ಬ್ರೇಕಿಂಗ್ ನ್ಯೂಸ್
29-09-20 01:10 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 29: ಕೋವಿಡ್ 19 ಲಾಕ್ಡೌನ್ ಮತ್ತು ಅನ್ಲಾಕ್ ನಂತರವೂ ಬಹುತೇಕ ಜನರು ಹೊಸ ಕಾರು ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ಹಳೆ ಕಾರುಗಳಿಗೆ ಒಮ್ಮೆಲೇ ಡಿಮ್ಯಾಂಡ್ ಹೆಚ್ಚಿದೆ.
ಮಾರುಕಟ್ಟೆಯಲ್ಲಿ ಐದು ಲಕ್ಷದೊಳಗಿನ ಹಳೆ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಹಳೆಯ ಕಾರುಗಳ ಕೊರತೆ ಉಂಟಾಗಿದ್ದು ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಎರಡು ಲಕ್ಷದೊಳಗಿನ ಕಾರುಗಳಿಗಂತೂ ಭಾರೀ ಬೇಡಿಕೆ ಬಂದಿದೆ. 3 ರಿಂದ 5 ಲಕ್ಷದ ವರೆಗಿನ ಕಾರುಗಳಿಗೂ ಬೇಡಿಕೆ ಇದ್ದು ಬಹುತೇಕ ಜನರು ಈ ಬಗ್ಗೆ ವಿಚಾರಿಸುತ್ತಿದ್ದಾರೆ.

ಹಳೆ ಕಾರುಗಳನ್ನು ಸಾಧಾರಣ ಬೆಂಗಳೂರಿನಿಂದಲೇ ಹೆಚ್ಚಾಗಿ ತರಿಸಿಕೊಳ್ಳುತ್ತಿದ್ದೇವೆ. ಆದರೆ ಅಲ್ಲಿಯೂ ಕಾರುಗಳನ್ನು ಮಾರುವುದಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಹಳೆಯ ಕಾರುಗಳ ಪೂರೈಕೆ ನಿಂತು ಹೋಗಿದೆ ಎಂದು ಹಳೆಯ ಕಾರುಗಳ ಏಜೆಂಟ್ ಒಬ್ಬರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಸಲು ಪ್ರಯಾಣಿಕರು ಹಿಂಜರಿಯುತ್ತಿದ್ದಾರೆ. ಬದಲಿಗೆ ಸಣ್ಣ ಕಾರು ಇದ್ದರೆ ಆಗಬಹುದು ಎಂದು ಹುಡುಕಾಟದಲ್ಲಿ ತೊಡಗಿದ್ದಾರೆ. ಇದರಿಂದಾಗಿ ಹಳೆ ಕಾರುಗಳಿಗೆ ಬೇಡಿಕೆ ಕಂಡುಬಂದಿದೆ. ಇಎಂಐ ಪಾವತಿಸಲು ಸಾಧ್ಯವಾಗದ ಜನರು ಮಾತ್ರ ಕಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹೊಸ ಕಾರು ಖರೀದಿಗಾಗಿ ಯಾರು ಮುಂದಾಗುತ್ತಿಲ್ಲ ಎನ್ನುವುದು ಕಾರ್ ಡೀಲರ್ ಒಬ್ಬರ ಮಾತು.
ಕಾರುಗಳ ಜೊತೆಗೆ ಹಳೆಯ ಬೈಕ್ ಗಳಿಗೂ ಬೇಡಿಕೆ ಹೆಚ್ಚಿದೆ. ಕಳೆದ ತಿಂಗಳು ಬೈಕ್ ಡೀಲರ್ ಗಳ ಬಳಿ ನೋಂದಣಿ ಮಾಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇದರಿಂದಾಗಿ ಸ್ಕ್ರಾಪ್ ಹೋಗಿದ್ದ ಬೈಕ್ ಗಳನ್ನೂ ಗ್ಯಾರೇಜ್ ಗಳಲ್ಲಿ ದುರಸ್ತಿ ಮಾಡಿ ಮಾರಾಟಕ್ಕೆ ಸಿದ್ಧಗೊಳಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am