ಬ್ರೇಕಿಂಗ್ ನ್ಯೂಸ್
28-05-22 11:21 am Mangalore Correspondent ಕರಾವಳಿ
ಮಂಗಳೂರು, ಮೇ 28 : ಮಳಲಿ ಮಸೀದಿಯ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟು ಜ್ಯೋತಿಷ್ಯ ಕೇಳಿದ ಹಿಂದು ಸಂಘಟನೆಗಳಿಗೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬಹಿರಂಗ ಸವಾಲು ಹಾಕಿದ್ದಾರೆ. ನಿಮಗೆ ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳು ತೆಗೆದು ನೋಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಣ್ಣೂರಿನಲ್ಲಿ ಎಸ್ಡಿಪಿಐ ವತಿಯಿಂದ ನಡೆದ ಸಮಾವೇಶದಲ್ಲಿ ಮಳಲಿ ಮಸೀದಿ ವಿಚಾರದಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ನೀವು ಮಳಲಿ ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಡುವವರು ಮೊದಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಾಂಬ್ ಇಟ್ಟು ಒಡೆದು ಹಾಕಿದ ಸುಕ್ಕಲಮ್ಮ ದೇವಸ್ಥಾನದ ಬಗ್ಗೆ ತಾಂಬೂಲ ಪ್ರಶ್ನೆ ಇಡಿ. 200 ವರ್ಷಗಳಿಗಿಂತಲೂ ಹಳೆಯದಾದ ಸುಕ್ಕಲಮ್ಮ ದೇವಸ್ಥಾನವನ್ನು ಗಣಿಗಾರಿಕೆ ನೆಪದಲ್ಲಿ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಒಡೆದು ಹಾಕಿದ್ದಾರೆ. ಅದನ್ನು ಒಡೆದು ಹಾಕಿದಾಗ ಹಿಂದು ಸಂಘಟನೆಗಳಿಗೆ ಯಾಕೆ ಕಣ್ಣಿಗೆ ಕಾಣಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.




ನೀವು ತಾಂಬೂಲ ಅಥವಾ ಇನ್ಯಾವುದನ್ನೇ ಮಾಡಿ. ನೀವು ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳನ್ನು ಎತ್ತಿಬಿಡಿ. ಆಮೇಲೆ ನಮ್ಮ ತಾಕತ್ತು ನೋಡಿ ಎಂದು ಸವಾಲು ಹಾಕಿದ್ದಾರೆ. ಸಮಾವೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದರು. ಅಬ್ದುಲ್ ಮಜೀದ್ ಭಾಷಣದ ವಿಡಿಯೋ ಈಗ ಭಾರೀ ವೈರಲ್ ಆಗಿದ್ದು ಕೋಮು ಸಾಮರಸ್ಯ ಕದಡಲು ಪ್ರೇರಣೆಯಾಗುತ್ತಿದೆ.
Mangalore SDPI President Abdul Majeed challenges Vhp, says they can't even touch little soil of Malali mosque. He alleged that Janardhana Reddy has destroyed a temple in Bellary by blasting it he said why there can't be a thambula prashne.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm