ಬ್ರೇಕಿಂಗ್ ನ್ಯೂಸ್
06-09-20 05:52 pm Udupi Reporter ಲೀಡರ್ಸ್ ರಿಪೋರ್ಟ್
ಉಡುಪಿ, ಸೆಪ್ಟೆಂಬರ್ 6: ದೇಶದಲ್ಲಿ ಕಡಲ ಮೀನುಗಾರಿಕೆಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಒಳನಾಡು ಮೀನು ಉತ್ಪಾದನೆಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನು ಮೂರು ವರ್ಷದಲ್ಲಿ ದೇಶದಲ್ಲಿ ಕರ್ನಾಟಕ ರಾಜ್ಯ ಮೀನು ಉತ್ಪಾದನೆಯಲ್ಲಿ ಪ್ರಥಮ ಸ್ಥಾನ ತಲುಪುವ ಅವಕಾಶ ನಿಚ್ಚಳವಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜಿಲ್ಲೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಗಂಗೊಳ್ಳಿ, ಮರವಂತೆ, ಕೊಡೇರಿ ಮೀನುಗಾರಿಕಾ ಜಟ್ಟಿ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೀನುಗಾರಿಕೆಗೆ ನೀಡುತ್ತಿರುವ ಸಹಕಾರ ಹಾಗೂ ಉತ್ತೇಜನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗಂಗೊಳ್ಳಿ ಮೀನುಗಾರಿಕಾ ಜಟ್ಟಿ ಕಾಮಗಾರಿ ವೀಕ್ಷಿಸಿದ ಸಚಿವರು 12 ಕೋಟಿ ರುಪಾಯಿ ಮೊತ್ತದಲ್ಲಿ ಹೊಸದಾಗಿ ಜಟ್ಟಿ ನಿರ್ಮಾಣವಾಗಲಿದ್ದು, ಇದರಿಂದ ಗಂಗೊಳ್ಳಿ ಪ್ರದೇಶದ ಮೀನುಗಾರಿಕೆಗೆ ಹೊಸ ಕಾಯಕಲ್ಪ ಸಿಗಲಿದೆ ಎಂದು ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಜಟ್ಟಿ ಪ್ರದೇಶದಲ್ಲಿ ಹೈಮಾಸ್ಟ್ ದೀಪದ ಅಳವಡಿಕೆ, ತುರ್ತಾಗಿ ಹೂಳೆತ್ತುವುದು ಸೇರಿದಂತೆ ಹಲವಾರು ಬೇಡಿಕೆಗೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿ, ತಕ್ಷಣ ಸಮಸ್ಯೆ ಬಗೆಹರಿಸಲು ತಿಳಿಸಿದರು.
ಮರವಂತೆ ಬ್ರೇಕ್ ವಾಟರ್ ನಿರ್ಮಾಣವಾಗುತ್ತಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು, ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿಗೆ 85 ಕೋಟಿ ರೂ. ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮೀನುಗಾರರ ಪರವಾಗಿ ಕೃತಜ್ಞತೆ ತಿಳಿಸಿದರು. ಎರಡನೇ ಹಂತದ ಕಾಮಗಾರಿಯ ಯೋಜನಾ ವರದಿ ಸಿದ್ಧವಾಗಿ, ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆಗಳು ಮುಗಿದು, ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮೀನುಗಾರರಿಗೆ ಭರವಸೆ ನೀಡಿದರು.

ಕೊಡೇರಿ ಮೀನುಗಾರಿಕಾ ಜೆಟ್ಟಿ ಮತ್ತು ಉಪ್ಪುಂದ ನಾಡದೋಣಿ ತಂಗುದಾಣದ ಕಿರು ಜಟ್ಟಿಗಳ ವಿಸ್ತರಣೆ ಮಾಡಿ ಮೂಲಭೂತ ಸೌಕರ್ಯ, ವಿದ್ಯುತ್ ದೀಪ, ಕೊಂಡಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು. ಇದಕ್ಕೆ ಪೂರಕವಾಗಿ 4.5 ಕೋಟಿ ರುಪಾಯಿ ಪ್ರಸ್ತಾವನೆ ಹಣಕಾಸು ಇಲಾಖೆಯಲ್ಲಿ ಇದ್ದು, ವಾರಾಂತ್ಯದಲ್ಲಿ ಮಂಜೂರಾತಿ ಪಡೆದು ಮೀನುಗಾರರಿಗೆ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.
ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಭೇಟಿ ನೀಡಿದ ಸಚಿವರಿಗೆ, ಮೀನು ವ್ಯಾಪಾರಿ ಮಹಿಳೆಯರು ವೃತ್ತಿ ಮಾಡಲು ಜಾಗದ ಸಮಸ್ಯೆಗಳಿದ್ದು, ಪರಿಹಾರ ಕೊಡಿಸಬೇಕೆಂದು ವಿನಂತಿಸಿದರು.
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm