ಬ್ರೇಕಿಂಗ್ ನ್ಯೂಸ್
29-05-22 03:11 pm Mangalore Correspondent ಕರಾವಳಿ
ಮಂಗಳೂರು, ಮೇ 29: ಅಡ್ಯಾರ್ ಕಣ್ಣೂರಿನಲ್ಲಿ ನಡೆದ ಎಸ್ಡಿಪಿಐ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಕಾರ್ಯಕರ್ತರು ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿರುವ ಪ್ರಕರಣದ ಬಗ್ಗೆ ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೈಕ್, ಸ್ಕೂಟರ್ ಮತ್ತು ಕಾರಿನಲ್ಲಿ ತೆರಳುತ್ತಿದ್ದ ಯುವಕರು ಪೊಲೀಸರ ವಿರುದ್ಧ ಅವಾಚ್ಯವಾಗಿ ನಿಂದಿಸುತ್ತಾ ಘೋಷಣೆ ಹಾಕಿದ್ದಲ್ಲದೆ, ಅದರ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಈ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಎಎಸ್ಐ ಚಂದ್ರಶೇಖರ ಬಿ. ದೂರು ನೀಡಿದ್ದು, ಆರು ಮಂದಿಯ ವಿರುದ್ಧ ಸೆಕ್ಷನ್ 143, 353, 504 ಮತ್ತು 149 ಅಡಿ ಪ್ರಕರಣ ದಾಖಲಿಸಲಾಗಿದೆ.
ಎಸ್ಡಿಪಿಐ ವತಿಯಿಂದ ಆಯೋಜಿಸಿದ್ದ ಜನಾಧಿಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೊಡಕ್ಕಲ್ ಕಣ್ಣೂರು ಚೆಕ್ ಪೋಸ್ಟ್ ನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಡ್ ಕಾನ್ಸ್ ಟೇಬಲ್ ಗಳಾದ ಪುಟ್ಟರಾಮ, ರವಿಕುಮಾರ್, ಪೊಲೀಸ್ ಪೇದೆಗಳಾದ ಜಗದೀಶ್ ಮೆಟ್ಟಗುಡ್ಡ ಮತ್ತು ಸಂಗನ ಗೌಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ, ಪಡೀಲ್ ಕಡೆಯಿಂದ ಕೆಟಿಎಂ ಬೈಕ್, ಸ್ಕೂಟರ್ ಹಾಗೂ ಕಾರಿನಲ್ಲಿ ಯುವಕರು ಆಗಮಿಸಿದ್ದು ರಸ್ತೆಯಲ್ಲಿ ಅಡ್ಡಲಾಗಿ ನಿಂತು ಕರ್ತವ್ಯದಲ್ಲಿದ್ದ ಸಿಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.
ಬ್ಯಾರಿ ಭಾಷೆಯಲ್ಲಿ ಪೋಡೆ ಪುಲ್ಲೆ ಪೋಲೀಸೆ, ನಾಯಿಂಡೆ ಮೋನೆ ಪೊಲೀಸೆ ಎಂದು ಘೋಷಣೆ ಕೂಗುತ್ತಾ ತಿ ವೇಗವಾಗಿ ವಾಹನಗಳನ್ನು ಚಲಾಯಿಸಿ ಕರ್ತವ್ಯದಲ್ಲಿದ್ದ ಪೇದೆ ಸಂಗನಗೌಡ ಮೈಮೇಲೆ ಹಾಯಿಸುವಂತೆ ಬಂದಿದ್ದು ಈ ವೇಳೆ ಸಂಗನಗೌಡ ತಪ್ಪಿಸಿಕೊಂಡಿದ್ದಾರೆ. ಕರ್ತವ್ಯ ನಿರತ ಪೊಲೀಸರಿಗೆ ಅಡ್ಡಿಪಡಿಸಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿದ್ದ ಬಗ್ಗೆ ದೂರು ದಾಖಲಿಸಲಾಗಿದೆ. ಆರು ಮಂದಿಯನ್ನು ಅಪರಿಚಿತರು ಎಂದು ತೋರಿಸಲಾಗಿದ್ದು, ವಿಡಿಯೋ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mangalore Sdpi members abusing police video during a SDPI program at Kannur goes viral, Police have booked six members of SDPI under section 143, 353 and 504.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am