ಬ್ರೇಕಿಂಗ್ ನ್ಯೂಸ್
28-09-20 03:24 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮಟ್ಟಿಗೆ ಖಾಸಗಿ ಸಾರಿಗೆಯೇ ಜೀವಾಳ. ಆದರೆ, ಲಾಕ್ಡೌನ್ ನಿಂದಾಗಿ ಕರಾವಳಿಯಲ್ಲಿ ಖಾಸಗಿ ಸಾರಿಗೆ ಉದ್ಯಮವೇ ನೆಲಕಚ್ಚಿದೆ. ಆರು ತಿಂಗಳ ಕಾಲ ಬಸ್ ಗಳನ್ನು ರಸ್ತೆಗೆ ಇಳಿಸದೆ ಕಾರ್ಮಿಕರಿಗೆ ಸಂಬಳ ಕೊಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದರು. ಈಗ ಲಾಕ್ಡೌನ್ ಓಪನ್ ಆದ್ರೂ ಉದ್ಯಮಿಗಳು ಸಂಕಷ್ಟದಿಂದ ಚೇತರಿಸಿಕೊಂಡಿಲ್ಲ.
ಲಾಕ್ಡೌನ್ ಆದ್ರೂ ಸರ್ಕಾರ ಸಾರಿಗೆ ಬಸ್ ಗಳ ತೆರಿಗೆ ವಿನಾಯಿತಿ ಮಾಡಿಲ್ಲ. ಅಲ್ಲದೆ, ಇದೇ ವೇಳೆ, ಡೀಸೆಲ್ ಬೆಲೆ ಈಗ ಐದು ತಿಂಗಳಲ್ಲಿ ಲೀಟರ್ಗೆ 12 ರೂ.ನಷ್ಟು ಏರಿಕೆಯಾಗಿದೆ. ಲಾಕ್ಡೌನ್ ಬಳಿಕ ಎರಡೂ ಜಿಲ್ಲೆಗಳಲ್ಲಿ ಎಲ್ಲ ರೀತಿಯ ಬಸ್ಗಳ ಸಂಚಾರ ಸ್ಥಗಿತಗೊಂಡಿತ್ತು. ಜೂನ್ 1ರಿಂದ ಹಂತ ಹಂತವಾಗಿ ಬಸ್ ಗಳನ್ನು ರಸ್ತೆಗೆ ಇಳಿಸಿದರೂ ಪ್ರಯಾಣಿಕರ ಸಂಖ್ಯೆ ಕಡಿಮೆ. ಇನ್ನೊಂದೆಡೆ ಡೀಸೆಲ್ ದರ ಏರಿಕೆಯಿಂದಾಗಿ ಲೆಕ್ಕಕ್ಕೇ ಸಿಗುತ್ತಿಲ್ಲ ಎನ್ನುತ್ತಾರೆ ಬಸ್ ಮಾಲೀಕರು.

ಮಂಗಳೂರು- ಉಡುಪಿ -ಕುಂದಾಪುರ ರೂಟ್ನಲ್ಲಿ ಸದ್ಯಕ್ಕೆ 70 ಬಸ್ ಗಳು ಓಡಾಡುತ್ತಿವೆ. ಬೆಳಗ್ಗೆ ಮತ್ತು ಸಂಜೆ ಮಾತ್ರ ಪ್ರಯಾಣಿಕರು ಇರುತ್ತಾರೆ. ಇದರಿಂದ ಟ್ರಿಪ್ ನಿರ್ವಹಣೆ ಕಷ್ಟವಾಗುತ್ತಿದೆ. ಎಕ್ಸ್ ಪ್ರೆಸ್/ಸರ್ವೀಸ್ ಬಸ್ಗಳ ಪೈಕಿ ಶೇ.30 ಬಸ್ ಗಳು ಮಾತ್ರ ರಸ್ತೆಗಳಿದಿರುವುದು. ಹೀಗಾಗಿ ಶೇ.70ರಷ್ಟು ಬಸ್ಗಳು ನಿಂತಲ್ಲೇ ಇವೆ. ಮಂಗಳೂರಿನ ಒಟ್ಟು 325 ಸಿಟಿ ಬಸ್ಗಳಲ್ಲಿ 275ರಷ್ಟು ರಸ್ತೆಗೆ ಇಳಿದಿದ್ದರೆ, ಉಡುಪಿಯಲ್ಲಿ 85 ಸಿಟಿ ಬಸ್ಗಳ ಪೈಕಿ 35 ಬಸ್ಗಳು ರಸ್ತೆಗಿಳಿದಿಲ್ಲ. ಇದೇ ವೇಳೆ, ಬಸ್ ಮಾಲೀಕರ ಸಂಘದವರು ರಾಜ್ಯ ಸಾರಿಗೆ ಸಚಿವರನ್ನು ಭೇಟಿಯಾಗಿ ತೆರಿಗೆ ವಿನಾಯಿತಿ ನೀಡಲು ಕೋರಿದ್ದಾರೆ. ಆಟೋ ಚಾಲಕರಿಗೆ ನೀಡಿರುವಂತೆ ಖಾಸಗಿ ಬಸ್ ಸಿಬ್ಬಂದಿಗೂ ನೆರವಾಗಲು ಮನವಿ ಮಾಡಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm