ಬ್ರೇಕಿಂಗ್ ನ್ಯೂಸ್
10-09-20 05:45 pm Mysore Correspondent ಲೀಡರ್ಸ್ ರಿಪೋರ್ಟ್
ಮೈಸೂರು, ಸೆಪ್ಟೆಂಬರ್ 10: ಮೈಸೂರು ರಾಜಕಾರಣಿಗಳೇ ಡಗ್ಸ್ ಮಾಫಿಯಾದ ರೂವಾರಿಗಳಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಡ್ರಗ್ಸ್ ದೊರೆಯುತ್ತದೆ ಎಂದು ಆರೋಪ ಮಾಡಿದರು.
ರಾಜಕಾರಣಿಗಳೇ ಡ್ರಗ್ಸ್ ದಂಧೆ ನಡೆಸುತ್ತಿದ್ದು, ಅವರ ಮಕ್ಕಳೇ ಇದರಲ್ಲಿ ಶಾಮೀಲು ಆಗಿದ್ದಾರೆ. ಸಾವಿರಾರು ಕೋಟಿ ದಂಧೆ ಮಾಡುತ್ತಿದ್ದು, ಪ್ರಕರಣ ಹೊರ ಬಂದಾಗ ಜಾಮೀನು ಪಡೆದು ಹೊರಗೆ ಬರುತ್ತಾರೆ. ಬಳಿಕ ಇದೇ ರೀತಿ ಮತ್ತೇ ಡ್ರಗ್ಸ್ ದಂಧೆ ಮಾಡುತ್ತಾರೆ. ಈ ಡ್ರಗ್ಸ್ ಮಾಫಿಯಾ ಬಗ್ಗೆ ಪೊಲೀಸರಿಗೆ ಎಲ್ಲಾ ತಿಳಿದಿದ್ದರೂ, ರಾಜಕಾರಣಿಗಳೇ ಪೊಲೀಸರ ಕೈಕಟ್ಟಿ ಹಾಕಿದ್ದಾರೆ. ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಲವ್ ಜಿಹಾದ್ ಮಾದರಿಯಲ್ಲಿ ಡ್ರಗ್ಸ್ ಜಿಹಾದ್ ನಡೆಯುತ್ತಿದ್ದು, ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ ಆಗಿದ್ದು, ಪಂಜಾಬ್, ಗುಜರಾತ್, ಗೋವಾ ಮೂಲಕ ಭಾರತಕ್ಕೆ ಡ್ರಗ್ಸ್ ಪ್ರವೇಶಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನೇ ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೇ, ಇಂದು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದರು.
18-06-26 07:15 pm
HK News Staffer
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm