ಬ್ರೇಕಿಂಗ್ ನ್ಯೂಸ್
01-06-22 10:43 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ಪೊಲೀಸರಿಗೆ ನಿಂದನೆ ವಿಡಿಯೋ ಪ್ರಕರಣದಲ್ಲಿ ಕೆಲವೇ ಜನರು ಮಾಡಿದ ತಪ್ಪಿಗೆ ಹಲವು ಅಮಾಯಕರನ್ನು ಬಂಧಿಸಲಾಗುತ್ತಿದೆ. ಸಮಾವೇಶದಲ್ಲಿ ಭಾಗವಹಿಸದೇ ಇರುವವರ ಬಂಧನವೂ ಆಗಿದೆ. ಇದರಲ್ಲಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರೂ ಸೇರಿದ್ದಾರೆ. ಬೆಂಗಳೂರಿನಲ್ಲಿ ರೂಂ ಮಾಡಿದ್ದ ಜೊತೆಗಿದ್ದವರನ್ನೂ ಬಂಧಿಸಲಾಗಿದೆ. ಆಶ್ರಯ ನೀಡಿದ ಆರೋಪದಲ್ಲಿ ರೂಂಮೇಟ್ ಗಳ ಬಂಧಿಸಿದ್ದು ತಪ್ಪು ಎಂದು ಎಸ್ಡಿಪಿಐ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ದ.ಕ. ಜಿಲ್ಲಾ ಎಸ್ಡಿಪಿಐ ಕಾರ್ಯದರ್ಶಿ ಅನ್ವರ್ ಬಜತ್ತೂರು, ಸಮಾವೇಶದ ಮುನ್ನವೇ ಆ ಘೋಷಣೆ ಕೂಗಲಾಗಿತ್ತು. ವೀಡಿಯೋ ರಾತ್ರಿ ವೇಳೆ ವೈರಲ್ ಆಗಿತ್ತು. ಆದರೆ ಪೊಲೀಸರು ತಮ್ಮ ಮೇಲೂ ವಾಹನ ಹಾಯಿಸಲು ಯತ್ನಿಸಿದ್ದಾಗಿ ಆರೋಪಿಸಿದ್ದಾರೆ. SDPI ಬೆಳವಣಿಗೆ ಸಹಿಸದೇ ಸಂಘ ಪರಿವಾರದ ಅಣತಿಯಂತೆ ಪೊಲೀಸರು ವರ್ತಿಸುತ್ತಿದ್ದಾರೆ. ಜಗದೀಶ್ ಕಾರಂತ ಈ ಹಿಂದೆ ಹಲವು ಬಾರಿ ಪೊಲೀಸರಿಗೆ, ಡಿಸಿ ಗೆ ಬಹಿರಂಗ ಧಮ್ಕಿ ಹಾಕಿದ್ದರು. ಆಗ ಕಾರಂತ ಬಂಧಿಸಲು ಇಲ್ಲಿನ ಪೊಲೀಸರಿಗೆ ಸಾಧ್ಯವಾಗಿಲ್ಲ. ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಮೋದ್ ಮುತಾಲಿಕ್ ಗೆ ಪೊಲೀಸ್ ಆಯುಕ್ತರು ರಾಜಾತಿಥ್ಯ ನೀಡಿದ್ದನ್ನು ಖಂಡಿಸಿ SDPI ನಾಯಕರು ಪೋಸ್ಟ್ ಮಾಡಿದ್ದರು. ಅಂದಿನಿಂದ SDPI ಹತ್ತಿಕ್ಕಲು ಪೊಲೀಸ್ ಇಲಾಖೆ ಮುಂದಾಗಿದೆ. ಇದು ಪೊಲೀಸ್ ಆಯುಕ್ತರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.

ಪೊಲೀಸರ ಈ ರೀತಿಯ ವರ್ತನೆ ವಿರುದ್ಧ SDPI ಕಾನೂನು ಹೋರಾಟ ಮಾಡಲಿದೆ. ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಿದೆ. ಘೋಷಣೆ ಕೂಗಿದವರನ್ನು ಆರೋಪಿಗಳೆಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಘಟನೆ ಸಂಬಂಧಪಡದವರನ್ನು ಬಂಧಿಸಿದ್ದು ಎಷ್ಟು ಸರಿ. ಸಂಘ ಪರಿವಾರವರನ್ನು ತೃಪ್ತಿ ಪಡಿಸಲು ಈ ರೀತಿ ಮಾಡಲಾಗಿದೆ ಎನ್ನುವ ಅನುಮಾನ ಇದೆ. ಇದರ ಹಿಂದೆ ಇಲ್ಲಿನ ಶಾಸಕ, ಸಂಸದರ ಕೈವಾಡವೂ ಇದೆ ಎಂದು ಆರೋಪಿಸಿದರು.
Mangalore Police have targeted SDPI, unknown youths are arrested in Abusing case slams SDPI today at a press meet held at their office.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm