ಬ್ರೇಕಿಂಗ್ ನ್ಯೂಸ್
07-06-22 06:07 pm Mangalore Correspondent ಕರಾವಳಿ
ಪುತ್ತೂರು, ಜೂನ್ 7: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿಚಾರ ಅಹಿತಕರ ಘಟನೆಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಲು ಪಟ್ಟು ಹಿಡಿದ 24 ಮಂದಿ ವಿದ್ಯಾರ್ಥಿನಿಯರನ್ನು ಒಂದು ವಾರ ಕಾಲ ಕಾಲೇಜಿಗೆ ಬರದಂತೆ ನಿರ್ಬಂಧ ವಿಧಿಸಲಾಗಿದೆ.
ಕಾಲೇಜಿನಲ್ಲಿ ಕಳೆದ ವಾರ ಎರಡು ಗುಂಪುಗಳ ನಡುವೆ ಘೋಷಣೆ ವಿನಿಮಯ ಆಗಿರುವುದು, ಸುದ್ದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವುದು, ಈ ವಿಚಾರದಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ಪರಸ್ಪರ ಕೇಸು ದಾಖಲಾಗಿರುವುದು ಇತ್ಯಾದಿ ಬೆಳವಣಿಗೆ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಅಧಿಕಾರಿಯೊಬ್ಬರು ಕಾಲೇಜಿಗೆ ಬಂದಿದ್ದರು. ಅಲ್ಲದೆ, ವಿದ್ಯಾರ್ಥಿನಿಯರ ಜೊತೆಗೆ ಮಾತುಕತೆ ನಡೆಸಿ, ಹಿಜಾಬ್ ನಿಷೇಧದ ಬಗ್ಗೆ ಮನವರಿಕೆ ಮಾಡಲು ಯತ್ನಿಸಿದ್ದಾರೆ.
ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸಿಲ್ಲ. ಶೈಕ್ಷಣಿಕ ವರ್ಷದ ನಡುವೆ ಹಿಜಾಬ್ ಹೇರಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ತರಗತಿ ಹೊರಗಿನ ಡ್ರೆಸ್ಸಿಂಗ್ ರೂಮಿನಲ್ಲಿ ಉಳಿಯುವುದಕ್ಕೂ ಕಾಲೇಜಿನ ಆಡಳಿತ ನಿರ್ಬಂಧ ವಿಧಿಸಿತ್ತು. ಸೋಮವಾರ ದಿನವಿಡೀ ಪ್ರಹಸನದ ಬಳಿಕ ಸಂಜೆ ವೇಳೆಗೆ ಕಾಲೇಜಿನ ಉಪನ್ಯಾಸಕರ ಸಭೆ ಕರೆದ ಪ್ರಾಂಶುಪಾಲ ಶೇಖರ್ ಎಂ.ಬಿ., ಸರಕಾರದ ಸುತ್ತೋಲೆ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ನಿರ್ಣಯದ ಆಧಾರದಲ್ಲಿ ಕಾಲೇಜಿನ ಸಮವಸ್ತ್ರ ನಿಯಮವನ್ನು ಉಲ್ಲಂಘಿಸಿದ್ದಲ್ಲದೆ, ಶೈಕ್ಷಣಿಕ ವಾತಾವರಣ ಹಾಳು ಮಾಡುತ್ತಿರುವುದಕ್ಕಾಗಿ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲ ಕಾಲೇಜು ಪ್ರವೇಶ ನಿರ್ಬಂಧಿಸಿ ನಿರ್ಣಯ ಕೈಗೊಂಡಿದ್ದಾರೆ. ಇದೇ ವಿವಾದಕ್ಕೆ ಸಂಬಂಧಿಸಿ ಈ ಹಿಂದೆ ಏಳು ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ಇದೀಗ ಒಂದು ವಾರದ ನಿರ್ಬಂಧ ವಿಧಿಸಿ ಚಾಟಿ ಬೀಸಿದ್ದಾರೆ.
Twenty-four students studying in a college in Karnataka's Dakshina Kannada district were on Tuesday banned for a period of seven days from attending classes for wearing Hijab.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am