ಬ್ರೇಕಿಂಗ್ ನ್ಯೂಸ್
29-05-22 03:11 pm Mangalore Correspondent ಕರಾವಳಿ
ಮಂಗಳೂರು, ಮೇ 29: ಅಡ್ಯಾರ್ ಕಣ್ಣೂರಿನಲ್ಲಿ ನಡೆದ ಎಸ್ಡಿಪಿಐ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಕಾರ್ಯಕರ್ತರು ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿರುವ ಪ್ರಕರಣದ ಬಗ್ಗೆ ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೈಕ್, ಸ್ಕೂಟರ್ ಮತ್ತು ಕಾರಿನಲ್ಲಿ ತೆರಳುತ್ತಿದ್ದ ಯುವಕರು ಪೊಲೀಸರ ವಿರುದ್ಧ ಅವಾಚ್ಯವಾಗಿ ನಿಂದಿಸುತ್ತಾ ಘೋಷಣೆ ಹಾಕಿದ್ದಲ್ಲದೆ, ಅದರ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಈ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಎಎಸ್ಐ ಚಂದ್ರಶೇಖರ ಬಿ. ದೂರು ನೀಡಿದ್ದು, ಆರು ಮಂದಿಯ ವಿರುದ್ಧ ಸೆಕ್ಷನ್ 143, 353, 504 ಮತ್ತು 149 ಅಡಿ ಪ್ರಕರಣ ದಾಖಲಿಸಲಾಗಿದೆ.
ಎಸ್ಡಿಪಿಐ ವತಿಯಿಂದ ಆಯೋಜಿಸಿದ್ದ ಜನಾಧಿಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೊಡಕ್ಕಲ್ ಕಣ್ಣೂರು ಚೆಕ್ ಪೋಸ್ಟ್ ನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಡ್ ಕಾನ್ಸ್ ಟೇಬಲ್ ಗಳಾದ ಪುಟ್ಟರಾಮ, ರವಿಕುಮಾರ್, ಪೊಲೀಸ್ ಪೇದೆಗಳಾದ ಜಗದೀಶ್ ಮೆಟ್ಟಗುಡ್ಡ ಮತ್ತು ಸಂಗನ ಗೌಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ, ಪಡೀಲ್ ಕಡೆಯಿಂದ ಕೆಟಿಎಂ ಬೈಕ್, ಸ್ಕೂಟರ್ ಹಾಗೂ ಕಾರಿನಲ್ಲಿ ಯುವಕರು ಆಗಮಿಸಿದ್ದು ರಸ್ತೆಯಲ್ಲಿ ಅಡ್ಡಲಾಗಿ ನಿಂತು ಕರ್ತವ್ಯದಲ್ಲಿದ್ದ ಸಿಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.
ಬ್ಯಾರಿ ಭಾಷೆಯಲ್ಲಿ ಪೋಡೆ ಪುಲ್ಲೆ ಪೋಲೀಸೆ, ನಾಯಿಂಡೆ ಮೋನೆ ಪೊಲೀಸೆ ಎಂದು ಘೋಷಣೆ ಕೂಗುತ್ತಾ ತಿ ವೇಗವಾಗಿ ವಾಹನಗಳನ್ನು ಚಲಾಯಿಸಿ ಕರ್ತವ್ಯದಲ್ಲಿದ್ದ ಪೇದೆ ಸಂಗನಗೌಡ ಮೈಮೇಲೆ ಹಾಯಿಸುವಂತೆ ಬಂದಿದ್ದು ಈ ವೇಳೆ ಸಂಗನಗೌಡ ತಪ್ಪಿಸಿಕೊಂಡಿದ್ದಾರೆ. ಕರ್ತವ್ಯ ನಿರತ ಪೊಲೀಸರಿಗೆ ಅಡ್ಡಿಪಡಿಸಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿದ್ದ ಬಗ್ಗೆ ದೂರು ದಾಖಲಿಸಲಾಗಿದೆ. ಆರು ಮಂದಿಯನ್ನು ಅಪರಿಚಿತರು ಎಂದು ತೋರಿಸಲಾಗಿದ್ದು, ವಿಡಿಯೋ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mangalore Sdpi members abusing police video during a SDPI program at Kannur goes viral, Police have booked six members of SDPI under section 143, 353 and 504.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm