ಬ್ರೇಕಿಂಗ್ ನ್ಯೂಸ್
26-05-22 10:01 pm Mangalore Correspondent ಕರಾವಳಿ
ಮಂಗಳೂರು, ಮೇ 26: ಕ್ರಿಕೆಟ್ ಆಟವು ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಾಗಿದ್ದು, ಆಟಗಾರರು ನಿರಂತರ ಪರಿಶ್ರಮದ ಮೂಲಕ ಇದರಲ್ಲಿ ಉನ್ನತ ಮಟ್ಟಕ್ಕೆ ಏರಲು ಸಾಧ್ಯ. ಈ ನಿಟ್ಟಿನಲ್ಲಿ ಬೆಸೆಂಟ್ ಪ್ರೀಮಿಯರ್ ಲೀಗ್ (ಬಿ.ಪಿ.ಎಲ್) ಕ್ರಿಕೆಟ್ ಆಟಗಾರರನ್ನು ಸೃಷ್ಟಿಸುವ ಉನ್ನತ ಕಾರ್ಯ ಮಾಡುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್ ಹೇಳಿದರು.
ಬೆಸೆಂಟ್ ಸಂಧ್ಯಾ ಕಾಲೇಜು ಹಳೆ ವಿದ್ಯಾರ್ಥಿ ಸಂಘವು ಆಯೋಜಿಸಿದ ಏಳನೇ ವರ್ಷದ ಬಿ.ಪಿ.ಎಲ್ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿ.ಪಿ.ಎಲ್ ಪಂದ್ಯಾವಳಿಯು ನಗರದ ಪದುವಾ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ಜರಗಿತು. ಪಂದ್ಯಾವಳಿಯನ್ನು ಕಾಲೇಜಿನ ಹಳೆ ವಿದ್ಯಾರ್ಥಿಯೂ ಮಹಾನಗ ಪಾಲಿಕೆಯ ಕಾರ್ಪೋರೇಟರ್ ಆಗಿರುವ ಲೀಲಾವತಿ ಪ್ರಕಾಶ್ ಹಾಗೂ ಮನೋಜ್ ಕುಮಾರ್ ಕೋಡಿಕಲ್ ಉದ್ಘಾಟಿಸಿ ಶುಭ ಹಾರೈಸಿದರು.



ಬೆಸೆಂಟ್ ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ.ಲಕ್ಷೀನಾರಾಯಣ ಭಟ್, ಸಂಘದ ಮಾಜಿ ಸಲಹೆಗಾರರಾದ ಗಣಪತಿ ಭಟ್ ಎಂ, ಡಾ. ವಾಸಪ್ಪಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಆರ್, ಕ್ರೀಡಾ ಕಾರ್ಯದರ್ಶಿ ಪ್ರಣವ್ ಗಣೇಶ, ಆಡಳಿತ ಮಂಡಳಿ ಸದಸ್ಯ ಸತೀಶ್ ಕುಮಾರ್ ಭಟ್ ಭಾಗವಹಿಸಿದ್ದರು.


ಪಂದ್ಯಾವಳಿಯಲ್ಲಿ ಐದು ತಂಡಗಳಾದ ಟೀಮ್ ವಿಕ್ಟರಿ, ಟೀಮ್ ಬ್ಲೂ ಸ್ಟಿಕ್, ಟೀಮ್ ಡೋಮಿನೇಟರ್ಸ್, ಟೀಮ್ ಮಾಂಕ್ ಮತ್ತು ಟೀಮ್ ಮಾನ್ಸಟರ್ ಕ್ರೀಡಾಕೂಟಾದಲ್ಲಿ ಭಾಗವಹಿಸಿದ್ದವು. ವಿಜೇತ ತಂಡಗಳಿಗೆ ಹಾಗೂ ಸರಣಿ ಶ್ರೇಷ್ಠ ಕ್ರೀಡಾ ಪಟುಗಳಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿತ್ತು. ದಿನವಿಡೀ ನಡೆದ ಲೀಗ್ ಸ್ಪರ್ಧೆಯಲ್ಲಿ ಶಮೀತ್ ತಲಪಾಡಿ ಮಾಲಕತ್ವದ ಡೋಮಿನೇಟರ್ಸ್ ತಂಡವು ಜಯಶಾಲಿಯಾಗಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಕೌಶಿಕ್ ಕದ್ರಿ ಮತ್ತು ಪ್ರತೀಕ್ ಶೆಟ್ಟಿ ಮಾಲಕತ್ವದ ಮಾನ್ಸಟರ್ ತಂಡವು ರನ್ನರಪ್ ಪ್ರಶಸ್ತಿ ಪಡೆಯಿತು.


ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಹಳೆ ವಿದ್ಯಾರ್ಥಿ ಸತೀಶ ಮರವೂರು ಹಾಗೂ ಸಾತ್ವಿಕ್ ವಿಜೇತರಿಗೆ ಬಹುಮಾನ ವಿತರಿಸಿದರು. ಮದುರಾಜ್ ಅವರು ಸರಣಿ ಶ್ರೇಷ್ಠ, ಆಕ್ಷಿತ್ ಶೆಟ್ಟಿ ಶ್ರೇಷ್ಠ ದಾಂಡಿಗನಾಗಿ ಹಾಗೂ ಅಂಬಾತನಯ ಶ್ರೇಷ್ಠ ಎಸೆತಗಾರನಾಗಿ ಪ್ರಶಸ್ತಿ ಪಡೆದರು.
Mangalore Besant evening college alumni association organises BBP cricket Match, Dominate team bags victory.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm