ಬ್ರೇಕಿಂಗ್ ನ್ಯೂಸ್
31-05-22 10:27 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಉಳ್ಳಾಲದ ಹೆಬ್ಬಾಗಿಲು ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ನಲ್ಲಿ 110 ಅಡಿ ಎತ್ತರದ ಧ್ವಜಸ್ತಂಭ ನಿರ್ಮಾಣವಾಗಲಿದ್ದು, ಉಳ್ಳಾಲವನ್ನ ಪಾಕಿಸ್ತಾನ ಎಂದು ಮೂದಲಿಸಿದವರಿಗೆ ಉಳ್ಳಾಲದವರು ದೇಶಭಕ್ತರೆಂಬ ಸ್ಪಷ್ಟ ಸಂದೇಶ ರವಾನಿಸಲಾಗುವುದು ಎಂದು ವಿದಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಟಾಂಗ್ ನೀಡಿದ್ದಾರೆ.
ರಾಜ್ಯ ಸರಕಾರದ ವಿಶೇಷ ಅನುದಾನದಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ನಲ್ಲಿ ನಿರ್ಮಾಣಗೊಳ್ಳಲಿರುವ 110 ಅಡಿ ಎತ್ತರದ ಧ್ವಜ ಸ್ತಂಭಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ತಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಳಗಾವಿ ಸಹಿತ ಇತರ ಜಿಲ್ಲೆಗಳಿಗೆ ಸಂಚರಿಸುವಾಗ ಅಲ್ಲಿನ ಎತ್ತರದ ಧ್ವಜ ಸ್ತಂಭಗಳನ್ನ ಕಂಡು ಮಂಗಳೂರು ಕ್ಷೇತ್ರದಲ್ಲೂ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಯೋಜನೆ ಹಾಕಿದ್ದೆ. ಇದೀಗ ಸರಕಾರದಿಂದ ಧ್ವಜ ಸ್ತಂಭ ನಿರ್ಮಿಸಲು ಅನುದಾನ ಬಿಡುಗಡೆಯಾಗಿದ್ದು ಓವರ್ ಬ್ರಿಡ್ಜ್ ಜಂಕ್ಷನಲ್ಲಿ ಶೀಘ್ರವೇ 110 ಅಡಿ ಎತ್ತರದ ಸ್ತಂಭವು ತಲೆ ಎತ್ತಲಿದೆ ಎಂದರು.


ಇದಲ್ಲದೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಕೊಣಾಜೆ ತೆರಳುವ ರಸ್ತೆಯ ಅಂಚಿನ ಶಾಸಕರ ಕಚೇರಿ ಬಳಿಯೂ ರಸ್ತೆ ಅಗಲೀಕರಣ ಕಾಮಗಾರಿಯ ನಂತರ 110 ಅಡಿ ಎತ್ತರದ ಧ್ವಜ ಸ್ತಂಭ ನಿರ್ಮಾಣವಾಗಲಿದೆ ಎಂದರು.

ಓವರ್ ಬ್ರಿಡ್ಜ್ ಜಂಕ್ಷನಲ್ಲಿ ಧ್ವಜ ಸ್ತಂಭ ನಿರ್ಮಿಸಲು ಮೊದಲಿಗೆ ರಸ್ತೆ ಇಕ್ಕಟ್ಟಿನ ಸಮಸ್ಯೆ ಎದುರಾಗಿತ್ತು. ಇದೀಗ ಪಿಡಬ್ಲ್ಯೂಡಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಒಪ್ಪಿಗೆ ಪಡೆದು ಕಾಮಗಾರಿಯನ್ನ ಕೈಗೆತ್ತಿರುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಬಿಟ್ಟರೆ ಉಳ್ಳಾಲದಲ್ಲಿ ಅತೀ ಎತ್ತರದ ಧ್ವಜ ಸ್ತಂಭ ನಿರ್ಮಾಣಗೊಂಡು ಪ್ರವಾಸಿಗರ ಆಕರ್ಷಣೆ ಕೇಂದ್ರವಾಗುವುದು. ಇದಲ್ಲದೆ ಉಳ್ಳಾಲವನ್ನ ಹಾಗೆ, ಹೀಗೆ ಎಂದವರಿಗೂ ಉಳ್ಳಾಲದವರು ಅಪ್ರತಿಮ ದೇಶ ಭಕ್ತರೆಂಬ ಸ್ಪಷ್ಟ ಸಂದೇಶ ರವಾನೆಯಾಗುತ್ತದೆ ಎಂದು ಖಾದರ್ ಹೇಳಿದರು.
Mangalore 110 feet flag pole to get ready at Ullal, Khader slams those who called ullal Mini Pakisthan during the event.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm