ಬ್ರೇಕಿಂಗ್ ನ್ಯೂಸ್
24-05-22 09:06 pm Mangalore Correspondent ಕರಾವಳಿ
ಮಂಗಳೂರು, ಮೇ 24: ಗುರುಪುರ ಬಳಿಯ ಮಳಲಿ ಪೇಟೆಯ ಜುಮ್ಮಾ ಮಸೀದಿಯಲ್ಲಿ ದೇವಸ್ಥಾನದ ಮಾದರಿ ರಚನೆ ಕಂಡುಬಂದ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟಿರುವುದರಿಂದ ಪರಿಸರದಲ್ಲಿ ಶಾಂತಿ ಕದಡಬಾರದು ಎನ್ನುವ ದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಮಳಲಿ ದರ್ಗಾದ ಸುತ್ತಲಿನ 500 ಮೀಟರ್ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ತೆಂಕುಳಿಪಾಡಿ ಗ್ರಾಮದ ಜೋಡುತಡಮೆ ಎಂಬಲ್ಲಿನ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದು ಸಂಘಟನೆಗಳ ವತಿಯಿಂದ ತಾಂಬೂಲ ಪ್ರಶ್ನೆ ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮ ಮೇ 25ರ ಬೆಳಗ್ಗೆ 8ರಿಂದ ಸಂಜೆಯ ವರೆಗೆ ನಡೆಯುವುದರಿಂದ ಈ ಸಂದರ್ಭದಲ್ಲಿ ಮಸೀದಿ ಕುರಿತು ಚರ್ಚೆಗಳು ಏರ್ಪಡುವುದರಿಂದ ಶಾಂತಿ ಸೌಹಾರ್ದ ಕೆಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಮಳಲಿ ಪೇಟೆಯ ಜುಮ್ಮಾ ಮಸೀದಿಯ ಸುತ್ತ ಮುತ್ತಲಿನ 500 ಮೀಟರ್ ಪ್ರದೇಶದಲ್ಲಿ (ಕಾಚಿಲಕೋಡಿಯಿಂದ ಮಳಲಿ ಕಡೆಗೆ ಬರುವ ರಸ್ತೆ, ಗಂಜಿಮಠದಿಂದ ಮಳಲಿ ಮಸೀದಿ ಕಡೆಗೆ ಬರುವ ರಸ್ತೆ, ಹಾಗೂ ಕೈಕಂಬ ಕಡೆಯಿಂದ ಜೋಡುತಡಮೆ ವರೆಗಿನ ರಸ್ತೆ) ಮೇ 24ರ ಸಂಜೆ 8 ಗಂಟೆಯಿಂದ ಮೇ 26ರ ಬೆಳಗ್ಗೆ 8 ಗಂಟೆ ವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.




ಸೆಕ್ಷನ್ ಇರುವುದರಿಂದ ಈ ಭಾಗದಲ್ಲಿ ಯಾವುದೇ ರೀತಿಯಲ್ಲೂ ಘೋಷಣೆ ಕೂಗುವುದು, ಗುಂಪು ಸೇರುವುದು, ಪಟಾಕಿ ಸಿಡಿಸುವುದು, ಶಸ್ತ್ರ, ದೊಣ್ಣೆಗಳನ್ನು ಒಯ್ಯುವುದು, ಸ್ಫೋಟಕಗಳನ್ನು ಒಯ್ಯುವುದು, ಪ್ರತಿಭಟನೆ, ಧರಣಿ, ಭಿತ್ತಿಪತ್ರ ಪ್ರದರ್ಶಿಸುವುದು ಕಾನೂನು ರೀತ್ಯ ಅಪರಾಧವಾಗಿರುತ್ತದೆ ಎಂದು ಪೊಲೀಸ್ ಕಮಿಷನರ್ ಈ ಕುರಿತ ಆದೇಶದಲ್ಲಿ ತಿಳಿಸಿದ್ದಾರೆ. ಮಸೀದಿ ನವೀಕರಣ ಸಂದರ್ಭ ಒಳಭಾಗದಲ್ಲಿ ದೇವಸ್ಥಾನದ ಚಿತ್ರಣ ಕಂಡುಬಂದಿದ್ದರಿಂದ ಸುದ್ದಿ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಮಂಗಳೂರಿನಲ್ಲಿಯೂ ಮಸೀದಿಯೊಳಗೆ ದೇವಸ್ಥಾನ, ಮತ್ತೊಂದು ಗ್ಯಾನವಾಪಿ ಎನ್ನುವ ರೀತಿ ಬಿಂಬಿತವಾಗಿದೆ. ಹೀಗಾಗಿ ಮಂಗಳೂರು ಕೋಮು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಪೊಲೀಸರು ಸೆಕ್ಷನ್ ಜಾರಿಗೊಳಿಸಿ ಶಾಂತಿ ಕಾಪಾಡಲು ಮುಂದಾಗಿದ್ದಾರೆ.
Malali Mosque Temple row, 144 section ordered in Mangalore Bajpe Police Station limits on may 25th as VHP holds "Thamboola Prashe".
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am