ಬ್ರೇಕಿಂಗ್ ನ್ಯೂಸ್
16-08-20 05:05 pm Headline Karnataka News Network ಲೀಡರ್ಸ್ ರಿಪೋರ್ಟ್
ಮಂಗಳೂರು, ಆಗಸ್ಟ್ 16: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಹಲವಾರು ಭರವಸೆಗಳನ್ನು ಪ್ರಥಮ ಹಂತದಲ್ಲೇ ಈಡೇರಿಸಿದ್ದೇವೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಮಂಗಳೂರಿನ ಅಭಿವೃದ್ಧಿಗೆ ಪೂರಕವಾಗಿ ಟಿ.ಡಿ.ಆರ್ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ಟಿ.ಡಿ.ಆರ್ ಸೆಲ್ ತೆರೆಯುವ ಕುರಿತು ಭರವಸೆ ನೀಡಿದ್ದೆವು. ಆ ಪ್ರಕಾರ ಅಭಿವೃದ್ಧಿ ಕಾಮಗಾರಿ ಸಂಬಂಧಿಸಿ ಖಾಸಗಿ ಜಮೀನಿನ ಅಗತ್ಯ ಇರುವುದರಿಂದ, ಭೂಸ್ವಾಧೀನಕ್ಕೆ ವೇಗ ನೀಡಲು ಪ್ರತ್ಯೇಕ ಟಿ.ಡಿ.ಆರ್ ಸೆಲ್ ತೆರೆಯಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಉಪ ಕರವನ್ನು ಹಾಗೂ ಉದ್ದಿಮೆಗಳ ಮೇಲೆ ವಿಧಿಸಿರುವ ಘನತ್ಯಾಜ್ಯ ವಿಲೇವಾರಿ ಸೇವಾಶುಲ್ಕವನ್ನು ಪರಿಷ್ಕರಿಸುವ ಮೂಲಕ ಜನರಿಗೆ ಚುನಾವಣೆಯ ವೇಳೆ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳಲಾಗಿದೆ. ಆಡಳಿತ ವ್ಯವಸ್ಥೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ಎಲ್ಲ ವಾರ್ಡುಗಳಲ್ಲಿಯೂ ವಾರ್ಡ್ ಸಮಿತಿ ರಚಿಸಲು ನಿರ್ಣಯ ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿ ಕಣ್ಣೂರು ಗ್ರಾಮದಲ್ಲಿ ಜಿ+3 ಮಾದರಿಯ 500 ಮನೆಗಳ ನಿರ್ಮಾಣ ಯೋಜನೆಗೆ ಪಾಲಿಕೆಯಿಂದ ಶೇ.10 ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. 6 ಗುಂಪುಗಳ ಜಿ+3 ಮಾದರಿಯ 21 ಬ್ಲಾಕ್ ಗಳನ್ನೊಳಗೊಂಡ ಲೇಔಟ್ ಯೋಜನೆ ಮಾಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಯಂತೆ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ದರ ಕಡಿಮೆಗೊಳಿಸಲಾಗಿದೆ. ಗೃಹೇತರ, ವಾಣಿಜ್ಯ, ಕಟ್ಟಡ ರಚನೆ, ಸಗಟು ಪೂರೈಕೆ, ಬೃಹತ್ ಕೈಗಾರಿಕೆ ಹಾಗೂ ಗೃಹ ಬಳಕೆ ನೀರಿನ ದರವನ್ನು ಪರಿಷ್ಕರಿಸಲಾಗಿದೆ. ಆ ಮೂಲಕ ಮಂಗಳೂರಿನ ಜನತೆಗೆ ನಾವು ನೀಡಿದ್ದ ಭರವಸೆಯನ್ನು ನಮ್ಮ ಆಡಳಿತದ ಪ್ರಥಮ ಹಂತದಲ್ಲೇ ಈಡೇರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಪದವು ಗ್ರಾಮದಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಹಾಗೂ ರಾಜ್ಯ ಸರ್ಕಾರದ ಅನುದಾನದಡಿ ಮಂಜೂರಾತಿ ಪಡೆದಿರುವ ಜಿ+3 ಮಾದರಿಯ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಉಂಟಾಗಿದ್ದ ಸಂರಕ್ಷಿತ ಅರಣ್ಯದ ತೊಡಕನ್ನು ನಿವಾರಿಸಲಾಗಿದೆ. ಅರಣ್ಯ ಇಲಾಖೆಗೆ ಪ್ರತ್ಯೇಕ ಜಮೀನು ನೀಡಲಾಗಿದ್ದು, ಈ ಹಿಂದೆ ಗುರುತಿಸಿದ ಸ್ಥಳದಲ್ಲೇ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm