ಬ್ರೇಕಿಂಗ್ ನ್ಯೂಸ್
09-06-22 06:28 pm Mangalore Correspondent ಕರಾವಳಿ
ಪುತ್ತೂರು, ಜೂನ್ 9 : ಹಿಜಾಬ್ ಹೋರಾಟದಿಂದ ಸುದ್ದಿಯಾಗಿದ್ದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆ ಗೋಚರಿಸಿದ್ದು, ಇತ್ತೀಚೆಗೆ ಅಮಾನತುಗೊಂಡವರು ಸೇರಿದಂತೆ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ ಬದಿಗಿಟ್ಟು ತರಗತಿಗೆ ಹಾಜರಾಗಿದ್ದಾರೆ.
ಸೋಮವಾರದಿಂದ 24 ವಿದ್ಯಾರ್ಥಿನಿಯರ ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರೂ ವಾರದ ಹಿಂದೆ ಅಮಾನತುಗೊಂಡ ವಿದ್ಯಾರ್ಥಿನಿಯರು ಸೇರಿ ಹಲವರು ಕಾಲೇಜಿಗೆ ಬಂದು ತರಗತಿಗೆ ಪ್ರವೇಶಿಸಲು ಯತ್ನಿಸಿದ ಬೆನ್ನಲ್ಲೇ ಎಲ್ಲ ವಿದ್ಯಾರ್ಥಿನಿಯರ ಹೆತ್ತವರಿಗೆ ಕಾಲೇಜಿನಿಂದ ಮಾಹಿತಿ ನೀಡಲಾಯಿತು. ಬಹುತೇಕ ಹೆತ್ತವರು ತಮ್ಮ ಮಕ್ಕಳು ಹಿಜಾಬ್ ಹೋರಾಟದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿಯೇ ಇಲ್ಲವೆಂದು ತಿಳಿಸಿದ್ದು ವಿಶೇಷವಾಗಿತ್ತು.

ಅಮಾನತಾಗಿದ್ದ ಆರು ಮಂದಿ ತರಗತಿಗೆ ಹಾಜರು
ವಾರದ ಮೊದಲು ಅಮಾನತಾಗಿದ್ದ ಆರು ವಿದ್ಯಾರ್ಥಿನಿಯರು ಬುಧವಾರ ಕಾಲೇಜಿಗೆ ಆಗಮಿಸಿ ಸಮವಸ್ತ್ರ ನಿಯಮಾವಳಿಯನ್ನು ಪಾಲಿಸುವುದಾಗಿ ಮುಚ್ಚಳಿಕೆ ಬರೆದು ಕೊಟ್ಟು ತರಗತಿಗೆ ಬಂದಿದ್ದಾರೆ. ಇದೇ ವೇಳೆ, ಪ್ರತಿಭಟನೆಗು ಹಾಜರಾಗದೆ, ಕಾಲೇಜಿಗೂ ಬರದೆ ದೂರ ಉಳಿದಿದ್ದ 11 ಮಂದಿ ವಿದ್ಯಾರ್ಥಿನಿಯರು ಕೂಡ ತರಗತಿಗೆ ಹಾಜರಾಗಿದ್ದಾರೆ. ಇದರಿಂದಾಗಿ ಒಟ್ಟು 101 ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಹೊಂದಿರುವ ಕಾಲೇಜಿನಲ್ಲಿ ಬುಧವಾರ 46 ಮಂದಿ ಸಮವಸ್ತ್ರ ನಿಯಮ ಪಾಲನೆಯೊಂದಿಗೆ ತರಗತಿ ಪ್ರವೇಶಿಸಿದ್ದಾರೆ.

ಎರಡು ದಿನಗಳ ಹಿಂದೆ ಹಿಜಾಬ್ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಶಾಸಕ ಯು.ಟಿ.ಖಾದರ್ ಮಾರ್ಮಿಕ ಮಾತುಗಳನ್ನು ಹೇಳಿದ್ದರು. ಇದರ ಕಾರಣವೋ ಏನೋ ದಿಢೀರ್ ಆಗಿ ಹಿಜಾಬ್ ಹೋರಾಟ ನಡೆಸುತ್ತಿರುವ ಮಂದಿ ಮನಸ್ಸು ಬದಲಾಯಿಸಿದ್ದಾರೆ. ಪ್ರತಿಭಟನೆಯ ಕಾರಣ ತರಗತಿಗೆ ಗೈರು ಹಾಜರಾಗಿದ್ದ ಉಳಿದ ವಿದ್ಯಾರ್ಥಿನಿಯರು ಕೂಡ ಕಾಲೇಜಿಗೆ ಆಗಮಿಸುವ ಭರವಸೆಯನ್ನು ಉಪನ್ಯಾಸಕರು ವ್ಯಕ್ತಪಡಿಸಿದ್ದಾರೆ.
ಉಪ್ಪಿನಂಗಡಿ ; ಹಿಜಾಬ್ ಪಟ್ಟುಹಿಡಿದ ಮತ್ತೆ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲೇಜಿಗೆ ನಿರ್ಬಂಧ
ಹಿಜಾಬ್ ಹೋರಾಟ ಮಾಡೋರು ಸೌದಿ, ಪಾಕಿಸ್ತಾನಕ್ಕೆ ಹೋಗಿ ಬರಬೇಕು, ಅಲ್ಲಿ ಹೇಗಿದೆ ಅಂತ ತಿಳ್ಕೊಂಡು ಬರಲಿ!
Uppinangady Hijab row, Khaders statement goes viral, 46 students attend class without Hijab.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm