ಬ್ರೇಕಿಂಗ್ ನ್ಯೂಸ್
11-08-20 05:03 pm Headline Karnataka News Network ಲೀಡರ್ಸ್ ರಿಪೋರ್ಟ್
ಬೆಂಗಳೂರು, ಆಗಸ್ಟ್ 11: ಸರಳ ರಾಜಕಾರಣಿ ಎಂದೇ ಹೆಸರು ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ತಮ್ಮ ಮಾದರಿ ನಡೆ ತೋರಿದ್ದಾರೆ. ಕೊರೊನಾ ಆತಂಕದ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಡ ವಿದ್ಯಾರ್ಥಿಯೊಬ್ಬ ರಾಜ್ಯದಲ್ಲಿ ಗರಿಷ್ಠ ಅಂಕದ ಸಾಧನೆ ಮಾಡಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆತನ ಪುಟ್ಟ ಗುಡಿಸಲಿದ್ದಲ್ಲಿಗೇ ತೆರಳಿ ಸನ್ಮಾನಿಸಿದ್ದಾರೆ.
ಯಾದಗಿರಿ ಮೂಲದ ಮಲ್ಲವ್ವ ಕುಟುಂಬ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದು ಈಕೆಯ ಮಗ ಚಿರಾಯು ಈಗ 625ರಲ್ಲಿ 616 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾನೆ. ಬೆಂಗಳೂರಿನ ಇಂದಿರಾನಗರದ ಚಿಕ್ಕಬಿದರಕಲ್ಲು ಎಂಬಲ್ಲಿ ಗುಡಿಸಲಿನಲ್ಲಿ ಚಿರಾಯು ಕುಟುಂಬ ವಾಸ ಇದೆ. ಇಂದಿರಾ ನಗರದ ಜೀವನ್ ಭೀಮಾ ನಗರದಲ್ಲಿರುವ ಕರ್ನಾಟಕ ಸರಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ.

ಕಡು ಬಡತನದ ಮಧ್ಯೆ ಶ್ರೇಷ್ಠ ಸಾಧನೆ ಮಾಡಿದ ಚಿರಾಯುವನ್ನು ಸನ್ಮಾನಿಸಿದ ಸುರೇಶ್ ಕುಮಾರ್, ಚಿರಾಯು ಸಮಾಜದಲ್ಲಿ ಒಳ್ಳೆಯ ಆದರ್ಶ ವ್ಯಕ್ತಿಯಾಗಲಿ ಎಂದು ಹಾರೈಸಿದರು. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು ಮಗನ ಸಾಧನೆ ಕಂಡು ಹೆಮ್ಮೆ ಪಟ್ಟಿದ್ದಾರೆ. ಪಿಯುಸಿ ತರಗತಿಯಲ್ಲಿ ಚಿರಾಯು ವಿಜ್ಞಾನ ವಿಷಯ ಓದಬೇಕೆಂಬ ಬಯಕೆ ಹೊಂದಿದ್ದಾನೆ.
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm