ಬ್ರೇಕಿಂಗ್ ನ್ಯೂಸ್
28-09-20 07:51 pm Mangaluru Correspondent ಕರಾವಳಿ
ಸುರತ್ಕಲ್, ಸೆಪ್ಟಂಬರ್ 28: ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಜನರನ್ನು ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆರ್ ಟಿ ಸಿ ಸಹಿತ ದಾಖಲೆಗಳಿಗಾಗಿ ಸತಾಯಿಸುತ್ತಿದ್ದಾರೆ ಎಂಬ ಜನರ ದೂರಿಗೆ ಸ್ಪಂದಿಸಿ ಶಾಸಕರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ದಾಖಲೆ ನೀಡದೆ ಜನರಿಗೆ ಸತಾಯಿಸುತ್ತಿದ್ದೀರಾ... ಜನಪ್ರತಿನಿಧಿಯಾಗಿ ನನಗೆ ಜನರ ಕರೆ ಬರುತ್ತಿದೆ. ಏನು ಮಾಡುತ್ತಿದ್ದೀರಿ, ಒಂದೋ ಕೆಲಸ ಮಾಡಿಸಿ, ಇಲ್ಲದಿದ್ದರೆ ಕೆಲಸ ಮಾಡದವರನ್ನು ತೆಗೆದುಹಾಕಿ ಎಂದು ತಹಶೀಲ್ದಾರ್ ಗುರುಪ್ರಸಾದ್ ಅವರನ್ನು ತರಾಟೆಗೆತ್ತಿಕೊಂಡರು. ಕಚೇರಿಯಲ್ಲಿ ಇಷ್ಟು ಜನ ಇದ್ದರೂ ತಿಂಗಳುಗಟ್ಟಲೆ ಏಕೆ ಸತಾಯಿಸುತ್ತಿದ್ದೀರಿ, ಕಡತ ಯಾಕೆ ವಿಲೇವಾರಿ ಆಗುತ್ತಿಲ್ಲ, ಕಾರಣ ಕೊಡಿ ಎಂದು ಪ್ರಶ್ನೆ ಮಾಡಿದರು.

ರೆಕಾರ್ಡ್ ರೂಂನಲ್ಲಿ ನಾಲ್ಕು ಜನ ಕೆಲಸಕ್ಕೆ ಇದ್ದಾರೆ. ಕೆಲಸಕ್ಕೆ ಸಿಬಂದಿ ಇದ್ದರೂ 5-6 ತಿಂಗಳ ಕಾಲ ಕೆಲಸ ಆಗದಿದ್ದರೆ ಹೇಗೆ.. ಹೀಗೆಯೇ ಮುಂದುವರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಇದೇ ಸಂದರ್ಭ ಮಿನಿ ವಿಧಾನ ಸೌಧದಲ್ಲಿರುವ ವಿವಾಹ ನೋಂದಣಿ ಹಾಗೂ ಭೂದಾಖಲೆ ಪತ್ರಗಳ ರೆಕಾರ್ಡ್ ರೂಮಿಗೂ, ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Join our WhatsApp group for latest news updates (2)
video
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm