ಬ್ರೇಕಿಂಗ್ ನ್ಯೂಸ್
24-05-22 09:06 pm Mangalore Correspondent ಕರಾವಳಿ
ಮಂಗಳೂರು, ಮೇ 24: ಗುರುಪುರ ಬಳಿಯ ಮಳಲಿ ಪೇಟೆಯ ಜುಮ್ಮಾ ಮಸೀದಿಯಲ್ಲಿ ದೇವಸ್ಥಾನದ ಮಾದರಿ ರಚನೆ ಕಂಡುಬಂದ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟಿರುವುದರಿಂದ ಪರಿಸರದಲ್ಲಿ ಶಾಂತಿ ಕದಡಬಾರದು ಎನ್ನುವ ದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಮಳಲಿ ದರ್ಗಾದ ಸುತ್ತಲಿನ 500 ಮೀಟರ್ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ತೆಂಕುಳಿಪಾಡಿ ಗ್ರಾಮದ ಜೋಡುತಡಮೆ ಎಂಬಲ್ಲಿನ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದು ಸಂಘಟನೆಗಳ ವತಿಯಿಂದ ತಾಂಬೂಲ ಪ್ರಶ್ನೆ ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮ ಮೇ 25ರ ಬೆಳಗ್ಗೆ 8ರಿಂದ ಸಂಜೆಯ ವರೆಗೆ ನಡೆಯುವುದರಿಂದ ಈ ಸಂದರ್ಭದಲ್ಲಿ ಮಸೀದಿ ಕುರಿತು ಚರ್ಚೆಗಳು ಏರ್ಪಡುವುದರಿಂದ ಶಾಂತಿ ಸೌಹಾರ್ದ ಕೆಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಮಳಲಿ ಪೇಟೆಯ ಜುಮ್ಮಾ ಮಸೀದಿಯ ಸುತ್ತ ಮುತ್ತಲಿನ 500 ಮೀಟರ್ ಪ್ರದೇಶದಲ್ಲಿ (ಕಾಚಿಲಕೋಡಿಯಿಂದ ಮಳಲಿ ಕಡೆಗೆ ಬರುವ ರಸ್ತೆ, ಗಂಜಿಮಠದಿಂದ ಮಳಲಿ ಮಸೀದಿ ಕಡೆಗೆ ಬರುವ ರಸ್ತೆ, ಹಾಗೂ ಕೈಕಂಬ ಕಡೆಯಿಂದ ಜೋಡುತಡಮೆ ವರೆಗಿನ ರಸ್ತೆ) ಮೇ 24ರ ಸಂಜೆ 8 ಗಂಟೆಯಿಂದ ಮೇ 26ರ ಬೆಳಗ್ಗೆ 8 ಗಂಟೆ ವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.




ಸೆಕ್ಷನ್ ಇರುವುದರಿಂದ ಈ ಭಾಗದಲ್ಲಿ ಯಾವುದೇ ರೀತಿಯಲ್ಲೂ ಘೋಷಣೆ ಕೂಗುವುದು, ಗುಂಪು ಸೇರುವುದು, ಪಟಾಕಿ ಸಿಡಿಸುವುದು, ಶಸ್ತ್ರ, ದೊಣ್ಣೆಗಳನ್ನು ಒಯ್ಯುವುದು, ಸ್ಫೋಟಕಗಳನ್ನು ಒಯ್ಯುವುದು, ಪ್ರತಿಭಟನೆ, ಧರಣಿ, ಭಿತ್ತಿಪತ್ರ ಪ್ರದರ್ಶಿಸುವುದು ಕಾನೂನು ರೀತ್ಯ ಅಪರಾಧವಾಗಿರುತ್ತದೆ ಎಂದು ಪೊಲೀಸ್ ಕಮಿಷನರ್ ಈ ಕುರಿತ ಆದೇಶದಲ್ಲಿ ತಿಳಿಸಿದ್ದಾರೆ. ಮಸೀದಿ ನವೀಕರಣ ಸಂದರ್ಭ ಒಳಭಾಗದಲ್ಲಿ ದೇವಸ್ಥಾನದ ಚಿತ್ರಣ ಕಂಡುಬಂದಿದ್ದರಿಂದ ಸುದ್ದಿ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಮಂಗಳೂರಿನಲ್ಲಿಯೂ ಮಸೀದಿಯೊಳಗೆ ದೇವಸ್ಥಾನ, ಮತ್ತೊಂದು ಗ್ಯಾನವಾಪಿ ಎನ್ನುವ ರೀತಿ ಬಿಂಬಿತವಾಗಿದೆ. ಹೀಗಾಗಿ ಮಂಗಳೂರು ಕೋಮು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಪೊಲೀಸರು ಸೆಕ್ಷನ್ ಜಾರಿಗೊಳಿಸಿ ಶಾಂತಿ ಕಾಪಾಡಲು ಮುಂದಾಗಿದ್ದಾರೆ.
Malali Mosque Temple row, 144 section ordered in Mangalore Bajpe Police Station limits on may 25th as VHP holds "Thamboola Prashe".
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm