ಬ್ರೇಕಿಂಗ್ ನ್ಯೂಸ್
07-06-22 06:07 pm Mangalore Correspondent ಕರಾವಳಿ
ಪುತ್ತೂರು, ಜೂನ್ 7: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿಚಾರ ಅಹಿತಕರ ಘಟನೆಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಲು ಪಟ್ಟು ಹಿಡಿದ 24 ಮಂದಿ ವಿದ್ಯಾರ್ಥಿನಿಯರನ್ನು ಒಂದು ವಾರ ಕಾಲ ಕಾಲೇಜಿಗೆ ಬರದಂತೆ ನಿರ್ಬಂಧ ವಿಧಿಸಲಾಗಿದೆ.
ಕಾಲೇಜಿನಲ್ಲಿ ಕಳೆದ ವಾರ ಎರಡು ಗುಂಪುಗಳ ನಡುವೆ ಘೋಷಣೆ ವಿನಿಮಯ ಆಗಿರುವುದು, ಸುದ್ದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವುದು, ಈ ವಿಚಾರದಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ಪರಸ್ಪರ ಕೇಸು ದಾಖಲಾಗಿರುವುದು ಇತ್ಯಾದಿ ಬೆಳವಣಿಗೆ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಅಧಿಕಾರಿಯೊಬ್ಬರು ಕಾಲೇಜಿಗೆ ಬಂದಿದ್ದರು. ಅಲ್ಲದೆ, ವಿದ್ಯಾರ್ಥಿನಿಯರ ಜೊತೆಗೆ ಮಾತುಕತೆ ನಡೆಸಿ, ಹಿಜಾಬ್ ನಿಷೇಧದ ಬಗ್ಗೆ ಮನವರಿಕೆ ಮಾಡಲು ಯತ್ನಿಸಿದ್ದಾರೆ.
ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸಿಲ್ಲ. ಶೈಕ್ಷಣಿಕ ವರ್ಷದ ನಡುವೆ ಹಿಜಾಬ್ ಹೇರಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ತರಗತಿ ಹೊರಗಿನ ಡ್ರೆಸ್ಸಿಂಗ್ ರೂಮಿನಲ್ಲಿ ಉಳಿಯುವುದಕ್ಕೂ ಕಾಲೇಜಿನ ಆಡಳಿತ ನಿರ್ಬಂಧ ವಿಧಿಸಿತ್ತು. ಸೋಮವಾರ ದಿನವಿಡೀ ಪ್ರಹಸನದ ಬಳಿಕ ಸಂಜೆ ವೇಳೆಗೆ ಕಾಲೇಜಿನ ಉಪನ್ಯಾಸಕರ ಸಭೆ ಕರೆದ ಪ್ರಾಂಶುಪಾಲ ಶೇಖರ್ ಎಂ.ಬಿ., ಸರಕಾರದ ಸುತ್ತೋಲೆ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ನಿರ್ಣಯದ ಆಧಾರದಲ್ಲಿ ಕಾಲೇಜಿನ ಸಮವಸ್ತ್ರ ನಿಯಮವನ್ನು ಉಲ್ಲಂಘಿಸಿದ್ದಲ್ಲದೆ, ಶೈಕ್ಷಣಿಕ ವಾತಾವರಣ ಹಾಳು ಮಾಡುತ್ತಿರುವುದಕ್ಕಾಗಿ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲ ಕಾಲೇಜು ಪ್ರವೇಶ ನಿರ್ಬಂಧಿಸಿ ನಿರ್ಣಯ ಕೈಗೊಂಡಿದ್ದಾರೆ. ಇದೇ ವಿವಾದಕ್ಕೆ ಸಂಬಂಧಿಸಿ ಈ ಹಿಂದೆ ಏಳು ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ಇದೀಗ ಒಂದು ವಾರದ ನಿರ್ಬಂಧ ವಿಧಿಸಿ ಚಾಟಿ ಬೀಸಿದ್ದಾರೆ.
Twenty-four students studying in a college in Karnataka's Dakshina Kannada district were on Tuesday banned for a period of seven days from attending classes for wearing Hijab.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm