ಬ್ರೇಕಿಂಗ್ ನ್ಯೂಸ್
04-06-22 01:18 pm Mangalore Correspondent ಕರಾವಳಿ
ಮಂಗಳೂರು, ಜೂನ್ 4 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಅಪ್ಪ - ಮಗಳು ಸಾವನ್ನಪ್ಪಿದ ಘಟನೆ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ (62) ಮತ್ತು ಅವರ ಪುತ್ರಿ ಅಶ್ವಿನಿ (29) ಮೃತರು. ಪುಂಡಲೀಕಪ್ಪ ಅವರಿಗೆ ಅನಾರೋಗ್ಯ ಇದ್ದುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿ ಮಂಗಳೂರಿಗೆ ಕರೆತರಲಾಗುತ್ತಿತ್ತು.
ವ್ಯಾಗನಾರ್ ಕಾರಿನಲ್ಲಿ ಕುಟುಂಬ ಸಮೇತ ಜೂನ್ 2ರ ರಾತ್ರಿ ಹೊರಟಿದ್ದು ಮರುದಿನ ನಸುಕಿನ ಜಾವ ಕಾರು ಮೂಡುಬಿದ್ರೆ ಮೂಲಕ ಮಂಗಳೂರಿಗೆ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಅಶ್ವಿನಿ ಅವರಿಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪುಂಡಲೀಕ ಅವರನ್ನು ಅಲ್ಲಿಂದ ಬೇರೆ ಕಾರಿನಲ್ಲಿ ಆಸ್ಪತ್ರೆಗೆ ಒಯ್ಯುವ ಮಧ್ಯೆ ಸಾವನ್ನಪ್ಪಿದ್ದಾರೆ. ಅಶ್ವಿನಿ ಪತಿ ಸಂತೋಷ್, ಪುತ್ರಿ ಶ್ರೇಯಾ, ತಾಯಿ ಪುಷ್ಪಾ, ಕಾರು ಚಾಲಕ ಸೊಹೈಲ್ ಗಾಯಗೊಂಡಿದ್ದಾರೆ. ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
Two people died when the car in which they were travelling crashed against a tree on the June 2 near A K Urdu school near Sooralpady of Ganjimutt on NH 169. The deceased are identified as Ashwini (29) and her father Pundalikappa (62), natives of Ranebennur. Ashiwni’s husband Santhosh, daughter Shreya, mother Pushpa and car driver Sohail, who suffered injuries, are recovering.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
08-02-26 10:10 pm
HK News Desk
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm