ಬ್ರೇಕಿಂಗ್ ನ್ಯೂಸ್
17-03-22 09:55 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಮನುಷ್ಯನ ದೇಹದ ಆಂತರಿಕ ಭಾಗಗಳಲ್ಲಿ ಕಂಡು ಬರುವ ಬಹುಮುಖ್ಯ ಅಂಗಾಂಗಗಳಲ್ಲಿ ಮೂತ್ರಪಿಂಡಗಳು ಹಾಗೂ ಕಿಡ್ನಿಗಳು ಕೂಡ ಒಂದು. ಇದರ ಮುಖ್ಯ ಕಾರ್ಯವೆಂದರೆ, ನಮ್ಮ ದೇಹದಲ್ಲಿ ಕಂಡುಬರುವ ವಿಷಕಾರಿ ಅಂಶಗಳನ್ನು ಮೂತ್ರ ವಿಸರ್ಜನೆಯ ಮೂಲಕ ಹೊರ ಹಾಕುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ.
ಹೀಗಾಗಿ ಇಂತಹ ಪ್ರಮುಖ ಕಾರ್ಯ ನಿರ್ವಹಿಸುವ ಮೂತ್ರ ಪಿಂಡಗಳು, ದೇಹದೊಳಗೆ ಸರಿಯಾಗಿ ಕಾರ್ಯ ನಿರ್ವಹಣೆ ಮಾಡಬೇಕೆಂದರೆ, ಕೆಲವೊಂದು ಆರೋಗ್ಯಕಾರಿ ಆಹಾರಗಳ ಜೊತೆಗೆ ಹೂಕೋಸುನ್ನು ಕೂಡ ಸೇರಿಸುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕು. ಇದರಿಂದ ಕೆಲವೊಂದು ಅನಾರೋಗ್ಯ ಸಮಸ್ಯೆಗಳಿಂದ ದೂರ ಇರುವುದರ ಜೊತೆಗೆ, ಕಿಡ್ನಿಯ ಆರೋಗ್ಯವನ್ನು ಕಾಪಾಡಿ ಕೊಳ್ಳಬಹುದು...
ಹೂಕೋಸಿನ ಪ್ರಯೋಜನಗಳು

ನೋಡಲು ಸ್ವಲ್ಪ ದಪ್ಪಗೆ ಕಾಣುವ ಈ ಹೂಕೋಸು ಎಲ್ಲರಿಗೂ ಇಷ್ಟವಾಗುವ ತರಕಾರಿ. ತನ್ನಲ್ಲಿ ಹೇರಳವಾಗಿ ಪೌಷ್ಟಿಕಾಂಶಗಳನ್ನು ಹೊಂದಿರುವುದರ ಜೊತೆಗೆ, ವಿಟಮಿನ್ಸ್ಗಳಾದ ವಿಟಮಿನ್ ಸಿ ವಿಟಮಿನ್ ಕೆ, ಮ್ಯಾಂಗನೀಸ್, ಪಾಸ್ಪರಸ್, ನಾರಿನಾಂಶ, ಪೋಲಿಕ್ ಆಮ್ಲ ಹಾಗೂ ಪೊಟ್ಯಾಶಿಯಂ ಇತ್ಯಾದಿಗಳು ಬಹಳ ಹೇರಳವಸಿಗುತ್ತವೆ.
ವಿಶೇಷವಾಗಿ ಈ ತರಕಾರಿಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಕೊಬ್ಬಿನ ಅಂಶ ಒಳಗೊಂಡಿರುವುದರಿಂದ ಹೃದಯದ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ, ಮಧುಮೇಹ ಸಮಸ್ಯೆಯನ್ನು ಕೂಡ ನಿಯಂತ್ರಣದಲ್ಲಿಡುವ ಹಲವಾರು ಆರೋಗ್ಯಕರ ಗುಣಲಕ್ಷಣಗಳನ್ನು ಇದು ಒಳಗೊಂಡಿದೆ.
ಅದರಲ್ಲೂ ಕೆಲವೊಮ್ಮೆ ಸಕ್ಕರೆಕಾಯಿಲೆ ಅಥವಾ ಮಧುಮೇಹ ಸಮಸ್ಯೆ, ನಿಯಂತ್ರಣಕ್ಕೆ ಬರದೇ ಹೋದರೆ ಕಿಡ್ನಿಗಳು ಹಾಳಾಗುತ್ತವೆ ಎಂದು ಕೇಳಿದ್ದೇವೆ . ಹೀಗಾಗಿ ನಿಯಮಿತವಾಗಿ ಹೂಕೋಸು ಸೇವನೆ ಮಾಡುತ್ತಾ ಬಂದರೆ ಕಿಡ್ನಿಗಳ ಆರೋಗ್ಯ ತನ್ನಿಂತಾನೇ ವೃದ್ಧಿ ಆಗುತ್ತದೆ .
ಆಂತರಿಕವಾಗಿ ಸ್ವಚ್ಛ ಮಾಡುವ ಕೆಲಸ ಮಾಡುತ್ತದೆ!
ಇನ್ನು ವಿಶೇಷವಾಗಿ ಹೂಕೋಸಿನಲ್ಲಿ ಹೇರಳವಾಗಿ ಕಂಡುಬರುವ ಥಿಯೋಸೈನೇಟ್ಸ್ (Thiocyanates) ಹಾಗೂ ಗ್ಲುಕೋಸಿನೋಲೇಟ್ (glucosinolate)ಎಂಬ ಎರಡು ಸಂಯುಕ್ತ ಅಂಶಗಳು ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತದೆ.
ಕಿಡ್ನಿಗಳ ಆರೋಗ್ಯಕ್ಕೆ ಹೂಕೋಸು ಸೇವಿಸಿ

ವಿಟಮಿನ್ ಸಿ, ನಾರಿನಾಂಶ ಮತ್ತು ಫೋಲೆಟ್ ಅಂಶ

ಇನ್ನು ಈ ತರಕಾರಿಗಳಲ್ಲಿ ವಿಟಮಿನ್ ಸಿ, ನಾರಿನಾಂಶ ಮತ್ತು ಫೋಲೆಟ್ ಅಂಶ ಹೆಚ್ಚಾಗಿ ಕಂಡು ಬರುವುದರಿಂದ, ನಿಯಮಿತವಾಗಿ ಇದನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿ ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದರಿಂದ ಕಿಡ್ನಿಗಳಿಂದ ಅಪಾರ ಪ್ರಮಾಣದ ವಿಷಕಾರಿ ಅಂಶಗಳು ಹೊರ ಹೋಗಲು ಅನುಕೂಲ ಆಗುತ್ತದೆ.
ಇನ್ನೂ ಒಂದು ವಿಶೇಷತೆ ಏನೆಂದರೆ, ಮೊದಲೇ ಹೇಳಿದ ಹಾಗೆ ಇದರಲ್ಲಿ ಫೋಲೆಟ್ ಅಂಶ ಯಥೇಚ್ಛವಾಗಿ ಕಂಡುಬರುವುದರಿಂದ ದೇಹದ ಭಾಗಗಳಲ್ಲಿ ಶೇಖರಣೆಯಾಗುವ ಕೊಬ್ಬಿನ ಅಂಶ ಮತ್ತು ಬೊಜ್ಜಿನ ಅಂಶದನಿವಾರಣೆಯಾಗುತ್ತದೆ.
ಹೂಕೋಸು ಸೇವನೆಯಿಂದ ಸಿಗುವ ಇತರ ಪ್ರಯೋಜನಗಳು
![]()
Is Cauliflower Good For Kidney Patients,These Things You Must Know.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm