ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am