ಬ್ರೇಕಿಂಗ್ ನ್ಯೂಸ್
06-09-20 05:52 pm Udupi Reporter ಲೀಡರ್ಸ್ ರಿಪೋರ್ಟ್
ಉಡುಪಿ, ಸೆಪ್ಟೆಂಬರ್ 6: ದೇಶದಲ್ಲಿ ಕಡಲ ಮೀನುಗಾರಿಕೆಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಒಳನಾಡು ಮೀನು ಉತ್ಪಾದನೆಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನು ಮೂರು ವರ್ಷದಲ್ಲಿ ದೇಶದಲ್ಲಿ ಕರ್ನಾಟಕ ರಾಜ್ಯ ಮೀನು ಉತ್ಪಾದನೆಯಲ್ಲಿ ಪ್ರಥಮ ಸ್ಥಾನ ತಲುಪುವ ಅವಕಾಶ ನಿಚ್ಚಳವಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜಿಲ್ಲೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಗಂಗೊಳ್ಳಿ, ಮರವಂತೆ, ಕೊಡೇರಿ ಮೀನುಗಾರಿಕಾ ಜಟ್ಟಿ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೀನುಗಾರಿಕೆಗೆ ನೀಡುತ್ತಿರುವ ಸಹಕಾರ ಹಾಗೂ ಉತ್ತೇಜನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗಂಗೊಳ್ಳಿ ಮೀನುಗಾರಿಕಾ ಜಟ್ಟಿ ಕಾಮಗಾರಿ ವೀಕ್ಷಿಸಿದ ಸಚಿವರು 12 ಕೋಟಿ ರುಪಾಯಿ ಮೊತ್ತದಲ್ಲಿ ಹೊಸದಾಗಿ ಜಟ್ಟಿ ನಿರ್ಮಾಣವಾಗಲಿದ್ದು, ಇದರಿಂದ ಗಂಗೊಳ್ಳಿ ಪ್ರದೇಶದ ಮೀನುಗಾರಿಕೆಗೆ ಹೊಸ ಕಾಯಕಲ್ಪ ಸಿಗಲಿದೆ ಎಂದು ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಜಟ್ಟಿ ಪ್ರದೇಶದಲ್ಲಿ ಹೈಮಾಸ್ಟ್ ದೀಪದ ಅಳವಡಿಕೆ, ತುರ್ತಾಗಿ ಹೂಳೆತ್ತುವುದು ಸೇರಿದಂತೆ ಹಲವಾರು ಬೇಡಿಕೆಗೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿ, ತಕ್ಷಣ ಸಮಸ್ಯೆ ಬಗೆಹರಿಸಲು ತಿಳಿಸಿದರು.
ಮರವಂತೆ ಬ್ರೇಕ್ ವಾಟರ್ ನಿರ್ಮಾಣವಾಗುತ್ತಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು, ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿಗೆ 85 ಕೋಟಿ ರೂ. ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮೀನುಗಾರರ ಪರವಾಗಿ ಕೃತಜ್ಞತೆ ತಿಳಿಸಿದರು. ಎರಡನೇ ಹಂತದ ಕಾಮಗಾರಿಯ ಯೋಜನಾ ವರದಿ ಸಿದ್ಧವಾಗಿ, ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆಗಳು ಮುಗಿದು, ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮೀನುಗಾರರಿಗೆ ಭರವಸೆ ನೀಡಿದರು.

ಕೊಡೇರಿ ಮೀನುಗಾರಿಕಾ ಜೆಟ್ಟಿ ಮತ್ತು ಉಪ್ಪುಂದ ನಾಡದೋಣಿ ತಂಗುದಾಣದ ಕಿರು ಜಟ್ಟಿಗಳ ವಿಸ್ತರಣೆ ಮಾಡಿ ಮೂಲಭೂತ ಸೌಕರ್ಯ, ವಿದ್ಯುತ್ ದೀಪ, ಕೊಂಡಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು. ಇದಕ್ಕೆ ಪೂರಕವಾಗಿ 4.5 ಕೋಟಿ ರುಪಾಯಿ ಪ್ರಸ್ತಾವನೆ ಹಣಕಾಸು ಇಲಾಖೆಯಲ್ಲಿ ಇದ್ದು, ವಾರಾಂತ್ಯದಲ್ಲಿ ಮಂಜೂರಾತಿ ಪಡೆದು ಮೀನುಗಾರರಿಗೆ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.
ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಭೇಟಿ ನೀಡಿದ ಸಚಿವರಿಗೆ, ಮೀನು ವ್ಯಾಪಾರಿ ಮಹಿಳೆಯರು ವೃತ್ತಿ ಮಾಡಲು ಜಾಗದ ಸಮಸ್ಯೆಗಳಿದ್ದು, ಪರಿಹಾರ ಕೊಡಿಸಬೇಕೆಂದು ವಿನಂತಿಸಿದರು.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm