ಬ್ರೇಕಿಂಗ್ ನ್ಯೂಸ್
01-06-22 10:40 pm Mangalore Correspondent ಕರಾವಳಿ
ಕಾರ್ಕಳ, ಜೂನ್ 1 : ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಗ್ರೀನ್ ಪವರ್ ಆಧರಿತ ಕೈಗಾರಿಕಾ ಹಬ್ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
108 ಕೋಟಿ ರೂ. ವೆಚ್ಚದಲ್ಲಿ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಏತ ನೀರಾವರಿ ಯೋಜನೆಯನ್ನು ಬುಧವಾರ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು.
ಮಂಗಳೂರಿನಲ್ಲಿ ವಿದೇಶಕ್ಕೆ ರಫ್ತು ಮಾಡುವ ಗುಣಮಟ್ಟದ ಪೀಠೋಪಕರಣಗಳ ನಿರ್ಮಾಣಕ್ಕೆ ಫರ್ನಿಚರ್ ಕ್ಲಸ್ಟರ್ ಮಾಡಲಾಗುವುದು. ಕಾರ್ಕಳದಲ್ಲಿ ಶಿಲ್ಪ ಕಲೆ, ಮರದ ಕೆತ್ತನೆ ಕ್ಲಸ್ಟರಿಗೆ ಜಾಗ ನೀಡಿದರೆ ತೆರಿಗೆ ವಿನಾಯಿತಿ ನೀಡಲಾಗುವುದು. ಮಂಗಳೂರು, ಕಾರವಾರ ಬಂದರು ವಿಸ್ತರಣೆ ಜತೆಗೆ ಎಂಟು ಹೊಸ ಬಂದರು ನಿರ್ಮಾಣ ಕಾರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಬೀಚ್ ಟೂರಿಸಂ, ಧಾರ್ಮಿಕ ಟೂರಿಸಂಗೆ ಒತ್ತು ನೀಡಲಿದ್ದು, ಕಾರ್ಕಳದಲ್ಲಿ ಜವಳಿ ಪಾರ್ಕ್ ಶೀಘ್ರ ಆರಂಭವಾಗಲಿದೆ. ರೈತ ವಿದ್ಯಾ ನಿಧಿಯಡಿ 8 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗಿದೆ. ಎಣ್ಣೆಹೊಳೆ ಏತ ನೀರಾವರಿ ಹೆಚ್ಚುವರಿ ಯೋಜನೆಗೆ 43 ಕೋಟಿ ರೂ. ಮಂಜೂರು ಮಾಡಲಾಗುವುದು ಎಂದರು.

ಸುನಿಲ್ ಎಂದರೆ ಶಕ್ತಿ, ಇಂಧನ
ರಾಜ್ಯದಲ್ಲಿ ಈಗ ಎಲ್ಲೆಲ್ಲೂ ಸುನಿಲ್ ಹೆಸರು ಕೇಳುತ್ತಿದ್ದು, ಸುನಿಲ್ ಎಂದರೆ ಸ್ಛೂರ್ತಿ, ಶಕ್ತಿ, ಇಂಧನ. ಕ್ಷೇತ್ರಗಳ ಸಮಗ್ರ ಅಭಿವೃದ್ಧಿ ಮೂಲಕ ಕಟ್ಟಕಡೆಯ ಬಡವರಿಗೂ ಮೂಲಭೂತ ಸೌಲಭ್ಯ ಒದಗಿಸಿದ ಹೆಮ್ಮೆ ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ 9,500 ಬಡವರ ಮನೆಗಳಿಗೆ 12 ಕೋಟಿ ರೂ. ವೆಚ್ಚದಲ್ಲಿ ಸಚಿವ ಸುನಿಲ್ ಬೆಳಕು ಒದಗಿಸಿದ್ದಾರೆ ಎಂದು ರಾಜ್ಯ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶ್ಲಾಘಿಸಿದರು.

ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಎಣ್ಣೆಹೊಳೆ ಏತ ನೀರಾವರಿ ಯೋಜನೆಯಡಿ 9 ಹಳ್ಳಿಗಳ 4,500 ಎಕರೆಗೆ ನೀರಾವರಿ, 2 ಕೆರೆ, 48 ಚೆಕ್ ಡ್ಯಾಂ ತುಂಬಲಿದೆ ಎಂದು ಹೇಳಿದರು.
ರಾಜ್ಯ ಸರಕಾರ 6.5 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಇದೇ ಸಂದರ್ಭದಲ್ಲಿ 10 ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಕ್ಕುಪತ್ರ ವಿತರಿಸಿದರು.
An international level furniture cluster that would provide ample employment opportunities for the youth will come up in Mangaluru. Work on the project will start this year itself,” said the Chief Minister of Karnataka, Basavaraj Bommai.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am