ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm