ಬ್ರೇಕಿಂಗ್ ನ್ಯೂಸ್
04-06-22 11:22 am Mangalore Correspondent ಕರಾವಳಿ
ಉಳ್ಳಾಲ, ಜೂ.4: ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ವೃದ್ಧರೋರ್ವರಿಗೆ ಇಬ್ಬರು ಚಿಟ್ ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದು, ಹಣ ಕೇಳಿ ಸುಸ್ತಾದ ವೃದ್ಧ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮಾಡೂರು ಶಾಲೆ ಬಳಿ ನಡೆದಿದೆ.
ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆ ಬಳಿಯ ನಿವಾಸಿ ಜಯರಾಮ ಶೆಟ್ಟಿ(71) ಆತ್ಮಹತ್ಯೆಗೈದ ದುರ್ದೈವಿ. ಜಯರಾಮ ಅವರು ಇಂದು ಬೆಳಗ್ಗೆ ಮನೆಯ ಕೋಣೆಯೊಳಗೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತ್ನಿ ಲೀನಾ ಜೆ ಶೆಟ್ಟಿ ಅವರು ಬೆಳಗ್ಗೆ ಚಹಾ ಕೊಡಲೆಂದು ಹೋಗುವಾಗ ಪ್ರಕರಣ ಬೆಳಕಿಗೆ ಬಂದಿದೆ.
ಜಯರಾಮ್ ಶೆಟ್ಟಿ ಅವರು ಮಾಡೂರು ಬಸ್ಸು ತಂಗುದಾಣದ ಬಳಿಯ ಪಂಚಾಯತ್ ಕಟ್ಟಡದ ಅಂಗಡಿಯಲ್ಲಿ ಸೀಯಾಳ ವ್ಯಾಪಾರಿಯಾಗಿದ್ದು , ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರಂತೆ. ಕೊಟ್ಟವನು ಕೋಡಂಗಿ, ಇಸ್ಕೊಂಡವನು ವೀರಭದ್ರ ಎಂಬಂತೆ ಜಯರಾಮ್ ಶೆಟ್ಟಿ ಅವರ ಚಿಟ್ ಫಂಡ್ ಹಣ ಇಸ್ಕೊಂಡವರು ಹಣ ಮರಳಿಸದೆ ಮೋಸ ಮಾಡಿದ್ದರಂತೆ. ಇದರಿಂದ ಜಯರಾಮ ಶೆಟ್ಟಿ ಅವರು ನಷ್ಟ ಅನುಭವಿಸಿದ್ದು ಅದರ ಚಿಂತೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿರುವುದಾಗಿ ಅವರ ಪತ್ನಿ ಲೀನಾ ಪೊಲೀಸರಿಗೆ ದೂರು ನೀಡಿದ್ದಾರೆ.
ಜಯರಾಮ್ ಶೆಟ್ಟಿ ಅವರ ಪತ್ನಿ ಲೀನಾ ಜೆ ಶೆಟ್ಟಿ ಅವರು ಕೋಟೆಕಾರು ಪಂಚಾಯತ್ ಮಾಜಿ ಸದಸ್ಯರಾಗಿದ್ದಾರೆ. ಮೃತ ಜಯರಾಮ್ ಅವರು ಪತ್ನಿ, ಮೂರು ಪುತ್ರಿಯರು, ಮೊಮ್ಮಕ್ಕಳನ್ನ ಅಗಲಿದ್ದಾರೆ. ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
Mangalore 71 year old man commits suicide due to loss in chit fund finance at Maduru in Ullal. The deceased has been identified as Jayaram Shetty (71)
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am