ಬ್ರೇಕಿಂಗ್ ನ್ಯೂಸ್
21-09-20 05:43 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಸೆಪ್ಟಂಬರ್ 21: ಕೇಂದ್ರ ಸರಕಾರ ಕೃಷಿಕರ ಸ್ಥಿತಿ ಸುಧಾರಣೆ ನಿಟ್ಟಿನಲ್ಲಿ ಜಾರಿಗೆ ತಂದಿರುವ ತಿದ್ದುಪಡಿ ಮಸೂದೆಯಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ವಿಪಕ್ಷಗಳು ಕೃಷಿಕರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡುತ್ತಿದೆ. ಕಾಯ್ದೆ ಬಗ್ಗೆ ರೈತರಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಮನೆ, ಮನೆಗೆ ಭೇಟಿ ನೀಡಿ ಅರ್ಥ ಮಾಡಿಸುವ ಪ್ರಯತ್ನ ಮಾಡುವುದಾಗಿ ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾರ್ಣಿಕ್, ನೂತನ ಮಸೂದೆ ಅನ್ವಯ ರೈತರಿಗೆ ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶವಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಕೇಂದ್ರಗಳಲ್ಲಿಯೇ ಮಾರಾಟ ಮಾಡಬೇಕಂತಿಲ್ಲ. ರಾಜ್ಯ ಅಥವಾ ಅಂತಾರಾಜ್ಯ ವ್ಯಾಪಾರಕ್ಕೆ ಉತ್ತೇಜನ ದೊರೆಯಲಿದೆ. ಆನ್ ಲೈನ್ ಮೂಲಕ ಖಾಸಗಿ ಕಂಪನಿಗಳ ಜೊತೆಗೂ ವ್ಯಾಪಾರ ಮಾಡುವುದಕ್ಕೆ ಅವಕಾಶ ಸಿಗಲಿದೆ ಎಂದು ಹೇಳಿದರು.

ಇನ್ನು ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ಸಿಗುವುದಿಲ್ಲ ಎನ್ನುವುದು ವಿಪಕ್ಷಗಳ ಆರೋಪ ಅಷ್ಟೇ. ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದೆಯೂ ಮುಂದುವರಿಯಲಿದೆ. ಅಲ್ಲದೆ, ಎಪಿಎಂಸಿ ವ್ಯವಸ್ಥೆಯೂ ಇದ್ದ ಹಾಗೇ ಮುಂದುವರಿಯುತ್ತದೆ. ಆದರೆ ರೈತರ ಉತ್ಪನ್ನಗಳ ಮಾರಾಟಕ್ಕೆ ಸ್ಪರ್ಧೆಯ ಅವಕಾಶ ಸಿಗುವುದರಿಂದ ಉತ್ತಮ ದರ ಸಿಗಲಿದೆ. ಇದರಿಂದ ರೈತನ ಆದಾಯವೂ ಸಹಜವಾಗಿ ಹೆಚ್ಚಲಿದೆ. ಇದರಿಂದ ಕೃಷಿ ಬೆಳೆಗಳ ರಫ್ತಿಗೂ ಉತ್ತೇಜನ ಸಿಗಲಿದೆ ಎಂದರು ಬೆಂಗಳೂರಿನಲ್ಲಿ ಕಾಯ್ದೆ ಬಗ್ಗೆ ಗೊತ್ತಿಲ್ಲದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯ ಹಿಂದೆ ವಿಪಕ್ಷಗಳ ಕೈವಾಡ ಇದೆ ಎಂದು ಪ್ರಶ್ನೆಯೊಂದಕ್ಕೆ ಕಾರ್ಣಿಕ್ ಉತ್ತರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಉಪಾಧ್ಯಕ್ಷೆ ಕಸ್ತೂರಿ ಪಂಜ ಉಪಸ್ಥಿತರಿದ್ದರು.
04-05-26 04:14 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm