ಬ್ರೇಕಿಂಗ್ ನ್ಯೂಸ್
03-05-22 07:32 pm Source: Vijayakarnataka ಡಾಕ್ಟರ್ಸ್ ನೋಟ್
ಒಮ್ಮೆ ಮಧುಮೇಹ ವ್ಯಕ್ತಿಗೆ ಬಂದರೆ ಮತ್ತೆ ಹೋಗುವ ಮಾತೇ ಇಲ್ಲ. ಮಧುಮೇಹವನ್ನು ನಿಯಂತ್ರಿಸಬಹುದೇ ವಿನಃ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಶುಗರ್ ಅಥವಾ ಮಧುಮೇಹ ಸಾಮಾನ್ಯವಾದ ಕಾಯಿಲೆ ಎಂದು ಮಾತ್ರ ನಿರ್ಲಕ್ಷ್ಯ ಧೋರಣೆಯನ್ನು ಹೊಂದದಿರಿ.
ಏಕೆಂದರೆ ಅತಿಯಾದ ಮಧುಮೇಹದ ಪರಿಸ್ಥಿತಿಯು ಪಾರ್ಶ್ವವಾಯು, ಹೃದ್ರೋಗದಂತಹ ಅಪಾಯವನ್ನು ತಂದೊಡ್ಡಬಹುದು. ಮಧುಮೇಹ ಹೊಂದಿರುವವರು ಮೊದಲು ಅವರ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿರ್ವಹಿಸಲು ಪ್ರಯತ್ನಿಸಬೇಕು. ಬಹುತೇಕರಿಗೆ ಮಧುಮೇಹಕ್ಕೆ ಯಾವ ರೀತಿಯ ಹಣ್ಣುಗಳು ಉತ್ತಮ ಎಂಬ ಗೊಂದಲದಲ್ಲಿರುತ್ತಾರೆ.
ಲೇಖನದಲ್ಲಿ ಹೇಳಲಾಗುವ ಹಣ್ಣುಗಳು ಉತ್ಕರ್ಷಣ ನಿರೋಧಕಗಳು ಮತ್ತು ಇತರ ಪೋಷಕಾಂಶಗಳಿಂದ ಸಮೃದ್ಧವಾಗಿರುವುದು ಮಾತ್ರವಲ್ಲದೆ, ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತದೆ.ಹಾಗಾದರೆ ಯಾವೆಲ್ಲಾ ಹಣ್ಣುಗಳನ್ನು ಮಧುಮೇಹ ಹೊಂದಿರುವವರು ನಿಸ್ಸಂಶಯವಾಗಿ ಸೇವನೆ ಮಾಡಬಹುದು ಎಂಬುದನ್ನು ಲೇಖನದಲ್ಲಿ ನೀಡಲಾಗಿದೆ ಓದಿ.
ಪೀಚ್ ಹಣ್ಣು

ರುಚಿಕರವಾದ ಪೀಚ್ ಹಣ್ಣು ಮಧುಮೇಹ ಹೊಂದಿರುವವರಿಗೆ ಬಹಳ ಒಳ್ಳೆಯದು. ಈ ಹಣ್ಣಿನಲ್ಲಿ ಫೈಬರ್ನ ಅತ್ಯುತ್ತಮವಾದ ಮೂಲವನ್ನು ಹೊಂದಿದೆ. ಅಲ್ಲದೆ, ವಿಟಮಿನ್ ಸಿ, ವಿಟಮಿನ್ ಎ ಮತ್ತು ಪೊಟ್ಯಾಶಿಯಮ್ನಿಂದ ತುಂಬಿದೆ.
ಪೀಚ್ ಹಣ್ಣಿನಲ್ಲಿ ಜೈವಿಕ ಸಕ್ರಿಯ ಸಂಯುಕ್ತವು ಅಡಕವಾಗಿದೆ. ಇದು ಮಧುಮೇಹದ ಪರಿಣಾಮ ಉಂಟಾಗುವ ಬೊಜ್ಜು ಮತ್ತು ಆರೋಗ್ಯ ಸಂಬಂಧಿತ ಸಮಸ್ಯೆಗಳ ವಿರುದ್ಧ ಹೋರಾಡುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಸ್ವಾದಿಷ್ಟವಾದ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಉರಿಯೂತವನ್ನು ಕಡಿಮೆ ಮಾಡಿ, ಜೀರ್ಣಕ್ರಿಯೆಯನ್ನು ಸುಧಾರಿಸಲು ಉತ್ತೇಜಿಸುತ್ತದೆ.
ನೇರಳೆ ಹಣ್ಣು

ನೇರಳೆ ಹಣ್ಣು ಮಧುಮೇಹ ಹೊಂದಿರುವವರಿಗೆ ಬಹಳ ಒಳ್ಳೆಯದು ಎಂದು ನೀವು ಈಗಾಗಲೇ ತಿಳಿದಿದ್ದೀರಿ. ಶತಮಾನಗಳಿಂದಲೂ ಮಧುಮೇಹಕ್ಕೆ ರಾಮಬಾಣವಾಗಿ ನೇರಳೆ ಹಣ್ಣನ್ನು ಆಯುರ್ವೇದದಲ್ಲಿ ಬಳಸಲಾಗುತ್ತಿದೆ. ಈ ರಸಭರಿತ ಹಣ್ಣಿನಲ್ಲಿ ಸಕ್ಕರೆಯ ಅಂಶ ಕಡಿಮೆ ಇದ್ದು, ರಕ್ತದಲ್ಲಿನ ಸಕ್ಕರೆಯ ಅಂಶವನ್ನು ಪರಿಣಾಮಕಾರಿಯಾಗಿ ತಗ್ಗಿಸುತ್ತದೆ. ಪ್ರತಿನಿತ್ಯ ಮಧುಮೇಹಿಗಳು ನಿಸ್ಸಂದೇಹವಾಗಿ ಈ ಹಣ್ಣನ್ನು ಸೇವನೆ ಮಾಡಬಹುದು.ನೇರಳೆ ಹಣ್ಣಿನಲ್ಲಿರುವ ಸಂಯುಕ್ತವು ಹಲವಾರು ಸೂಕ್ಷ್ಮ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತದೆ.
ಸೇಬು

ದಿನಕ್ಕೊಂದು ಸೇಬು ತಿನ್ನುವುದರಿಂದ ವೈದ್ಯರಿಂದ ದೂರವಿರಬಹುದು ಎಂಬ ಮಾತು ಕೇಳಿರಬಹುದು ಅಲ್ಲವೇ? ಇದು ಅಕ್ಷರಶಃ ನಿಜ. ಸೇಬು ಫೈಬರ್ನ ಉತ್ತಮವಾದ ಮೂಲವನ್ನು ಹೊಂದಿದೆ. ಹೆಚ್ಚಿನ ಪೋಷಕಾಂಶಗಳು ಹೊಂದಿರುವ ಸೇಬನ್ನು ಮಧುಮೇಹ ಹೊಂದಿರುವವರು ಸೇವನೆ ಮಾಡಬಹುದು.
ಕರಗುವ ಮತ್ತು ಕರಗದ ಫೈಬರ್ ಎರಡನ್ನೂ ಹೊಂದಿರುವ ಸೇಬುಗಳು ಮಲಬದ್ಧತೆಯನ್ನು ತಡೆಯಲು ಉತ್ತೇಜಿಸುತ್ತದೆ. ಅಲ್ಲದೆ, ಇದರಲ್ಲಿರುವ ಫೈಬರ್ ದೀರ್ಘಕಾಲದವರೆಗೆ ನಿಮ್ಮ ಹಸಿವನ್ನು ನಿಗ್ರಹಿಸುವ ಮೂಲಕ ಹೆಚ್ಚು ತಿನ್ನುವುದು ತಪ್ಪಿಸುತ್ತದೆ.
ಪಪ್ಪಾಯಿ

ಪಪ್ಪಾಯಿ ಅತ್ಯಂತ ಆರೋಗ್ಯಕರವಾದ ಹಣ್ಣುಗಳಲ್ಲಿ ಒಂದಾಗಿದೆ. ಮಧುಮೇಹ ಹೊಂದಿರುವವರು ಪಪ್ಪಾಯಿಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ವರದಿಗಳ ಪ್ರಕಾರ, ಪಪ್ಪಾಯಿ ಹಣ್ಣು ದೇಹದ ಮೇಲೆ ಹೈಪೊಗ್ಲಿಸಿಮಿಕ್ ಪರಿಣಾಮವನ್ನು ಬೀರಬಹುದು. ಅಲ್ಲದೆ, ಈ ಹಣ್ಣಿನಲ್ಲಿ ಫ್ಲೇವನಾಯ್ಡ್ಗಳಿದ್ದು, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಉತ್ತೇಜಿಸುತ್ತದೆ.
ಪಪ್ಪಾಯಿಯು ಕಡಿಮೆ ಕ್ಯಾಲೋರಿ ಹಣ್ಣಾಗಿದ್ದು, ವಿಟಮಿನ್ ಬಿ, ಫೋಲೇಟ್, ಪೊಟ್ಯಾಶಿಯಂ ಮತ್ತ ಮೆಗ್ನೀಸಿಯಮ್ನಿಂದ ತುಂಬಿದೆ. ಒಟ್ಟಾರೆ ಇರದಲ್ಲಿರುವ ಉತ್ಕರ್ಷಣ ನಿರೋಧಕಗಳು ಜೀವಕೋಶದ ಹಾನಿಯನ್ನು ತಡೆಯುತ್ತದೆ ಮತ್ತು ತೂಕವನ್ನು ನಿರ್ವಹಿಸುತ್ತದೆ.
ಪೇರಲ ಹಣ್ಣು
![]()
ಸೇಬಿಗಿಂತ ದ್ವಿಗುಣ ಪೋಷಕಾಂಶಗಳನ್ನು ಹೊಂದಿರುವ ಪೇರಲ ಹಣ್ಣು ಮಧುಮೇಹ ಹೊಂದಿರುವವರಿಗೆ ಉತ್ತಮವಾದ ಹಣ್ಣಾಗಿದೆ. ಈ ಹಣ್ಣಿನಲ್ಲಿ ಫೈಬರ್ ತುಂಬಿದೆ. ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಈ ಹಣ್ಣು ನಿಧಾನವಾಗಿ ಜೀರ್ಣಸಿಕೊಳ್ಳಬಹುದಾಗಿದೆ. ಪೇರಲ ಹಣ್ಣು ಕಡಿಮೆ ಸಕ್ಕರೆಯ ಅಂಶವನ್ನು ಹೊಂದಿರುವುದರಿಂದ ಮಧುಮೇಹಿಗಳಿಗೆ ಒಳ್ಳೆಯದು.
ಹೆಚ್ಚಿನ ಪೊಟ್ಯಾಶಿಯಂ ಹೊಂದಿರುವ ಈ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಅಪಾಯಕಾರಿ ಕಾಯಿಲೆಗಳನ್ನು ಹುಟ್ಟಿನಲ್ಲಿಯೇ ತಡೆಯುತ್ತದೆ.
5 Fruit Will Reduce Blood Sugar Level Naturally In Kannada.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am