ಬ್ರೇಕಿಂಗ್ ನ್ಯೂಸ್
04-06-22 01:18 pm Mangalore Correspondent ಕರಾವಳಿ
ಮಂಗಳೂರು, ಜೂನ್ 4 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಅಪ್ಪ - ಮಗಳು ಸಾವನ್ನಪ್ಪಿದ ಘಟನೆ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ (62) ಮತ್ತು ಅವರ ಪುತ್ರಿ ಅಶ್ವಿನಿ (29) ಮೃತರು. ಪುಂಡಲೀಕಪ್ಪ ಅವರಿಗೆ ಅನಾರೋಗ್ಯ ಇದ್ದುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿ ಮಂಗಳೂರಿಗೆ ಕರೆತರಲಾಗುತ್ತಿತ್ತು.
ವ್ಯಾಗನಾರ್ ಕಾರಿನಲ್ಲಿ ಕುಟುಂಬ ಸಮೇತ ಜೂನ್ 2ರ ರಾತ್ರಿ ಹೊರಟಿದ್ದು ಮರುದಿನ ನಸುಕಿನ ಜಾವ ಕಾರು ಮೂಡುಬಿದ್ರೆ ಮೂಲಕ ಮಂಗಳೂರಿಗೆ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಅಶ್ವಿನಿ ಅವರಿಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪುಂಡಲೀಕ ಅವರನ್ನು ಅಲ್ಲಿಂದ ಬೇರೆ ಕಾರಿನಲ್ಲಿ ಆಸ್ಪತ್ರೆಗೆ ಒಯ್ಯುವ ಮಧ್ಯೆ ಸಾವನ್ನಪ್ಪಿದ್ದಾರೆ. ಅಶ್ವಿನಿ ಪತಿ ಸಂತೋಷ್, ಪುತ್ರಿ ಶ್ರೇಯಾ, ತಾಯಿ ಪುಷ್ಪಾ, ಕಾರು ಚಾಲಕ ಸೊಹೈಲ್ ಗಾಯಗೊಂಡಿದ್ದಾರೆ. ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
Two people died when the car in which they were travelling crashed against a tree on the June 2 near A K Urdu school near Sooralpady of Ganjimutt on NH 169. The deceased are identified as Ashwini (29) and her father Pundalikappa (62), natives of Ranebennur. Ashiwni’s husband Santhosh, daughter Shreya, mother Pushpa and car driver Sohail, who suffered injuries, are recovering.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am