ಬ್ರೇಕಿಂಗ್ ನ್ಯೂಸ್
13-05-22 08:16 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಮನುಷ್ಯನಿಗೆ ರಕ್ತದ ಒತ್ತಡ ಅಂದರೆ ಬಿಪಿ ಲೆವೆಲ್ ಯಾವಾಗಲೂ ನಾರ್ಮಲ್ ಆಗಿರಬೇಕು. ಒಂದು ವೇಳೆ, ಈ ನಮ್ಮ ರಕ್ತದೊತ್ತಡದಲ್ಲಿ ವ್ಯತ್ಯಾಸವಾದರೆ ಅದರ ನೇರ ಪರಿಣಾಮ ಹೃದಯದ ಮೇಲೆ ಉಂಟಾಗುತ್ತದೆ! ಹಾಗಾಗಿ ಈ ಕಾಯಿಲೆಯ ಬಗ್ಗೆ, ನಾವು ಜಾಗರೂಕತೆ ವಹಿಸಿದಷ್ಟು, ಆರೋಗ್ಯಕ್ಕೆ ಒಳ್ಳೆಯದು.. ಇನ್ನು ಈ ಕಾಯಿಲೆಗೆ ಕಾರಣಗಳನ್ನು ನೋಡುವುದಾದರೆ, ಒತ್ತಡ ಜೀವನಶೈಲಿ, ವಿಪರೀತ ಟೆನ್ಷನ್ ಮಾಡಿಕೊಳ್ಳುವುದು, ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದು, ದೈನಂದಿನ ದೈಹಿಕ ಚಟುವಟಿಕೆ ಇಲ್ಲದೆ ಇರುವುದು, ಇವೆಲ್ಲವೂ ಈ ಕಾಯಿಲೆ ನಮ್ಮನ್ನು ಆವರಿ ಸಲು ಕಾರಣವಾಗಿ ಬಿಡುತ್ತದೆ!
ಹೀಗಾಗಿ ಸರಿಯಾದ ಜೀವನಶೈಲಿ ಹಾಗೂ ವೈದ್ಯರು ಸೂಚಿಸಿರುವ ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ, ಕೆಲವೊಂದು ಆಹಾರಗಳನ್ನು ಕೂಡ ನಿಯಮಿತವಾಗಿ ಸೇವನೆ ಮಾಡುವುದರಿಂದ ಕೂಡ ಈ ಕಾಯಿಲೆಯನ್ನು ಕಟ್ಟಿಹಾಕಬಹುದು, ಅಲ್ಲದೇ ನೆಮ್ಮದಿಯ ಜೀವನವನ್ನು ಕೂಡ ಸಾಗಿಸಬಹುದು...
ಸೀಬೆ ಹಣ್ಣಿನ ಜ್ಯೂಸ್

ಹಾಲಿನಲ್ಲಿ ನೆನೆಸಿಟ್ಟ ಖರ್ಜೂರ
![]()
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆ ಕಾಯಿಲೆಯಿಂದ ಬಳಲುತ್ತಿರುವವರು, ಸರಿಸುಮಾರು ನಾಲ್ಕೈದು ಖರ್ಜೂರಗಳನ್ನು ದಿನಾ ರಾತ್ರಿ ಮಲಗುವ ಮುನ್ನ, ಒಂದು ಬೌಲ್ ಹಾಲಿನಲ್ಲಿ ಹಾಕಿ ನೆನೆಸಿಡಬೇಕು.. ಮರುದಿನ ಬೆಳಗಿನ ಸಮಯದಲ್ಲಿ ಅಂದರೆ, ಬ್ರೇಕ್ ಫಾಸ್ಟ್ ಮಾಡುವ ಅರ್ಧ ಗಂಟೆ ಮುಂಚೆ ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಕ್ರಮೇಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ದಾಳಿಂಬೆ ಹಣ್ಣಿನ ಜ್ಯೂಸ್
ಮೆಗ್ನಿಶಿಯಂ ಹಾಗೂ ಕ್ಯಾಲ್ಸಿಯಂ ಅಂಶ ಹೆಚ್ಚಿರುವ ಆಹಾರಗಳನ್ನು ಸೇವಿಸಿ..
![]()
ದಿನಕ್ಕೊಂದು ಬಾಳೆಹಣ್ಣು ತಿನ್ನಿ...

ಮಿತವಾಗಿ ಮೊಸರು ಸೇವನೆ..

ಹಾಲಿನ ಉಪ ಉತ್ಪನ್ನವಾದ ಮೊಸರಿನಲ್ಲಿ ಅಧಿಕ ಪ್ರಮಾಣದಲ್ಲಿ ಕ್ಯಾಲ್ಸಿಯಂ, ಮೆಗ್ನಿಶಿಯಂ ಮತ್ತು ಪೊಟಾಶಿ ಯಂ ಅಂಶ ಹೆಚ್ಚಾಗಿ ಇರುವುದರಿಂದ ಅಧಿಕ ರಕ್ತದೊತ್ತದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬಹಳ ಒಳ್ಳೆಯದು ಎಂದು ಸಾಬೀತಾಗಿದೆ. ಹೀಗಾಗಿ ಈಗಾಗಲೇ ಈ ಸಮಸ್ಯೆಯಿಂದ ಬಳಲುತ್ತಿರುವವರು ಆದಷ್ಟು ತಮ್ಮ ಆಹಾರ ಪದ್ಧತಿ ಯಲ್ಲಿ ಮಿತವಾಗಿ ಮೊಸರು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಒಳ್ಳೆಯದು.
ಟೊಮೆಟೊ ಜ್ಯೂಸ್
![]()
ಈಗ ಟೊಮೆಟೊ ಹಣ್ಣಿನ ಬೆಲೆ ಕೇಳಿದರೆಯೇ, ಬಿಪಿ ಹೈ ಆಗಬಹುದು!! ಅದು ಏನೇ ಇರಲಿ ಆದರೆ ಟೊಮೆಟೊ ಹಣ್ಣಿನ ಜ್ಯೂಸ್ ಮಾತ್ರ ಅಧಿಕ ರಕ್ತದ ಒತ್ತಡದ ಸಮಸ್ಯೆ ಇರುವವರಿಗೆ ಬಹಳ ಒಳ್ಳೆಯದು...ಇದಕ್ಕೆ ಮುಖ್ಯ ಕಾರಣ ಇದರಲ್ಲಿ ಕಂಡು ಬರುವ ಕ್ಯಾರೋಟಿನ್ ಅಂಶ, ವಿಟಮಿನ್ ಎ ಮತ್ತು ಕ್ಯಾಲ್ಸಿಯಂ ಅಂಶ ರಕ್ತದ ಒತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುವುದು ಮಾತ್ರವಲ್ಲದೆ, ರಕ್ತ ಸಂಚಾರದಲ್ಲಿ ಕಂಡುಬರುವ ಕೊಲೆಸ್ಟ್ರಾಲ್ ಅಂಶ ಅಚ್ಚು ಕಟ್ಟಾಗಿ ನಿರ್ವಹಣೆಯಾಗುತ್ತದೆ, ಇದರಿಂದಾಗಿ ಹೃದಯದ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
Foods That Can Lower Your Blood Pressure Naturally.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm