ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm