ಬ್ರೇಕಿಂಗ್ ನ್ಯೂಸ್
09-06-22 06:28 pm Mangalore Correspondent ಕರಾವಳಿ
ಪುತ್ತೂರು, ಜೂನ್ 9 : ಹಿಜಾಬ್ ಹೋರಾಟದಿಂದ ಸುದ್ದಿಯಾಗಿದ್ದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆ ಗೋಚರಿಸಿದ್ದು, ಇತ್ತೀಚೆಗೆ ಅಮಾನತುಗೊಂಡವರು ಸೇರಿದಂತೆ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ ಬದಿಗಿಟ್ಟು ತರಗತಿಗೆ ಹಾಜರಾಗಿದ್ದಾರೆ.
ಸೋಮವಾರದಿಂದ 24 ವಿದ್ಯಾರ್ಥಿನಿಯರ ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರೂ ವಾರದ ಹಿಂದೆ ಅಮಾನತುಗೊಂಡ ವಿದ್ಯಾರ್ಥಿನಿಯರು ಸೇರಿ ಹಲವರು ಕಾಲೇಜಿಗೆ ಬಂದು ತರಗತಿಗೆ ಪ್ರವೇಶಿಸಲು ಯತ್ನಿಸಿದ ಬೆನ್ನಲ್ಲೇ ಎಲ್ಲ ವಿದ್ಯಾರ್ಥಿನಿಯರ ಹೆತ್ತವರಿಗೆ ಕಾಲೇಜಿನಿಂದ ಮಾಹಿತಿ ನೀಡಲಾಯಿತು. ಬಹುತೇಕ ಹೆತ್ತವರು ತಮ್ಮ ಮಕ್ಕಳು ಹಿಜಾಬ್ ಹೋರಾಟದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿಯೇ ಇಲ್ಲವೆಂದು ತಿಳಿಸಿದ್ದು ವಿಶೇಷವಾಗಿತ್ತು.
ಅಮಾನತಾಗಿದ್ದ ಆರು ಮಂದಿ ತರಗತಿಗೆ ಹಾಜರು
ವಾರದ ಮೊದಲು ಅಮಾನತಾಗಿದ್ದ ಆರು ವಿದ್ಯಾರ್ಥಿನಿಯರು ಬುಧವಾರ ಕಾಲೇಜಿಗೆ ಆಗಮಿಸಿ ಸಮವಸ್ತ್ರ ನಿಯಮಾವಳಿಯನ್ನು ಪಾಲಿಸುವುದಾಗಿ ಮುಚ್ಚಳಿಕೆ ಬರೆದು ಕೊಟ್ಟು ತರಗತಿಗೆ ಬಂದಿದ್ದಾರೆ. ಇದೇ ವೇಳೆ, ಪ್ರತಿಭಟನೆಗು ಹಾಜರಾಗದೆ, ಕಾಲೇಜಿಗೂ ಬರದೆ ದೂರ ಉಳಿದಿದ್ದ 11 ಮಂದಿ ವಿದ್ಯಾರ್ಥಿನಿಯರು ಕೂಡ ತರಗತಿಗೆ ಹಾಜರಾಗಿದ್ದಾರೆ. ಇದರಿಂದಾಗಿ ಒಟ್ಟು 101 ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಹೊಂದಿರುವ ಕಾಲೇಜಿನಲ್ಲಿ ಬುಧವಾರ 46 ಮಂದಿ ಸಮವಸ್ತ್ರ ನಿಯಮ ಪಾಲನೆಯೊಂದಿಗೆ ತರಗತಿ ಪ್ರವೇಶಿಸಿದ್ದಾರೆ.
ಎರಡು ದಿನಗಳ ಹಿಂದೆ ಹಿಜಾಬ್ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಶಾಸಕ ಯು.ಟಿ.ಖಾದರ್ ಮಾರ್ಮಿಕ ಮಾತುಗಳನ್ನು ಹೇಳಿದ್ದರು. ಇದರ ಕಾರಣವೋ ಏನೋ ದಿಢೀರ್ ಆಗಿ ಹಿಜಾಬ್ ಹೋರಾಟ ನಡೆಸುತ್ತಿರುವ ಮಂದಿ ಮನಸ್ಸು ಬದಲಾಯಿಸಿದ್ದಾರೆ. ಪ್ರತಿಭಟನೆಯ ಕಾರಣ ತರಗತಿಗೆ ಗೈರು ಹಾಜರಾಗಿದ್ದ ಉಳಿದ ವಿದ್ಯಾರ್ಥಿನಿಯರು ಕೂಡ ಕಾಲೇಜಿಗೆ ಆಗಮಿಸುವ ಭರವಸೆಯನ್ನು ಉಪನ್ಯಾಸಕರು ವ್ಯಕ್ತಪಡಿಸಿದ್ದಾರೆ.
ಉಪ್ಪಿನಂಗಡಿ ; ಹಿಜಾಬ್ ಪಟ್ಟುಹಿಡಿದ ಮತ್ತೆ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲೇಜಿಗೆ ನಿರ್ಬಂಧ
ಹಿಜಾಬ್ ಹೋರಾಟ ಮಾಡೋರು ಸೌದಿ, ಪಾಕಿಸ್ತಾನಕ್ಕೆ ಹೋಗಿ ಬರಬೇಕು, ಅಲ್ಲಿ ಹೇಗಿದೆ ಅಂತ ತಿಳ್ಕೊಂಡು ಬರಲಿ!
Uppinangady Hijab row, Khaders statement goes viral, 46 students attend class without Hijab.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm