನ್ನು ನಮ್ಮ ಆಹಾರಕ್ರಮದಲ್ಲಿ ಸೇರಿಸಿಕೊಳ್ಳುತ್ತೇವೆ. ಆದರೆ ದಾಳಿಂಬೆ ಹಣ್ಣಿನ ಸಿಪ್ಪೆಯ ಬಗ್ಗೆ ಮರೆತುಬಿಡುತ್ತೇವೆ! ಇಲ್ಲಿಯೇ ನೋಡಿ, ನಾವು ಮಾಡುತ್ತಿರುವುದು ದೊಡ್ಡ ತಪ್ಪು! ಹಾಗಾದರೆ ಇನ್ನು ಮುಂದೆ ಈ ಹಣ್ಣಿನ ಬೀಜಗಳನ್ನು ತಿಂದ ಬಳಿಕ ಇದರ ಸಿಪ್ಪೆಯನ್ನು ಬಿಸಾಡಲು ಹೋಗಬೇಡಿ, ಇದರಿಂದ ಕೂಡ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ...
ಮೊಡವೆಗಳ ಸಮಸ್ಯೆಗೆ
ದಾಳಿಂಬೆ ಹಣ್ಣಿನ ಸಿಪ್ಪೆಯಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡು ಬರುವುದರಿಂದ, ಚರ್ಮದ ಭಾಗದಲ್ಲಿ ಕಂಡು ಬರುವ ಮೊಡವೆ, ಕೆಂಪು ಗುಳ್ಳೆಗಳು, ದದ್ದುಗಳು, ತುರಿಕೆಯಂತಹ ಸಮಸ್ಯೆಗಳು ಕೂಡಲೇ ಕಮ್ಮಿ ಆಗುತ್ತದೆ
ನೀವು ಹೀಗೆ ಮಾಡಿದರೆ ಸಾಕು
ಮೊದಲಿಗೆ ದಾಳಿಂಬೆ ಹಣ್ಣಿನ ಬೀಜಗಳನ್ನು ಬೇರ್ಪಡಿಸಿದ ಬಳಿಕ, ಇದರ ಸಿಪ್ಪೆಯನ್ನು ಬಿಸಿಲಿನಲ್ಲಿ, ಒಂದೆರಡು ದಿನಗಳವರೆಗೆ ಸರಿಯಾಗಿ ಒಣಗಲು ಬಿಡಿ. ನಂತರ ಒಂದು ಬಿಸಿಯಾದ ತವಾದ ಮೇಲೆ ರೋಸ್ಟ್ ಮಾಡಿಕೊಳ್ಳಿ. ಆಮೇಲೆ ಇದನ್ನು ತಣ್ಣಗಾಗಲು ಬಿಡಿ
ಒಮ್ಮೆಈ ಸಿಪ್ಪೆ ತಣ್ಣಗಾದ ಬಳಿಕ ಮಿಕ್ಸರ್ ಜಾರ್ಗೆ ಈ ದಾಳಿಂಬೆ ಸಿಪ್ಪೆಯನ್ನು ಹಾಕಿ, ಚೆನ್ನಾಗಿ ರುಬ್ಬಿಕೊಳ್ಳಿ. ಇನ್ನು ಈ ಮಿಶ್ರಣಕ್ಕೆ ಒಂದು ಚಮಚ ಆಗುವಷ್ಟು ನಿಂಬೆ ರಸ ಮಿಶ್ರಣ ಮಾಡಿ ಚೆನ್ನಾಗಿ ಕಲಸಿ, ಪೇಸ್ಟ್ ಮಾಡಿಕೊಂಡು ನಿಮ್ಮ ಮೊಡವೆಗಳ ಮೇಲೆ ಇದನ್ನು ಹಚ್ಚಿ. ಸುಮಾರು ೧೦ ನಿಮಿಷ ಆಗುವಷ್ಟು ಹೊತ್ತು ಹಾಗೆಯೇ ಒಣಗಲು ಬಿಟ್ಟು ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ಮುಖ ತೊಳೆದುಕೊಳ್ಳಿ.
ವಯಸ್ಸಾಗುವಿಕೆಯನ್ನು ತಡೆಯುತ್ತದೆ
ಇತ್ತೀಚಿನ ದಿನಗಳಲ್ಲಿ ಕೆಲವರಿಗೆ ಸಣ್ಣ ವಯಸ್ಸಿಗೆಯೇ ಮುಖದ ಚರ್ಮದ ಮೇಲೆ ಸುಕ್ಕುಗಳು ಕಂಡು ಬರುವ ಕಾರಣ ವಯಸ್ಸಾದವರ ಹಾಗೆ ಕಾಣುತ್ತಾರೆ. ಆದರೆ ಈ ಸಮಸ್ಯೆಗೆ ದಾಳಿಂಬೆ ಸಿಪ್ಪೆಗಳು ಪರಿಹಾರ ಒದಗಿಸುತ್ತವೆ. ಸಣ್ಣ ವಯಸ್ಸಿನಲ್ಲಿ ವಯಸ್ಸಾದವರ ಹಾಗೆ ಕಾಣುವ ಪ್ರಕ್ರಿಯೆಯನ್ನು ಇದು ದೂರ ಮಾಡುತ್ತದೆ.
ಇದಕ್ಕಾಗಿ ನೀವು ಹೀಗೆ ಮಾಡಿ
ಹೃದಯ ಸಮಸ್ಯೆಗಳಿಂದ ದೂರ ಇರಬಹುದು
ಒಂದು ಟೀ ಚಮಚ ದಾಳಿಂಬೆ ಸಿಪ್ಪೆಯ ಪುಡಿಯನ್ನು ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರಿಗೆ ಹಾಕಿ, ಮಿಕ್ಸ್ ಮಾಡಿಕೊಂಡು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ.
ವಾರಕ್ಕೆ ಎರಡು ಬಾರಿ ಈ ರೀತಿ ಮಾಡುವುದರಿಂದ, ಹೃದಯದ ಸಮಸ್ಯೆಗಳಿಂದ ದೂರವಿರಬಹುದು.
ಗಂಟಲು ನೋವಿಗೆ ರಾಮಬಾಣ
ಹಲ್ಲುಗಳ ಆರೋಗ್ಯಕ್ಕೆ
ಮೂಳೆಗಳ ಆರೋಗ್ಯಕ್ಕೂ ಒಳ್ಳೆಯದು
ಸುಮಾರು ಎರಡು ಟೇಬಲ್ ಚಮಚ ಆಗುವಷ್ಟು ದಾಳಿಂಬೆ ಸಿಪ್ಪೆಯ ಪೌಡರ್ನ್ನು ಒಂದು ಲೋಟ ಉಗುರುಬೆಚ್ಚಗಿನ ನೀರಿನಲ್ಲಿ ಹಾಕಿ, ಆಮೇಲೆ ಇದಕ್ಕೆ ಒಂದು ಟೀ ಚಮಚ ನಿಂಬೆ ರಸ ಹಾಗೂ ಚಿಟಿಕೆಯಷ್ಟು ಉಪ್ಪು ಬೆರೆಸಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ಮೂಳೆಗಳ ಆರೋಗ್ಯಕ್ಕೆ ಬಹಳ ಒಳ್ಳೆಯದು. ವಿಶೇಷವಾಗಿ ಮಹಿಳೆಯರಿಗೆ ಇದರಿಂದ ಸಾಕಷ್ಟು ಅನುಕೂಲವಿದೆ.
Dont Throw Pomegranate Peels, Its Having Lots Of Health Benefits.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am